Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ಯುದ್ಧ ವಿಮಾನ ಹಾರಿಸಿದ ಮೊದಲ...

ರಫೇಲ್ ಯುದ್ಧ ವಿಮಾನ ಹಾರಿಸಿದ ಮೊದಲ ಭಾರತೀಯ ಹಿಲಾಲ್ ಅಹ್ಮದ್

ಆಪರೇಷನ್ ಸಿಂಧೂರ್ ನಲ್ಲಿ ಪ್ರಮುಖ ಪಾತ್ರ ವಹಿಸಿದ ರಫೇಲ್ ಫೈಟರ್ ಜೆಟ್

ವಾರ್ತಾಭಾರತಿವಾರ್ತಾಭಾರತಿ8 May 2025 12:09 AM IST
share
ರಫೇಲ್ ಯುದ್ಧ ವಿಮಾನ ಹಾರಿಸಿದ ಮೊದಲ ಭಾರತೀಯ ಹಿಲಾಲ್ ಅಹ್ಮದ್

ಹೊಸದಿಲ್ಲಿ: ಭಾರತೀಯ ವಾಯುಪಡೆಯ ಏರ್ ವೈಸ್ ಚೀಫ್ ಮಾರ್ಷಲ್ ಹಿಲಾಲ್ ಅಹ್ಮದ್ ರಫೇಲ್ ಯುದ್ಧ ವಿಮಾನ ಹಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣಗಳ ಮೆಲೆ ನಡೆಸಿದ ಆಪರೇಷನ್ ಸಿಂಧೂರ್ ನಲ್ಲಿ ರಫೇಲ್ ಯುದ್ಧ ವಿಮಾನಗಳು ಪ್ರಮುಖ ಪಾತ್ರ ವಹಿಸಿವೆ ಎಂದು Mathrubhumi ವರದಿ ಮಾಡಿದೆ.

ಕಾಶ್ಮೀರದ ಅನಂತನಾಗ್‌ ಮೂಲದವರಾದ ಏರ್ ಕಮೋಡೋರ್, ಏರ್ ವೈಸ್ ಚೀಫ್ ಮಾರ್ಷಲ್ ಹಿಲಾಲ್ ಅಹ್ಮದ್ ಫ್ರಾನ್ಸ್‌ಗೆ ಭಾರತದ ಏರ್ ಅಟ್ಯಾಚ್ ಆಗಿದ್ದರು. ಜುಲೈ 27, 2020 ರಂದು ಫ್ರಾನ್ಸ್‌ನಿಂದ ಭಾರತಕ್ಕೆ ಬಂದ ರಫೇಲ್ ಜೆಟ್‌ಗಳನ್ನು ನಿರ್ವಹಿಸಿದ ಮೊದಲ ಭಾರತೀಯ ʼಪೈಲೆಟ್ʼ ಹಿಲಾಲ್ ಅಹ್ಮದ್ ಎನಿಸಿಕೊಂಡಿದ್ದಾರೆ. ರಫೇಲ್‌ ಜೆಟ್ಗಳ ಆರಂಭದ ಪಯಣದಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ದೇಶದ ಕಾರ್ಯಾಚರಣೆಯ ಅಗತ್ಯಗಳಿಗೆ ಅನುಗುಣವಾಗಿ ರಫೇಲ್ ಜೆಟ್ ಗಳನ್ನು ಮಾರ್ಪಾಟು ಮಾಡುವಲ್ಲಿ ಅವರು ನಿಕಟವಾಗಿ ಮೇಲ್ವಿಚಾರಣೆ ಮಾಡಿದ್ದರು ಎನ್ನಲಾಗಿದೆ.

3,000 ಗಂಟೆಗಳಿಗೂ ಹೆಚ್ಚು ಅಪಘಾತ ರಹಿತ ಹಾರಾಟದ ಅನುಭವ ಹೊಂದಿರುವ ಹಿಲಾಲ್ ಅಹ್ಮದ್ ಮಿರಾಜ್ 2000 ಮತ್ತು ಮಿಗ್-21 ನಂತಹ ಮುಂಚೂಣಿಯ ಯುದ್ಧ ವಿಮಾನಗಳಲ್ಲೂ ಹಾರಾಟ ನಡೆಸಿದ್ದಾರೆ.

ರಫೇಲ್ ಯುದ್ಧ ವಿಮಾನದಲ್ಲಿನ ʼನಿರ್ವಹಣೆʼಗೆ ಹೆಚ್ಚು ನೆನಪಿನಲ್ಲಿ ಉಳಿಯುವ ಹಿಲಾಲ್ ಅಹ್ಮದ್, ತಮ್ಮ ನಾಯಕತ್ವದ ಮೂಲಕ ಭಾರತೀಯ ವಾಯುಪಡೆಯನ್ನು ಆಧುನೀಕರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ. ಭಾರತೀಯ ವಾಯುಸೇನೆಯ ಅಗತ್ಯಕ್ಕೆ ತಕ್ಕಂತೆ ರಫೇಲ್ ವಿನ್ಯಾಸವನ್ನು ಬದಲಿಸುವ ಮೂಲಕ ಕಠಿಣ ಸವಾಲುಗಳನ್ನು ಎದುರಿಸಲು ಅದನ್ನು ಸಿದ್ಧಗೊಳಿಸಿದ್ದಾರೆ.

ಆಪರೇಷನ್ ಸಿಂಧೂರ್‌ ವೈಮಾನಿಕ ದಾಳಿಯನ್ನು ಕಾರ್ಯಗತಗೊಳಿಸುವಿಕೆಯಲ್ಲಿ ಅವರ ಹೆಸರು ನೇರವಾಗಿ ಎಲ್ಲೂ ಮುನ್ನೆಲೆಗೆ ಬಂದಿಲ್ಲ. ಆದರೆ, ವೈಮಾನಿಕ ದಾಳಿ ಮತ್ತು ಕಾರ್ಯತಂತ್ರದ ರಕ್ಷಣಾ ವ್ಯವಸ್ಥೆಗಳ ಬಗ್ಗೆ ಹಿಲಾಲ್ ಅಹ್ಮದ್ ಅವರ ಆಳವಾದ ಜ್ಞಾನವು ನಿಖರ ಯುದ್ಧ ತಂತ್ರಕ್ಕೆ ಸೇನೆಗೆ ಸಹಾಕಾರಿಯಾಗುತ್ತದೆ ಎಂದು ರಕ್ಷಣಾ ವಲಯದ ವಿಶ್ಲೇಷಕರು ಹೇಳುತ್ತಾರೆ.

Tags

Hilal Ahmed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X