Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಂಟೂರಿನಲ್ಲಿ ಭಾರಿ ಮಳೆ: ಭೂಕುಸಿತಕ್ಕೆ...

ಗುಂಟೂರಿನಲ್ಲಿ ಭಾರಿ ಮಳೆ: ಭೂಕುಸಿತಕ್ಕೆ ಐವರು ಬಲಿ, 3 ಮಂದಿ ನೀರುಪಾಲು

ವಾರ್ತಾಭಾರತಿವಾರ್ತಾಭಾರತಿ1 Sept 2024 7:38 AM IST
share
  • ಗುಂಟೂರಿನಲ್ಲಿ ಭಾರಿ ಮಳೆ: ಭೂಕುಸಿತಕ್ಕೆ ಐವರು ಬಲಿ, 3 ಮಂದಿ ನೀರುಪಾಲು

    PC: x.com/YoursHari_B

  • ಗುಂಟೂರಿನಲ್ಲಿ ಭಾರಿ ಮಳೆ: ಭೂಕುಸಿತಕ್ಕೆ ಐವರು ಬಲಿ, 3 ಮಂದಿ ನೀರುಪಾಲು

    PC: x.com/NewsMeter_In

ಗುಂಟೂರು: ಆಂಧ್ರಪ್ರದೇಶದ ವಿಜಯವಾಡ ನಗರದಲ್ಲಿ ವ್ಯಾಪಕ ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದ್ದು, ಈ ಘಟನೆಯಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟಿದ್ದಾರೆ. ಗುಂಟೂರು ಜಿಲ್ಲೆಯ ಹಳ್ಳದಲ್ಲಿ ಕಾರು ಕೊಚ್ಚಿಕೊಂಡು ಹೋಗಿ ಸಂಭವಿಸಿದ ಮತ್ತೊಂದು ದುರಂತದಲ್ಲಿ ಮೂವರು ನೀರುಪಾಲಾಗಿದ್ದಾರೆ.

ವಿಜಯವಾಡ ಪಟ್ಟಣದ ಕೇಂದ್ರಭಾಗದಲ್ಲಿರುವ ಮೊಘಲ್ ರಾಜಪುರಂ ಕಾಲೋನಿಯ ಸುಣ್ಣಪುಬಟ್ಟಿ ಎಂಬಲ್ಲಿ ಭೂಕುಸಿತ ಸಂಭವಿಸಿದೆ. ಬೆಟ್ಟದಿಂದ ಉರುಳಿದ ಬೃಹತ್ ಬಂಡೆಯೊಂದು ಮನೆಗಳನ್ನು ಧ್ವಂಸಗೊಳಿಸಿದೆ. ಒಂದು ಮನೆ ಸಂಪೂರ್ಣ ಧ್ವಂಸವಾಗಿದ್ದು, ಒಳಗಿದ್ದ ನಾಲ್ಕು ಮಂದಿ ಜೀವ ಕಳೆದುಕೊಂಡಿದ್ದಾರೆ. ಇತರ ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದುರಂತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಪೌರಾಯುಕ್ತ ಎಚ್.ಎಂ.ಧ್ಯಾನಚಂದ್ರ ಸ್ಪಷ್ಟಪಡಿಸಿದ್ದಾರೆ.

ಪೊಲೀಸರು, ಕಂದಾಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ ಭಾರಿ ಮಳೆ, ತ್ವರಿತ ಕಾರ್ಯಾಚರಣೆಗೆ ತಡೆ ಉಂಟುಮಾಡಿದೆ. ಹಾನಿಗೀಡಾಗಿರುವ ಮನೆಗಳು ಬೆಟ್ಟಕ್ಕೆ ತೀರಾ ಸನಿಹದಲ್ಲಿದ್ದು, ಮತ್ತಷ್ಟು ಭೂಕುಸಿತದ ಭೀತಿ ಇದೆ" ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರನ್ನು ಎಂ.ಮೇಘನಾ (25), ಬೋಲೆಮ್ ಲಕ್ಷ್ಮಿ (49), ಲಾಲು (20) ಮತ್ತು ಅನ್ನಪೂರ್ಣ (55) ಎಂದು ಗುರುತಿಸಲಾಗಿದೆ. ಮೇಘನಾ ದೇಹವನ್ನು ಅವಶೇಷಗಳಡಿಯಿಂದ ಮೊದಲು ಹೊರತೆಗೆಯಲಾಯಿತು. ಉಳಿದ ಮೂವರ ಮೃತದೇಹಗಳನ್ನು ಹೊರತೆಗೆಯಲು ಎಂಟು ಗಂಟೆ ಬೇಕಾಯಿತು. ಮಧ್ಯಾಹ್ನ ಬಳಿಕ ಮತ್ತೊಂದು ಕುಸಿತ ಸಂಭವಿಸಿದ್ದು, ಪರಿಹಾರ ಕಾರ್ಯಾಚರಣೆಗೆ ತಡೆಯುಂಟಾಯಿತು. ಇತರ ಆರು ಮಂದಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತೊಂದು ಘಟನೆಯಲ್ಲಿ ಶಾಲಾ ಶಿಕ್ಷಕರೊಬ್ಬರು ಹಾಗೂ ಇಬ್ಬರು ವಿದ್ಯಾರ್ಥಿಗಳು ಗುಂಟೂರು ಜಿಲ್ಲೆ ಪಡೆಕಕಾನಿ ತಾಲೂಕು ಉಪ್ಪಲಪಡು ಎಂಬ ಗ್ರಾಮದಲ್ಲಿ ತೊರೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ನಡುಂಪಲ್ಲಿ ರಾಘವೇಂದ್ರ ತಮ್ಮ ಮನೆಗೆ ಇಬ್ಬರು ವಿದ್ಯಾರ್ಥಿಗಳಾದ ಪಶುಪುಲೇಟಿ ಶೌರೀಶ್ (6) ಮತ್ತು ಕೊಂಡೂರಿ ಮನ್ವಿತ್ (9) ಎಂಬವರ ಜತೆ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X