Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼನೀವು ಚೇತರಿಸಿಕೊಳ್ಳುತ್ತಿರುವುದು...

ʼನೀವು ಚೇತರಿಸಿಕೊಳ್ಳುತ್ತಿರುವುದು ಸಂತೋಷʼ: ಕಾನ್‌ಸ್ಟೇಬಲ್ ಮೃತಪಟ್ಟು 42 ದಿನಗಳ ನಂತರ ಆಯುಷ್ಮಾನ್ ಭಾರತ್ ಸಂದೇಶ!

ವಾರ್ತಾಭಾರತಿವಾರ್ತಾಭಾರತಿ12 Aug 2026 5:13 PM IST
share
ʼನೀವು ಚೇತರಿಸಿಕೊಳ್ಳುತ್ತಿರುವುದು ಸಂತೋಷʼ: ಕಾನ್‌ಸ್ಟೇಬಲ್ ಮೃತಪಟ್ಟು 42 ದಿನಗಳ ನಂತರ ಆಯುಷ್ಮಾನ್ ಭಾರತ್ ಸಂದೇಶ!

ರಾಯ್ಪುರ: ಛತ್ತೀಸ್‌ಗಢದಲ್ಲಿ 42 ದಿನಗಳ ಹಿಂದೆ ಮೃತಪಟ್ಟಿದ್ದ ಪೊಲೀಸ್ ಕಾನ್ಸ್ಟೇಬಲ್‌ವೊಬ್ಬರ ಮೊಬೈಲ್‌ಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ವ್ಯವಸ್ಥೆಯಲ್ಲಿ “ಚೇತರಿಸಿಕೊಳ್ಳುತ್ತಿರುವುದು ಸಂತೋಷʼ ಎಂಬ ಸಂದೇಶ ಬಂದಿರುವುದು ಕುಟುಂಬಸ್ಥರಲ್ಲಿ ಅಚ್ಚರಿ ಮೂಡಿಸಿರುವುದಲ್ಲದೆ ಚರ್ಚೆಗೆ ಗ್ರಾಸವಾಗಿದೆ.

ದೇವ್ ನಾರಾಯಣ್ ರಾಮ್ ಎಂಬ ಕಾನ್ಸ್ಟೇಬಲ್ ಮೃತಪಟ್ಟ ಬಳಿಕ ಅವರ ಅಂತ್ಯಕ್ರಿಯೆಯನ್ನು ನಡೆಸಲಾಗಿತ್ತು ಮತ್ತು ಮರಣ ಪ್ರಮಾಣಪತ್ರವನ್ನೂ ಪಡೆಯಲಾಗಿತ್ತು. ಆದರೆ, ಪತಿಯ ಸಾವಿನ ದುಃಖದಲ್ಲಿದ್ದ ಅವರ ಪತ್ನಿ ಸೀಮಾ ಕುಜೂರ್ ಅವರಿಗೆ ಪತಿಯ ಮೊಬೈಲ್‌ಗೆ ಬಂದ ವಾಟ್ಸಾಪ್ ಸಂದೇಶವೊಂದು ಅಚ್ಚರಿ ಮೂಡಿಸಿದೆ.

ಸಂದೇಶದಲ್ಲೇನಿತ್ತು?

“ಪ್ರಿಯ ದೇವ್ ನಾರಾಯಣ್ ರಾಮ್, ನೀವು ಚೇತರಿಸಿಕೊಂಡು ಮನೆಗೆ ತೆರಳುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಅಡಿಯಲ್ಲಿ ಉಚಿತವಾಗಿ ನೀಡಲಾಗುತ್ತಿರುವ ಆರೋಗ್ಯ ಸೇವೆಗಳಿಂದ ನೀವು ತೃಪ್ತರಾಗಿದ್ದೀರಿ ಎಂದು ನಾವು ಭಾವಿಸುತ್ತೇವೆ” ಎಂದು ಸಂದೇಶದಲ್ಲಿ ತಿಳಿಸಲಾಗಿತ್ತು.

ಈ ಸಂದೇಶ ಹೇಗೆ ಬಂದಿತು ಎಂಬುದನ್ನು ಪ್ರಶ್ನಿಸಿರುವ ಸೀಮಾ ಕುಜೂರ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಕಾನ್ಸ್ಟೆಬಲ್ ದೇವ್ ನಾರಾಯಣ್ ರಾಮ್, ಜೂನ್ 26 ರಂದು ಸುರ್ಗುಜಾದ ಅಂಬಿಕಾಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕು ದಿನಗಳ ನಂತರ ಜೂನ್ 30 ರಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದರು. ಕಾನ್ಸ್ಟೆಬಲ್ ಮೃತಪಟ್ಟ 42 ದಿನಗಳ ಬಳಿಕ ಬಂದ ಈ ಸಂದೇಶವು ರೋಗಿಗಳ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ನವೀಕರಿಸಲಾಗುತ್ತಿದೆಯೇ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ್ದಲ್ಲದೆ ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯಗಳನ್ನು ಅಕ್ರಮವಾಗಿ ಪಡೆಯಲಾಗುತ್ತಿದೆಯಾ ಎಂಬ ಅನುಮಾನಕ್ಕೂ ಕಾರಣವಾಗಿದೆ.

"ನನ್ನ ಪತಿ ಅಂಬಿಕಾಪುರ ವೈದ್ಯಕೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ನಾವು ಅವರ ಅಂತ್ಯಕ್ರಿಯೆಯನ್ನು ಮಾಡಿದ್ದೇವೆ ಮತ್ತು ಈಗ, 42 ದಿನಗಳ ನಂತರ, ಅವರು ಚೇತರಿಸಿಕೊಂಡು ಮನೆಗೆ ಮರಳುತ್ತಿದ್ದಾರೆ ಎಂದು ನಮಗೆ ಸಂದೇಶಗಳು ಬರುತ್ತಿವೆ. ಅಂತಹ ದೊಡ್ಡ ತಾಂತ್ರಿಕ ದೋಷ ಹೇಗೆ ಸಂಭವಿಸಬಹುದು? ಈ ಬಗ್ಗೆ ತನಿಖೆಯಾಗಬೇಕು” ಎಂದು ಸೀಮಾ ಕುಜೂರ್ ಆಗ್ರಹಿಸಿದ್ದಾರೆ.

ತಾನು ಕೂಡ ಆಸ್ಪತ್ರೆಯ ಉದ್ಯೋಗಿಯಾಗಿದ್ದು, ರೋಗಿಗಳ ದಾಖಲೆಗಳನ್ನು ನಿಖರವಾಗಿ ನಿರ್ವಹಿಸುವ ಮಹತ್ವ ತಿಳಿದಿದೆ. ಹೀಗಿರುವಾಗ ಇಂತಹ ಘಟನೆ ನಡೆದಿರುವುದು ಮತ್ತಷ್ಟು ಆತಂಕ ಮೂಡಿಸಿದೆ ಎಂದು ಅವರು ಹೇಳಿದ್ದಾರೆ.

‘ನನಗೆ ಇಂತಹ ಘಟನೆ ಸಂಭವಿಸಿದರೆ, ಸಾಮಾನ್ಯ ಜನರು ಮತ್ತು ಬಡ ಬುಡಕಟ್ಟು ಸಮುದಾಯದವರ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಊಹಿಸಬಹುದು’ ಎಂದು ಸೀಮಾ ಹೇಳಿದ್ದಾರೆ.

ಆಸ್ಪತ್ರೆ ಹೇಳಿದ್ದೇನು?

ನಾರಾಯಣ್ ಮೃತಪಟ್ಟ ಬಳಿಕ ಅವರ ಚಿಕಿತ್ಸೆಗೆಂದು ಯಾವುದೇ ಹಣವನ್ನು ಪಡೆದಿಲ್ಲ. ರೋಗಿಯ ದಾಖಲೆಗಳನ್ನು ಮುಚ್ಚುವಲ್ಲಿ ಡೇಟಾ ಎಂಟ್ರಿ ಆಪರೇಟರ್‌ನಿಂದ ಉಂಟಾದ ವಿಳಂಬದಿಂದ ಈ ಸಮಸ್ಯೆ ಸಂಭವಿಸಿದೆ ಎಂದು ಅಂಬಿಕಾಪುರ ವೈದ್ಯಕೀಯ ಆಸ್ಪತ್ರೆ ತಿಳಿಸಿದೆ.

ಅಂಬಿಕಾಪುರ ಮೆಡಿಕಲ್ ಆಸ್ಪತ್ರೆಯ ಡಾ. ಶೈಲೇಂದ್ರ ಗುಪ್ತಾ ಈ ಬಗ್ಗೆ ಪ್ರತಿಕ್ರಿಯಿಸಿ ದೇವ್ ನಾರಾಯಣ್ ಅವರು ಆಸ್ಪತ್ರೆಗೆ ದಾಖಲಾಗಿ ಆಯುಷ್ಮಾನ್ ಕಾರ್ಡ್ ಯೋಜನೆಯಡಿ ಚಿಕಿತ್ಸೆ ಪಡೆದಿರುವುದನ್ನು ಖಚಿತಪಡಿಸಿದ್ದಾರೆ. ಆದರೆ 42 ದಿನಗಳ ಕಾಲ ಆಯುಷ್ಮಾನ್ ಕಾರ್ಡ್ ಬಳಕೆಯಾಗಿದೆ ಎಂಬ ಕುಟುಂಬದ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ದೇವ್ ನಾರಾಯಣ್ ಜೂನ್ 26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 30ರಂದು ಮೃತಪಟ್ಟಿದ್ದಾರೆ. ನಾಲ್ಕು ದಿನಗಳ ಚಿಕಿತ್ಸೆಗೆ ಸಂಬಂಧಿಸಿದ ಮೊತ್ತವನ್ನು ಮಾತ್ರ ಆಯುಷ್ಮಾನ್ ಯೋಜನೆಯಡಿ ಕಡಿತ ಮಾಡಲಾಗಿದೆ. ಅವರ ನಿಧನದ ಬಳಿಕ ಯಾವುದೇ ಹೆಚ್ಚುವರಿ ಮೊತ್ತವನ್ನು ಕಡಿತ ಮಾಡಿಲ್ಲ ಎಂದು ಶೈಲೇಂದ್ರ ಗುಪ್ತಾ ಹೇಳಿದ್ದಾರೆ.

Tags

Ayushman BharatAmbikapur Medical College Hospital
share
ವಾರ್ತಾಭಾರತಿ
ವಾರ್ತಾಭಾರತಿ
Next Story
X