Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಹಲ್ಗಾಮ್ ಭಯೋತ್ಪಾದಕ ದಾಳಿ ವೇಳೆ...

ಪಹಲ್ಗಾಮ್ ಭಯೋತ್ಪಾದಕ ದಾಳಿ ವೇಳೆ ಪರಾರಿಯಾಗಲು ಪ್ರಯತ್ನಿಸದೆ ಪ್ರವಾಸಿಗಳ ರಕ್ಷಣೆಗೆ ಮುಂದಾದ ಹದಿಹರೆಯದ ಸೋದರಿಯರು!

ಭಯಭೀತರಾಗಿದ್ದ ಪ್ರವಾಸಿಗರಿಗೆ ಭರವಸೆ ತುಂಬಿದ್ದ ರುಬೀನಾ, ಮಮ್ತಾಝ್

ವಾರ್ತಾಭಾರತಿವಾರ್ತಾಭಾರತಿ26 April 2025 7:12 PM IST
share
ಪಹಲ್ಗಾಮ್ ಭಯೋತ್ಪಾದಕ ದಾಳಿ ವೇಳೆ ಪರಾರಿಯಾಗಲು ಪ್ರಯತ್ನಿಸದೆ ಪ್ರವಾಸಿಗಳ ರಕ್ಷಣೆಗೆ ಮುಂದಾದ ಹದಿಹರೆಯದ ಸೋದರಿಯರು!

ಪಹಲ್ಗಾಮ್: ಜಮ್ಮುಕಾಶ್ಮೀರದ ಪಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾಲಿನ ಎತ್ತರದ ಪ್ರದೇಶದಲ್ಲಿಯ ಮುರುಕಲು ಮಣ್ಣಿನ ಮನೆಯು ಅಚಲ ಧೈರ್ಯದ ಸಂಕೇತವಾಗಿ ನಿಂತಿದೆ. ಹುಲ್ಲುಗಾವಲಿನಲ್ಲಿ ಪ್ರವಾಸಿಗಳ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ ನಡೆಯುತ್ತಿದ್ದಾಗ ಈ ಮನೆಯ ಇಬ್ಬರು ಹದಿಹರೆಯದ ಸೋದರಿಯರು ತಪ್ಪಿಸಿಕೊಳ್ಳಲು ಪ್ರಯತ್ನಿಸದೆ ಪ್ರವಾಸಿಗಳ ರಕ್ಷಣೆಗೆ ಮುಂದಾಗಿದ್ದರು.

ಗುಜ್ಜರ್-ಬಕರ್ವಾಲ್ ಸಮುದಾಯದ ರುಬೀನಾ(14) ಮತ್ತು ಮಮ್ತಾಝ್(16) ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಅನಿರೀಕ್ಷಿತ ರಕ್ಷಕರಾಗಿ ಮೂಡಿ ಬಂದಿದ್ದರು. ಈ ದಾಳಿಯಲ್ಲಿ 26 ಜನರು ಕೊಲ್ಲಲ್ಪಟ್ಟಿದ್ದಾರೆ.

ಭಯೋತ್ಪಾದಕರು ದಿಢೀರನೆ ಕಾಣಿಸಿಕೊಂಡಾಗ ಪ್ರದೇಶದಲ್ಲಿ ಭೀತಿ ಆವರಿಸಿತ್ತು. ಪ್ರವಾಸಿಗರು ಭಯದಿಂದ ದಿಕ್ಕಾಪಾಲಾಗಿ ಚದುರಿದ್ದರು. ಇಂತಹ ಸಂದರ್ಭದಲ್ಲಿ ಈ ಸಹೋದರಿಯರು ಪಲಾಯನ ಮಾಡದಿರಲು ನಿರ್ಧರಿಸಿದ್ದರು.

ಪಾದದ ಮೂಳೆ ಮುರಿದಿದ್ದರೂ ಅದನ್ನು ಲೆಕ್ಕಿಸದೆ ಮಮ್ತಾಝ್ ಪ್ರವಾಸಿಗಳ ಮಗುವನ್ನು ಸುರಕ್ಷಿತ ಸ್ಥಳಕ್ಕೆ ಹೊತ್ತೊಯ್ದಿದ್ದಳು. ಸೋದರಿಯರಿಬ್ಬರೂ ಸೇರಿಕೊಂಡು ಚೆನ್ನೈನ ದಂಪತಿಯನ್ನು ರಕ್ಷಿಸಿದ್ದರು ಮತ್ತು ಇತರ ಅನೇಕರು ಕಲ್ಲುಬಂಡೆಗಳ ಮಾರ್ಗದ ನಡುವೆ ಸುರಕ್ಷಿತ ಸ್ಥಳಕ್ಕೆ ತೆರಳಲು ನೆರವಾಗಿದ್ದರು. ಅವರಿಗೆಲ್ಲ ತಮ್ಮ ಮನೆಯಲ್ಲಿ ಆಶ್ರಯ ಮತ್ತು ನೀರು ನೀಡಿದ್ದರು, ಅವರಲ್ಲಿ ಭರವಸೆಯನ್ನು ಮೂಡಿಸಿದ್ದರು.

‘ಆ ಸಮಯದಲ್ಲಿ ನಾವು ನಮ್ಮ ಬಗ್ಗೆ ಯೋಚಿಸಿರಲಿಲ್ಲ’ ಎಂದು ‘ಕಾಶ್ಮೀರದ ಮೊಲದ ಹುಡುಗಿ’ಎಂದೇ ಹೆಸರಾಗಿರುವ ರುಬೀನಾ ಹೇಳಿದಳು. ರುಬೀನಾ ಪ್ರವಾಸಿಗಳಿಂದ ಕೆಲವು ರೂಪಾಯಿಗಳನ್ನು ಪಡೆದುಕೊಂಡು ತನ್ನ ಮುದ್ದಿನ ಮೊಲದೊಂದಿಗೆ ಚಿತ್ರಗಳನ್ನು ತೆಗೆಸಿಕೊಳ್ಳಲು ಅವರಿಗೆ ಅವಕಾಶ ನೀಡುತ್ತಾಳೆ.

‘ನಾವು ಪ್ರವಾಸಿಗಳ ಬಗ್ಗೆ ಮಾತ್ರ ಯೋಚಿಸಿದ್ದೆವು. ಅವರಿಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ,ಅವರು ಭಯಭೀತರಾಗಿದ್ದರು. ಅವರು ಕೇಳಿದ್ದು ನೆರವು ಮಾತ್ರ’ ಎಂದು ಹೇಳಿದ ರುಬೀನಾ,‘ನಮ್ಮ ಮಣ್ಣಿನ ಮನೆಯಲ್ಲಿ ನಾವು ಅವರಿಗೆ ನೀರು ನೀಡಿದೆವು. ನಾವು ಮೂರು ಸಲ ದಾಳಿ ಸ್ಥಳಕ್ಕೆ ತೆರಳಿದ್ದೆವು. ಪ್ರತಿ ಸಲವೂ ಹೆಚ್ಚು ಜನರು ಓಡುತ್ತಿದ್ದನ್ನು, ಹೆಚ್ಚು ಜನರು ನೆರವಿಗಾಗಿ ಯಾಚಿಸುತ್ತಿರುವುದನ್ನು ನೋಡಿದ್ದೆವು’ ಎಂದಳು.

ಬೈಸರನ್ ಇಕೋ ಪಾರ್ಕ್‌ನಲ್ಲಿ ಮಾರ್ಗದರ್ಶಿ ಮತ್ತು ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ರುಬೀನಾ ದಾಳಿ ಆರಂಭಗೊಳ್ಳುವ ಕೆಲವೇ ಕ್ಷಣಗಳ ಮುನ್ನ ಚೆನ್ನೈನ ದಂಪತಿಯನ್ನು ಕರೆ ತಂದಿದ್ದಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X