Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐತಿಹಾಸಿಕ ಯುದ್ಧ ಚಿತ್ರ ಸ್ಥಳಾಂತರ;...

ಐತಿಹಾಸಿಕ ಯುದ್ಧ ಚಿತ್ರ ಸ್ಥಳಾಂತರ; ಭುಗಿಲೆದ್ದ ವಿವಾದ

ವಾರ್ತಾಭಾರತಿವಾರ್ತಾಭಾರತಿ17 Dec 2024 11:44 AM IST
share
  • ಐತಿಹಾಸಿಕ ಯುದ್ಧ ಚಿತ್ರ ಸ್ಥಳಾಂತರ; ಭುಗಿಲೆದ್ದ ವಿವಾದ

    PC | timesofindia.indiatimes.com

  • ಐತಿಹಾಸಿಕ ಯುದ್ಧ ಚಿತ್ರ ಸ್ಥಳಾಂತರ; ಭುಗಿಲೆದ್ದ ವಿವಾದ

    PC | timesofindia.indiatimes.com

ಹೊಸದಿಲ್ಲಿ: ಬಾಂಗ್ಲಾದೇಶ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನ ಶರಣಾದ ಐತಿಹಾಸಿಕ ಯುದ್ಧ ಚಿತ್ರವನ್ನು ಸೌತ್ ಬ್ಲಾಕ್‍ನಲ್ಲಿರುವ ಸೇನೆಯ ಮುಖ್ಯಸ್ಥರ ಲಾಂಜ್‍ನಿಂದ ಸ್ಥಳಾಂತರಿಸಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಲವು ಮಂದಿ ನಿವೃತ್ತ ಯೋಧರು ಮತ್ತು ಪ್ರಿಯಾಂಕಾಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಈ ಸ್ಥಳಾಂತರವನ್ನು ವಿರೋಧಿಸಿದ್ದು, ಈ ಆಕರ್ಷಕ ಚಿತ್ರ ದೆಹಲಿ ಕಂಟೋನ್ಮೆಂಟ್‍ನ ಮಾಣಿಕ್‍ಶಾ ಸೆಂಟರ್‍ನಲ್ಲಿ ಸೂಕ್ತ ಜಾಗವನ್ನು ಅಲಂಕರಿಸಲಿದೆ ಎಂದು ಸೇನೆ ಸ್ಪಷ್ಟಪಡಿಸಿದೆ.

ಆಕರ್ಷಕ ಫೋಟೊದ ಮರು ಮುದ್ರಣವು ಪಾಕಿಸ್ತಾನ ಸೇನೆಯ ಲೆಫ್ಟಿನೆಂಟ್ ಜನರಲ್ ಎ.ಎ.ಕೆ ನೈಝಿಯವರು 1971ರ ಡಿಸೆಂಬರ್‍ನಲ್ಲಿ ಶರಣಾಗತಿಗೆ (ಇನ್‍ಸ್ಟ್ರುಮೆಂಟ್ ಆಫ್ ಸರಂಡರ್) ಸಹಿ ಮಾಡುತ್ತಿರುವ ಚಿತ್ರಣವಿದೆ. ಅವ ಪಕ್ಕದಲ್ಲಿ ಲೆಫ್ಟಿನೆಂಟ್ ಜನರಲ್ ಜಗಜೀತ್ ಸಿಂಗ್ ಅರೋರಾ ಮತ್ತು ಇತರರು ನಿಂತಿದ್ದರು. ಈ ಚಿತ್ರ ಸೇನಾ ಮುಖ್ಯಸ್ಥರು ಇಲ್ಲಿಗೆ ಭೇಟಿ ನೀಡುವ ಗಣ್ಯರನ್ನು ಭೇಟಿ ಮಾಡುವ ಲಾಂಜ್ ಅನ್ನು ಹಲವು ವರ್ಷಗಳಿಂದ ಅಲಂಕರಿಸಿತ್ತು.

ಕೆಲ ದಿನಗಳ ಹಿಂದೆ ಇದನ್ನು ಸ್ಥಳಾಂತರಿಸಲಾಗಿದ್ದು, ಇದರ ಬದಲು ಪೂರ್ವ ಲಡಾಖ್ ಮತ್ತು ಹಿಮಚ್ಛಾದಿತ ಪರ್ವತಗಳ ನಡುವಿನ ಪಂಗಾಂಗ್ ತ್ಸೋ ಪ್ರದೇಶದಲ್ಲಿ ಅರ್ಜುನನ ಜತೆಗೆ ಕೃಷ್ಣ ರಥದಲ್ಲಿರುವ ಮತ್ತು ಗರುಡ ಹಾಗೂ ಚಾಣಕ್ಯ ಆಧುನಿಕ ಟ್ಯಾಂಕ್, ರಾಕೆಟ್ ಲಾಂಚರ್‍ಗಳು ಮತ್ತು ದಾಳಿ ಹೆಲಿಕಾಪ್ಟರ್‍ಗಳೊಂದಿಗೆ ಇರುವ ಕರ್ಮಕ್ಷೇತ್ರ ಎಂಬ ಚಿತ್ರವನ್ನು ಇಲ್ಲಿ ಅಳವಡಿಸಲಾಗಿದೆ.

ಆಧುನಿಕ ಚಿತ್ರವು ಸೇನೆಯನ್ನು ಧರ್ಮರಕ್ಷಕ ಮತ್ತು ಮಹಾಭಾರತದ ಬೋಧನೆಯಿಂದ ಪ್ರೇರಿತವಾದ ಸದಾಚಾರದ ಅಪರಿಮಿತ ಬದ್ಧತೆ ಎಂದು ಬಿಂಬಿಸಿದೆ ಮತ್ತು ಇದು ಚಾಣಕ್ಯನ ಕಾರ್ಯತಂತ್ರ ಹಾಗೂ ತತ್ವಶಾಸ್ತ್ರದ ಜ್ಞಾನದಿಂದ ಪ್ರೇರೇಪಿಸಲ್ಪಟ್ಟು, ಸಮಗ್ರ, ತಂತ್ರಜ್ಞಾನಿಕವಾಗಿ ಅತ್ಯಾಧುನಿಕ ಪಡೆ ಎನ್ನುವುದನ್ನು ಬಿಂಬಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಲವು ಮಂದಿ ಮಾಜಿ ಯೋಧರು ಈ ಕ್ರಮವನ್ನು ಖಂಡಿಸಿದ್ದು, ಇದು ಸೇನೆಯ ಇತಿಹಾಸದ ಮೇಲಿನ ದಾಳಿ ಹಾಗೂ 1971ರ ಯುದ್ಧವೀರರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X