Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ʼಅಭಿವೃದ್ಧಿʼ ಕಾರ್ಯಗಳಿಗಾಗಿ...

ಗುಜರಾತ್: ʼಅಭಿವೃದ್ಧಿʼ ಕಾರ್ಯಗಳಿಗಾಗಿ 16,000 ಹೆಕ್ಟೇರ್ ಭೂಮಿಯನ್ನು ಕಳೆದುಕೊಂಡ ಬುಡಕಟ್ಟು ಜನರು

ವಾರ್ತಾಭಾರತಿವಾರ್ತಾಭಾರತಿ15 Aug 2023 6:23 PM IST
share
ಗುಜರಾತ್: ʼಅಭಿವೃದ್ಧಿʼ ಕಾರ್ಯಗಳಿಗಾಗಿ 16,000 ಹೆಕ್ಟೇರ್ ಭೂಮಿಯನ್ನು ಕಳೆದುಕೊಂಡ ಬುಡಕಟ್ಟು ಜನರು

ಅಹಮದಾಬಾದ್: ಗುಜರಾತ್ ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನ್ವಯ ಭೂಮಿ ಪಟ್ಟಾ/ಹಕ್ಕಿಗಾಗಿ ಅರ್ಜಿ ಸಲ್ಲಿಸಿದ್ದ 1,82,869 ಬುಡಕಟ್ಟು ಜನರ ಪೈಕಿ 57,054 ಅರ್ಜಿಗಳನ್ನು ವಿವಿಧ ಆಡಳಿತ ಇಲಾಖೆಗಳು ತಳ್ಳಿ ಹಾಕಿವೆ ಎಂದು newindianexpress.com ವರದಿ ಮಾಡಿದೆ.

ಬುಡಕಟ್ಟು ಜನರು ಅರಣ್ಯ ಪ್ರದೇಶದಲ್ಲಿ ಮೊದಲ ಹಕ್ಕು ಪ್ರಸ್ತಾಪ ಸಲ್ಲಿಸಿದ್ದ ಒಟ್ಟು 16,070.58 ಹೆಕ್ಟೇರ್ ಭೂಮಿಯನ್ನು ಅರಣ್ಯ ಸಂರಕ್ಷಣಾ ಕಾಯ್ದೆ, 1980ರ ಅಡಿ ವಿವಿಧ ಅಭಿವೃದ್ಧಿ ಅಗತ್ಯಗಳಿಗಾಗಿ ವರ್ಗಾಯಿಸಲಾಗಿದೆ.

ಪರಿಹಾರಾತ್ಮಕ ಅರಣ್ಯೀಕರಣ ಯೋಜನೆಯಡಿ ಅರಣ್ಯ ಬೆಳೆಸಲು 10,832.3 ಹೆಕ್ಟೇರ್ ಗಳಷ್ಟು ಭೂಮಿಯನ್ನು ನೀಡಲಾಗಿದೆ. ಇದರಿಂದ ಗುಜರಾತ್ ನಲ್ಲಿ ಬಳಕೆಯಾಗಿರುವ ಅರಣ್ಯ ಪ್ರದೇಶಕ್ಕೆ ಹೋಲಿಸಿದರೆ, 5,238.28 ಹೆಕ್ಟೇರ್ ಗಳಷ್ಟು ಭೂಮಿ ನೀಡಿಕೆ ಕಡಿತಗೊಂಡಿರುವುದು ಕಂಡು ಬರುತ್ತದೆ. ಅರಣ್ಯ ಹಕ್ಕು ಕಾಯ್ದೆಯಡಿ ಬುಡಕಟ್ಟು ಜನರು ಭೂಮಿಯ ಪಟ್ಟಾ/ಹಕ್ಕಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಕುರಿತು ಆಗಸ್ಟ್ 8ರಂದು ಕಾಂಗ್ರೆಸ್ ಸಂಸದ ಅಮೀ ಯಾಗ್ನಿಕ್ ರಾಜ್ಯಸಭೆಯಲ್ಲಿ ಪ್ರಶ್ನೆಯೆತ್ತಿದ್ದರು.

ಇದಕ್ಕೆ ಉತ್ತರಿಸಿದ್ದ ಕೇಂದ್ರ ಸರ್ಕಾರವು, ನವೆಂಬರ್ 30, 2022ರವರೆಗೆ 1,82,869 ಮಂದಿಯ ಅರ್ಜಿಯನ್ನು ಸ್ವೀಕರಿಸಲಾಗಿದ್ದು, ಅದೇ ಅವಧಿಯಲ್ಲಿ 57,054 ಮಂದಿಯ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ರಾಜ್ಯ ಕಾಂಗ್ರೆಸ್ ವಕ್ತಾರ ಪಾರ್ಥಿವ್ ರಾಜ್ ಕಥ್ವಾಡಿಯಾ, ಸರ್ಕಾರವು ರಾಜ್ಯದಲ್ಲಿನ 91,183 ಬುಡಕಟ್ಟು ಕುಟುಂಬಗಳಿಗೆ ಅರಣ್ಯ ಹಕ್ಕನ್ನು ವಂಚಿಸಿದೆ ಎಂದು ಆರೋಪಿಸಿದ್ದರು.

ಇದರರ್ಥ, ಅರಣ್ಯ ಭೂಮಿ ಕಾಯ್ದೆ ಅಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ದ ಶೇ. 49.8ರಷ್ಟು ಬುಡಕಟ್ಟು ಜನರಿಗೆ ಅವರ ಹಕ್ಕನ್ನು ನಿರಾಕರಿಸಲಾಗಿದೆ ಎಂದು ಕಥ್ವಾಡಿಯಾ ದೂರಿದ್ದರು. ಈಗಲೂ 34,129 ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿವೆ. ಈ ಕುರಿತು ಪ್ರಸ್ತಾಪಿಸಿರುವ ಕಥ್ವಾಡಿಯಾ, “ಬಿಜೆಪಿಯು ಬುಡಕಟ್ಟು ಜನರಿಗೆ ದೊಡ್ಡ ಭರವಸೆಗಳನ್ನು ಘೋಷಣೆ ಮಾಡುತ್ತದೆ. ಆದರೆ, ವಾಸ್ತವಕ್ಕೆ ಬಂದಾಗ, ಅವರ ಹಕ್ಕನ್ನು ಮಂಜೂರು ಮಾಡದೆ ಬಿಜೆಪಿ ಸರ್ಕಾರವು ಅವರ ಬೆನ್ನಿಗೆ ಇರಿಯುತ್ತದೆ” ಎಂದು ಆರೋಪಿಸಿದ್ದಾರೆ.

ಈ ಅರ್ಜಿಗಳ ತಿರಸ್ಕಾರಕ್ಕೆ ಕಾರಣಗಳನ್ನು ನೀಡಿದ್ದ ಕೇಂದ್ರ ಸರ್ಕಾರವು, “ರಾಜ್ಯ ಸರ್ಕಾರದ ವರದಿಯಂತೆ ಅರ್ಜಿಗಳ ತಿರಸ್ಕಾರಕ್ಕೆ ಇರುವ ಸಾಮಾನ್ಯ ಕಾರಣಗಳಲ್ಲಿ ಡಿಸೆಂಬರ್ 13, 2005ಕ್ಕೂ ಮುಂಚಿತವಾಗಿ ಅರಣ್ಯ ಭೂಮಿಯಲ್ಲಿ ವ್ಯವಸಾಯ ಮಾಡದೆ ಇರುವುದು, ಬಹು ಹಕ್ಕಿನ ಅರ್ಜಿಗಳು ಹಾಗೂ ಸೂಕ್ತ ದಾಖಲಾತಿ ಸಾಕ್ಷಿಗಳ ಕೊರತೆ” ಎಂದು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿತ್ತು.

ಆಗಸ್ಟ್ 7, 2023ರಂದು ಅರಣ್ಯ ಸಂರಕ್ಷಣಾ ಕಾಯ್ದೆ, 1980ರ ಅಡಿ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯಿಂದ ವಿವಿಧ ಯೋಜನೆಗಳಿಗಾಗಿ ವಶಪಡಿಸಿಕೊಂಡಿರುವ ಅರಣ್ಯ ಭೂಮಿಯ ಕುರಿತು ಬಿಜೆಪಿ ಸಂಸದ ವರುಣ್ ಗಾಂಧಿ ಲೋಕಸಭೆಯಲ್ಲಿ ಸರಣಿ ಪ್ರಶ್ನೆಗಳನ್ನು ಕೇಳಿದ್ದರು. ಅದಕ್ಕೆ ಪ್ರತಿಯಾಗಿ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಇಲಾಖೆಯ ಸಚಿವರು ಇಡೀ ದೇಶದ ದತ್ತಾಂಶವನ್ನು ಲೋಕಸಭೆಗೆ ಒದಗಿಸಿದ್ದರು.

ಅದರ ಪ್ರಕಾರ, ಕಳೆದ 15 ವರ್ಷಗಳಲ್ಲಿ ಪರಿಹಾರಾತ್ಮಕ ಅರಣ್ಯೀಕರಣ ಯೋಜನೆಯ ವಿವಿಧ ಪ್ರವರ್ಗಗಳಡಿ ಒಟ್ಟು 16,070.58 ಹೆಕ್ಟೇರ್ ಭೂಮಿಯನ್ನು ವರ್ಗಾಯಿಸಲಾಗಿದೆ. ಬಳಸಿಕೊಳ್ಳಲಾಗಿರುವ ಅರಣ್ಯ ಪ್ರದೇಶದ ಭೂಮಿಗೆ ಹೋಲಿಸಿದರೆ 2008ರಿಂದ 2022-23ರವರೆಗೆ ಪರಿಹಾರಾತ್ಮಕ ಅರಣ್ಯೀಕರಣ ಯೋಜನೆಯ ಭಾಗವಾಗಿ 10,832.3 ಹೆಕ್ಟೇರ್ ಭೂಮಿಯನ್ನು ನೀಡಲಾಗಿದ್ದು, ಕಳೆದ 15 ವರ್ಷಗಳಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಗುಜರಾತ್ ನಲ್ಲಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ 16,070.58 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲಾಗಿದೆ.

ಗುಜರಾತ್ ನಲ್ಲಿ ಭೂಮಿ ಕಳೆದುಕೊಂಡಿರುವ ಬುಡಕಟ್ಟು ಜನರು

• 1,82,869 ಬುಡಕಟ್ಟು ಜನರಿಂದ ಭೂಮಿ ಹಕ್ಕಿಗಾಗಿ ಅರ್ಜಿ

• 57,054 ಅರ್ಜಿಗಳು ಸರ್ಕಾರದಿಂದ ವಜಾ

• 5,238.28 ಹೆಕ್ಟೇರ್ ಅರಣ್ಯ ಭೂಮಿ ಬಳಕೆಯಲ್ಲಿ ಕಡಿತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X