Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸಮರ್ಪಕ ಮುಂಗಾರು ಮಳೆ; ಭಾರಿ ಹವಾಮಾನ...

ಅಸಮರ್ಪಕ ಮುಂಗಾರು ಮಳೆ; ಭಾರಿ ಹವಾಮಾನ ವ್ಯತ್ಯಯಕ್ಕೆ ಮಾನವ ಚಟುವಟಿಕೆಗಳೇ ಕಾರಣ: ತಜ್ಞರ ಅಭಿಮತ

ವಾರ್ತಾಭಾರತಿವಾರ್ತಾಭಾರತಿ30 Sept 2023 8:48 AM IST
share
ಅಸಮರ್ಪಕ ಮುಂಗಾರು ಮಳೆ; ಭಾರಿ ಹವಾಮಾನ ವ್ಯತ್ಯಯಕ್ಕೆ ಮಾನವ ಚಟುವಟಿಕೆಗಳೇ ಕಾರಣ: ತಜ್ಞರ ಅಭಿಮತ

ಹೊಸದಿಲ್ಲಿ: ಪ್ರಸಕ್ತ ವರ್ಷದ ಮುಂಗಾರು ಋತು ಮುಕ್ತಾಯದ ಹಂತಕ್ಕೆ ಬಂದಿದ್ದು, ದೇಶದಲ್ಲಿ ಭಾರಿ ಹವಾಮಾನ ವ್ಯತ್ಯಯಕ್ಕೆ ಈ ಅವಧಿ ಸಾಕ್ಷಿಯಾಗಿದೆ. ಇಡೀ ಮುಂಗಾರಿನಲ್ಲಿ ಮಳೆಯ ಕಣ್ಣುಮುಚ್ಚಾಲೆ ಕಂಡುಬಂದಿದ್ದು, ಜೂನ್ ನಲ್ಲಿ ಶೇಕಡ 9ರಷ್ಟು ಮಳೆ ಅಭಾವ ಸ್ಥಿತಿ ಇದ್ದರೆ, ಜುಲೈ ವೇಳೆಗೆ ಇದು ಶೇಕಡ 13ರಷ್ಟು ಅಧಿಕವಾಗಿತ್ತು. ಆಗಸ್ಟ್ ನಲ್ಲಿ ಮಳೆ ಶೇಕಡ 36ರಷ್ಟು ಕಡಿಮೆಯಾಗಿದ್ದರೆ, ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತ ಶೇಕಡ 13ರಷ್ಟು ಅಧಿಕ ಮಳೆಯಾಗಿದೆ.

ಅಕ್ಟೋಬರ್ ವೇಳೆಗೆ ಮಳೆ ದೇಶಾದ್ಯಂತ ಸಾಮಾನ್ಯವಾಗಿ ಕಡಿಮೆಯಾಗುತ್ತದೆ. ಆದರೆ ದೇಶದಲ್ಲಿ ಮುಂದಿನ ತಿಂಗಳು ಒಂದಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಪ್ರದೇಶ ಕಂಡುಬಂದಿರುವುದು ಮಳೆ ಬಗ್ಗೆ ಒಂದಷ್ಟು ಆಶಾಭಾವನೆ ಮೂಡಿಸಲು ಕಾರಣವಾಗಿದೆ.

ಈ ಬಗೆಯ ವ್ಯತ್ಯಯಕ್ಕೆ ಏನು ಕಾರಣ ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ದಶಕಗಳ ಕಾಲ ಮಾನವ ಚಟುವಟಿಕೆಗಳ ಕಾರಣದಿಂದಾಗಿ ಹವಾಮಾನ ಈ ಹಂತವನ್ನು ಪ್ರವೇಶಿಸಿದೆ ಎನ್ನುವುದು ತಜ್ಞರ ಅಭಿಮತ.

"ಈ ಬಾರಿಯ ಮುಂಗಾರು ಕುತೂಹಲಕಾರಿಯಾಗಿದೆ. ಇದು ಪಠ್ಯಗಳಲ್ಲಿದ್ದ ವಿಧಾನದಲ್ಲಿಲ್ಲ. ಸುಮಾರು ಶೇಕಡ 6ರಷ್ಟು ಮಳೆ ಅಭಾವದ ಸ್ಥಿತಿ ಇರುವ ಸಾಧ್ಯತೆ ಇದ್ದು, ಶೇಖಡ 70ರಷ್ಟು ಜಿಲ್ಲೆಗಳು ಸೌಮ್ಯ ಅಥವಾ ತೀರಾ ಕಠಿಣ ಅನಾವೃಷ್ಟಿ ಸ್ಥಿತಿಯನ್ನು ಕಾಣಲಿವೆ ಎಂದು ಭೂವಿಜ್ಞಾನ ಸಚಿವಾಲಯದ ನಿವೃತ್ತ ಕಾರ್ಯದರ್ಶಿ ಮತ್ತು ಹವಾಮಾನ ವಿಜ್ಞಾನಿ ಎಂ.ರಾಜೀವನ್ ಹೇಳುತ್ತಾರೆ. ಇದಕ್ಕೆ ಜಾಗತಿಕವಾದ ಹವಾಮಾನ ಅಂಶಗಳು ಕಾರಣ ಎನ್ನುವುದು ಅವರ ಅಭಿಪ್ರಾಯ.

ಎಲ್ನಿನೊ ಒಂದಷ್ಟು ಪರಿಣಾಮ ಬೀರಿದೆ. ಆದರೆ ಸೆಪ್ಟೆಂಬರ್ ನಲ್ಲಿ ಇದರ ಛಾಯೆ ಅಷ್ಟಾಗಿ ಪರಿಣಾಮ ಬೀರಿಲ್ಲ. ಯಾವ ಅಂಶಗಳು ಮಳೆಗೆ ಪೂರಕವಾಗಿದೆ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಋಣಾತ್ಮಕ ಫೆಸಿಫಿಕ್ ಡಿಕ್ಯಾಡಲ್ ಆಸಿಲೇಶನ್ (ಪಿಡಿಓ) ಮತ್ತು ಧನಾತ್ಮಕ ಇಂಡಿಯನ್ ಓಶನ್ ಡೈಪೋಲ್ (ಐಓಡಿ), ಅನುಕೂಲಕರ ಜೈಲಿಯನ್ ಆಸಿಯೇಶನ್ (ಎಂಜೆಓ) ಹಂತಗಳು ಬಹುಶಃ ನೆರವಾಗಿರಬೇಕು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X