Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಡಿಯಾ ಜೊತೆ ಜೆಡಿಯು ದೃಢವಾಗಿ...

ಇಂಡಿಯಾ ಜೊತೆ ಜೆಡಿಯು ದೃಢವಾಗಿ ನಿಲ್ಲಲಿದೆ, ಆದರೆ ಕಾಂಗ್ರೆಸ್ ಆತ್ಮವಿಮರ್ಶೆ ಮಾಡಬೇಕು : ಜೆಡಿಯು ಅಧ್ಯಕ್ಷ ಕುಶವಾಹ

ವಾರ್ತಾಭಾರತಿವಾರ್ತಾಭಾರತಿ26 Jan 2024 9:13 PM IST
share
ಇಂಡಿಯಾ ಜೊತೆ ಜೆಡಿಯು ದೃಢವಾಗಿ ನಿಲ್ಲಲಿದೆ, ಆದರೆ ಕಾಂಗ್ರೆಸ್ ಆತ್ಮವಿಮರ್ಶೆ ಮಾಡಬೇಕು : ಜೆಡಿಯು ಅಧ್ಯಕ್ಷ ಕುಶವಾಹ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಎನ್‌ಡಿಎ ಮೈತ್ರಿಕೂಟವನ್ನು ಸೇರಲಿದ್ದಾರೆಂಬ ಊಹಾಪೋಹಗಳನ್ನು ಅವರ ಪಕ್ಷವಾದ ಜೆಡಿಯು ಶುಕ್ರವಾರ ನಿರಾಕರಿಸಿದ್ದು, ಇಂಡಿಯಾ ಮೈತ್ರಿಕೂಟದ ಜೊತೆ ದೃಢವಾಗಿ ನಿಲ್ಲುವುದಾಗಿ ತಿಳಿಸಿದೆ. ಆದರೆ ಮೈತ್ರಿಕೂಟದ ಪಾಲುದಾರ ಪಕ್ಷಗಳ ಕುರಿತಾದ ನಿಲುವು ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೀಟುಗಳ ಹಂಚಿಕೆ ಬಗ್ಗೆ ಕಾಂಗ್ರೆಸ್ ಪಕ್ಷವು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಅದು ಕರೆ ನೀಡಿದೆ.

ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ವಾಪಸಾಗಲು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಯೋಚಿಸುತ್ತಿದೆಯೆಂಬ ವದಂತಿಗಳನ್ನು ಜೆಡಿಯು ಬಿಹಾರ ರಾಜ್ಯಾಧ್ಯಕ್ಷ ಉಮೇಶ್ ಸಿಂಗ್ ಕುಶವಾಹ ಅವರು ತಳ್ಳಿಹಾಕಿದ್ದಾರೆ.

‘‘ ಬಿಹಾರದ ಆಡಳಿತಾರೂಢ ಮಹಾಘಟಬಂಧನ ಮೈತ್ರಿಕೂಟದಲ್ಲಿ ಎಲ್ಲವೂ ಚೆನ್ನಾಗಿದೆ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಕೆಲವು ವದಂತಿಗಳು ಅಜೆಂಡಾಗಳಿಂದ ಪ್ರೇರಿತವಾಗಿದೆ’’ ಎಂದವರು ಹೇಳಿದ್ದಾರೆ.

‘‘ನಾನು ಮುಖ್ಯಮಂತ್ರಿಯವರನ್ನು ನಿನ್ನೆ ಹಾಗೂ ಇಂದು ಭೇಟಿಯಾಗಿದ್ದೆ. ಅದೊಂದು ಸಾಮಾನ್ಯ ಮಾತುಕತೆಯಾಗಿತ್ತು. ಈಗ ಹರಿದಾಡುತ್ತಿರುವ ವದಂತಿಗಳಲ್ಲಿ ಯಾವುದೇ ಸತ್ಯವಿಲ್ಲ’’ ಎಂದು ಕುಶವಾಹ ತಿಳಿಸಿದ್ದಾರೆ. ಪಾಟ್ನಾಗೆ ಧಾವಿಸುವಂತೆ ಪಕ್ಷದ ಶಾಸಕರಿಗೆ ಸೂಚಿಸಲಾಗಿದೆಯೆಂಬ ವದಂತಿಗಳನ್ನು ಕೂಡಾ ಅವರು ತಳ್ಳಿಹಾಕಿದರು.

ಶುಕ್ರವಾರ ನಡೆದ ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದ ವೇದಿಕೆಯಲ್ಲಿ ನಿತೀಶ್ ಕುಮಾರ್ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಪರಸ್ಪರ ದೂರದಲ್ಲಿ ಆಸೀನರಾಗಿದ್ದಕ್ಕೆ ಹೆಚ್ಚು ಅರ್ಥ ಕಲ್ಪಿಸುವ ಅಗತ್ಯವಿಲ್ಲವೆಂದವರು ಹೇಳಿದ ಅವರು ಇಂಡಿಯಾ ಮೈತ್ರಿಕೂಟದ ಜೊತೆ ಜೆಡಿಯು ದೃಢವಾಗಿ ನಿಲ್ಲುತ್ತದೆ ಎಂದರು.

ಆದಾಗ್ಯೂ, ಕಾಂಗ್ರೆಸ್ ಪಕ್ಷವು, ಮೈತ್ರಿಕೂಟದ ಇತರ ಅಂಗಪಕ್ಷಗಳ ಕುರಿತ ಅದು ತಾಳಿರುವ ನಿಲುವು ಹಾಗೂ ಸೀಟು ಹಂಚಿಕೆಯ ವಿಷಯಗಳಲ್ಲಿ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಕುಶವಾಹ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿತೆಯನ್ನು ಸಾಧ್ಯವಾದಷ್ಟು ಬೇಗನೇ ಅಂತಿಮಗೊಳಿಸಬೇಕು, ಹಾಗಾದಲ್ಲಿ ಮಾತ್ರ ಚುನಾವಣೆ ಬಗ್ಗೆ ಗಮನ ಕೇಂದ್ರೀಕರಿಸಲು ಸಾಧ್ಯವಾಗಲಿದೆ ಎಂದರು.

ಪಂಜಾಬ್ ನಲ್ಲಿ ಆಪ್ ಹಾಗೂ ಪಶ್ಚಿಮಬಂಗಾಳದಲ್ಲಿ ಟಿಎಂಸಿ ಪಕ್ಷಗಳು ಕಾಂಗ್ರೆಸ್ ಜೊತೆ ಚುನಾವಣಾ ಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿರುವ ಬೆನ್ನಲ್ಲೇ ಜೆಡಿಯು ನಾಯಕ ಈ ಹೇಳಿಕೆಯನ್ನು ನೀಡಿರುವುದು ಹೆಚ್ಚಿನ ಮಹತ್ವ ಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X