Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದಿನ ಸರ್ಕಾರಗಳೇ...

ಹಿಂದಿನ ಸರ್ಕಾರಗಳೇ ಅಧಿಕಾರದಲ್ಲಿದ್ದಿದ್ದರೆ ಹಾಲಿನ ಬೆಲೆ ಲೀಟರ್ ಗೆ ರೂ. 300 ಆಗಿರುತ್ತಿತ್ತು: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ30 July 2023 10:37 PM IST
share
ಹಿಂದಿನ ಸರ್ಕಾರಗಳೇ ಅಧಿಕಾರದಲ್ಲಿದ್ದಿದ್ದರೆ ಹಾಲಿನ ಬೆಲೆ ಲೀಟರ್ ಗೆ ರೂ. 300 ಆಗಿರುತ್ತಿತ್ತು: ಪ್ರಧಾನಿ ಮೋದಿ

ರಾಜ್‍ಕೋಟ್ (ಗುಜರಾತ್): ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಹಿಂದಿನ ಸರ್ಕಾರಗಳೇ ಅಧಿಕಾರದಲ್ಲಿದ್ದಿದ್ದರೆ ಹಣದುಬ್ಬರ ಗಗನಮುಖಿಯಾಗಿರುತ್ತಿತ್ತು ಎಂದು ಆರೋಪಿಸಿದ್ದಾರೆ. ರಾಜ್‍ಕೋಟ್‍ನ ರೇಸ್‍ಕೋರ್ಸ್ ಕ್ರೀಡಾಂಗಣದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಕೋವಿಡ್ ಸಾಂಕ್ರಾಮಿಕ ಹಾಗೂ ಉಕ್ರೇನ್ ಯುದ್ಧದ ಹೊರತಾಗಿಯೂ ಬಿಜೆಪಿ ಸರ್ಕಾರ ಹಣದುಬ್ಬರದ ಏರಿಕೆಯನ್ನು ತಡೆಗಟ್ಟಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ಈ ಹಿಂದಿನ ಸರ್ಕಾರಗಳೇ ಅಧಿಕಾರದಲ್ಲಿದ್ದಿದ್ದರೆ ಹಾಲಿನ ಬೆಲೆ ಲೀಟರ್ ಗೆ ರೂ. 300 ಹಾಗೂ ಬೇಳೆಕಾಳುಗಳ ಬೆಲೆ ಕೆಜಿಗೆ ರೂ. 500 ಆಗಿರುತ್ತಿತ್ತು ಎಂದು ಅವರು ಆರೋಪಿಸಿದ್ದಾರೆ.

ತಮ್ಮ ಸರ್ಕಾರದ ಸಾಧನೆಗಳನ್ನು ಒತ್ತಿ ಹೇಳಿದ ಅವರು, ರೇರಾ ಕಾಯ್ದೆಯು ಲಕ್ಷಾಂತರ ಮಧ್ಯಮ ವರ್ಗದವರನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಜನರು ಒಂದು ಜಿಬಿ ಡೇಟಾಕ್ಕೆ ಸುಮಾರು ರೂ. 300 ಪಾವತಿಸುತ್ತಿದ್ದರು. ಆದರೀಗ 20 ಜಿಬಿ ಡೇಟಾಕ್ಕೆ ಕೇವಲ ರೂ. 300-400 ಪಾವತಿಸುತ್ತಿದ್ದಾರೆ. ಆ ಮೂಲಕ ಜನರು ತಮ್ಮ ಡೇಟಾ ಶುಲ್ಕದಲ್ಲಿ ಸುಮಾರು ರೂ. 5000 ಉಳಿಸಲು ಸಾಧ್ಯವಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ನನ್ನ ಸರ್ಕಾರವು ಮಧ್ಯಮ ವರ್ಗ ಹೆಚ್ಚು ಉಳಿತಾಯ ಮಾಡಲು ನೆರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಮಾತಿಗೆ ನಿದರ್ಶನವಾಗಿ, “ಒಂಬತ್ತು ವರ್ಷಗಳ ಹಿಂದೆ ರೂ. 2 ಲಕ್ಷ ಆದಾಯದ ಮೇಲೆ ಆದಾಯ ತೆರಿಗೆಯನ್ನು ಹೇರಲಾಗುತ್ತಿತ್ತು. ಆದರೀಗ ರೂ. 7 ಲಕ್ಷದವರೆಗೂ ಯಾವುದೇ ಆದಾಯ ತೆರಿಗೆಯಿಲ್ಲ” ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷಗಳ INDIA ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಮುಖಗಳು, ಪಾಪಗಳು, ಅಭ್ಯಾಸಗಳೆಲ್ಲವೂ ಒಂದೇ ಆಗಿದ್ದರೂ ಗುಂಪಿನ ಹೆಸರನ್ನು ಮಾತ್ರ ಬದಲಿಸಲಾಗಿದೆ” ಎಂದು ಟೀಕಿಸಿದ್ದಾರೆ.

“ಈ ದೇಶ ಮುಂದೆ ಸಾಗುತ್ತಿರುವಾಗ ಅದನ್ನು ಕೆಲವರು ಸಹಿಸುತ್ತಿಲ್ಲ.. ಅವರು ಜನರ ಕನಸು ನನಸಾಗುತ್ತಿರುವ ವಾಸ್ತವದಿಂದ ಭ್ರಮನಿರಸನಗೊಂಡಿದ್ದಾರೆ. ಹೀಗಾಗಿಯೇ ಭ್ರಷ್ಟಾಚಾರಿಗಳು ಹಾಗೂ ರಾಜವಂಶಗಳು ತಮ್ಮ ಗುಂಪಿನ ಹೆಸರನ್ನು ಬದಲಿಸಿಕೊಂಡಿವೆ” ಎಂದು ಮೋದಿ ಹರಿಹಾಯ್ದಿದ್ದಾರೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ಗುಜರಾತ್ ಜನರ ಪ್ರಯತ್ನದಿಂದಾಗಿ ಗುಜರಾತ್ ರಾಜ್ಯವಿಂದು ಕಿರು ಜಪಾನ್ ಆಗಿದೆ” ಎಂದು ಹೇಳಿದ್ದಾರೆ.

“ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್ ಕಿರು ಜಪಾನ್ ಆಗಿ ಬದಲಾಗುತ್ತಿದೆ ಎಂದು ಹೇಳಿದ್ದೆ. ಆದರೆ, ಕೆಲವು ವ್ಯಕ್ತಿಗಳು ನನ್ನನ್ನು ಹಾಸ್ಯ ಮಾಡಿದ್ದರು. ಆದರಿಂದು ನೀವದನ್ನು ಪೂರ್ಣಗೊಳಿಸಿದ್ದೀರಿ” ಎಂದು ಅವರು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X