Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದಿ ಭಾರತವನ್ನು ಒಗ್ಗೂಡಿಸುತ್ತದೆ...

ಹಿಂದಿ ಭಾರತವನ್ನು ಒಗ್ಗೂಡಿಸುತ್ತದೆ ಎನ್ನುವುದು ಅಸಂಬದ್ಧ: ಅಮಿತ್ ಶಾ ‘ಹಿಂದಿ ದಿವಸ್’ ಭಾಷಣಕ್ಕೆ ಉದಯನಿಧಿ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ14 Sept 2023 7:30 PM IST
share
ಹಿಂದಿ ಭಾರತವನ್ನು ಒಗ್ಗೂಡಿಸುತ್ತದೆ ಎನ್ನುವುದು ಅಸಂಬದ್ಧ: ಅಮಿತ್ ಶಾ ‘ಹಿಂದಿ ದಿವಸ್’ ಭಾಷಣಕ್ಕೆ ಉದಯನಿಧಿ ಪ್ರತಿಕ್ರಿಯೆ

ಚೆನ್ನೈ: ‘ಹಿಂದಿ ಹೇರಿಕೆ ’ಗಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಟೀಕಿಸಿರುವ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು,ಕೇವಲ 4-5 ರಾಜ್ಯಗಳಲ್ಲಿ ಮಾತನಾಡಲಾಗುತ್ತಿರುವ ಭಾಷೆಯು ದೇಶವನ್ನು ಒಗ್ಗೂಡಿಸುವುದಿಲ್ಲ, ಹಾಗೆ ಹೇಳುವುದು ಅಸಂಬದ್ಧವಾಗುತ್ತದೆ ಎಂದು ಕುಟುಕಿದ್ದಾರೆ.

ಗುರುವಾರ ‘ಹಿಂದಿ ದಿವಸ್ ’ ಸಂದರ್ಭದಲ್ಲಿ ನೀಡಿದ ಸಂದೇಶದಲ್ಲಿ ಶಾ, ಹಿಂದಿಯು ಭಾರತದಲ್ಲಿ ಭಾಷೆಗಳ ವೈವಿಧ್ಯಗಳನ್ನು ಒಗ್ಗೂಡಿಸುತ್ತದೆ ಮತ್ತು ಅದು ವಿವಿಧ ಭಾರತೀಯ ಮತ್ತು ಜಾಗತಿಕ ಹಾಗೂ ಉಪಭಾಷೆಗಳನ್ನು ಗೌರವಿಸಿದೆ ಎಂದು ಹೇಳಿದ್ದಾರೆ. ಹಿಂದಿ ಎಂದಿಗೂ ಇತರ ಯಾವುದೇ ಭಾರತೀಯ ಭಾಷೆಯೊಂದಿಗೆ ಪೈಪೋಟಿಗಿಳಿದಿಲ್ಲ,ಇಳಿಯುವುದೂ ಇಲ್ಲ ಮತ್ತು ಎಲ್ಲ ಭಾಷೆಗಳನ್ನು ಬಲಪಡಿಸುವ ಮೂಲಕ ಮಾತ್ರ ಪ್ರಬಲ ದೇಶವು ಹೊರಹೊಮ್ಮುತ್ತದೆ ಎಂದೂ ಶಾ ಹೇಳಿದ್ದಾರೆ.

Xನಲ್ಲಿಯ ತಮಿಳು ಪೋಸ್ಟ್ ನಲ್ಲಿ ಶಾ ಹೇಳಿಕೆಯನ್ನು ಟೀಕಿಸಿರುವ ಉದಯನಿಧಿ, ‘ಕೇಂದ್ರ ಸಚಿವ ಅಮಿತ್ ಶಾ ಎಂದಿನಂತೆ ಹಿಂದಿ ಭಾಷೆಗಾಗಿ ತನ್ನ ಪ್ರೀತಿಯನ್ನು ಪ್ರದರ್ಶಿಸುತ್ತ, ಹಿಂದಿ ದೇಶದ ಜನರನ್ನು ಒಗ್ಗೂಡಿಸುತ್ತದೆ ಮತ್ತು ಪ್ರಾದೇಶಿಕ ಭಾಷೆಗಳನ್ನು ಸಬಲಗೊಳಿಸುತ್ತದೆ ಎಂದು ಹೇಳಿದ್ದಾರೆ. ಈ ಪರಿಕಲ್ಪನೆಯು ನೀವು ಹಿಂದಿಯನ್ನು ಅಧ್ಯಯನ ಮಾಡಿದರೆ ನೀವು ಪ್ರಗತಿಯನ್ನು ಹೊಂದುತ್ತೀರಿ ಎಂಬ ಕೂಗಿನ ಪರ್ಯಾಯ ರೂಪವಾಗಿದೆ ’ಎಂದು ಹೇಳಿದ್ದಾರೆ.

‘ತಮಿಳುನಾಡಿನಲ್ಲಿ ತಮಿಳು-ಕೇರಳದಲ್ಲಿ ಮಲಯಾಳಂ. ಈ ಎರಡು ರಾಜ್ಯಗಳನ್ನು ಹಿಂದಿ ಎಲ್ಲಿ ಒಂದುಗೂಡಿಸುತ್ತದೆ? ಸಬಲೀಕರಣ ಎಲ್ಲಿಂದ ಬರುತ್ತದೆ?’ ಎಂದೂ ಉದಯನಿಧಿ ಪ್ರಶ್ನಿಸಿದ್ದಾರೆ.

ಕೇವಲ ನಾಲ್ಕೈದು ರಾಜ್ಯಗಳಲ್ಲಿ ಮಾತನಾಡಲಾಗುವ ಹಿಂದಿ ಇಡೀ ದೇಶವನ್ನು ಒಗ್ಗೂಡಿಸುತ್ತದೆ ಎಂದು ಹೇಳುವುದು ಅಸಂಬದ್ಧವಾಗುತ್ತದೆ. ಹಿಂದಿಯನ್ನು ಬಿಟ್ಟು ಇತರ ಭಾಷೆಗಳನ್ನು ಪ್ರಾದೇಶಿಕ ಭಾಷೆಗಳು ಎಂದು ಅವಹೇಳನ ಮಾಡುವುದನ್ನು ಅಮಿತ್ ಶಾ ನಿಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X