Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. JEE ಅಡ್ವಾನ್ಸ್ಡ್ ದತ್ತಾಂಶ ಸೋರಿಕೆ:...

JEE ಅಡ್ವಾನ್ಸ್ಡ್ ದತ್ತಾಂಶ ಸೋರಿಕೆ: ಧರ್ಮೇಂದ್ರ ಪ್ರಧಾನ್ ವಜಾಗೆ ಕಾಕ್ರೋಚ್ ಜನತಾ ಪಾರ್ಟಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Jun 2026 8:53 PM IST
share
JEE ಅಡ್ವಾನ್ಸ್ಡ್ ದತ್ತಾಂಶ ಸೋರಿಕೆ: ಧರ್ಮೇಂದ್ರ ಪ್ರಧಾನ್ ವಜಾಗೆ ಕಾಕ್ರೋಚ್ ಜನತಾ ಪಾರ್ಟಿ ಆಗ್ರಹ

ಹೊಸದಿಲ್ಲಿ: JEE (ಅಡ್ವಾನ್ಸ್ಡ್) 2026 ಫಲಿತಾಂಶ ಪೋರ್ಟಲ್ ನಿಂದ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳ ದತ್ತಾಂಶ ಬಹಿರಂಗಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಆಗ್ರಹಿಸಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಕ್ಲೌಡ್ ಸಂಗ್ರಹಣೆಯ ಸಂರಚನಾ ದೋಷದಿಂದ ಉಂಟಾದ ಈ ದತ್ತಾಂಶ ಸೋರಿಕೆಯು ದೇಶದ ಶಿಕ್ಷಣ ವ್ಯವಸ್ಥೆ ಮತ್ತು ಡಿಜಿಟಲ್ ಆಡಳಿತದಲ್ಲಿನ ಗಂಭೀರ ಲೋಪಗಳನ್ನು ಬಯಲಿಗೆಳೆದಿದೆ ಎಂದು ಆರೋಪಿಸಿದರು.

ಈ ವಿವಾದವು ಮಂಗಳವಾರ ಬೆಳಕಿಗೆ ಬಂದಿತ್ತು. ಈ ವರ್ಷದ JEE (ಅಡ್ವಾನ್ಸ್ಡ್) ಪರೀಕ್ಷೆಯನ್ನು ನಡೆಸುತ್ತಿರುವ ನೋಡಲ್ ಸಂಸ್ಥೆಯಾದ IIT ರೂರ್ಕಿಯ ಪೋರ್ಟಲ್ ನಲ್ಲಿ ಕಂಡುಬಂದ ಸಮಸ್ಯೆಯಿಂದಾಗಿ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳ ಅಭ್ಯರ್ಥಿ ದಾಖಲೆಗಳು ಮತ್ತು ಪ್ರವೇಶ ಪತ್ರಗಳು ಯಾವುದೇ ದೃಢೀಕರಣವಿಲ್ಲದೆ ಪ್ರವೇಶಿಸಬಹುದಾಗಿದ್ದವು ಎಂದು ಹದಿಹರೆಯದ ಸೈಬರ್ ಭದ್ರತಾ ಸಂಶೋಧಕರೊಬ್ಬರು ಪತ್ತೆಹಚ್ಚಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ IIT ರೂರ್ಕಿ, ಸಮಸ್ಯೆಯನ್ನು ಸರಿಪಡಿಸುವ ಕ್ರಮಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿತ್ತು. ದತ್ತಾಂಶವು ‘ರೀಡ್–ಓನ್ಲಿ’ ಸ್ವರೂಪದಲ್ಲಿದ್ದ ಕಾರಣ ದಾಖಲೆಗಳಲ್ಲಿ ಯಾವುದೇ ಬದಲಾವಣೆ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿತ್ತು. ಆದರೂ, ವಿದ್ಯಾರ್ಥಿಗಳ ವೈಯಕ್ತಿಕ ಮಾಹಿತಿಯ ಸುರಕ್ಷತೆ ಕುರಿತು ಈ ಘಟನೆ ವ್ಯಾಪಕ ಆತಂಕ ಮತ್ತು ಸಾರ್ವಜನಿಕ ಪರಿಶೀಲನೆಗೆ ಕಾರಣವಾಗಿದೆ.

ಪಕ್ಷದ ನೂತನ ವಕ್ತಾರ ಹಾಗೂ IIT ಕಾನ್ಪುರ ಮತ್ತು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನ ಹಳೆಯ ವಿದ್ಯಾರ್ಥಿ ಅಶುತೋಷ್ ರಾಂಕಾ, IIT ರೂರ್ಕಿಯ ಸ್ಪಷ್ಟೀಕರಣವನ್ನು ತೀವ್ರವಾಗಿ ಟೀಕಿಸಿದರು.

‘IIT ರೂರ್ಕಿ ದತ್ತಾಂಶವು ರೀಡ್–ಓನ್ಲಿ ಎಂದು ಹೇಳಿದೆ. ಇದು ತಮಾಷೆಯೇ? ನೀವು ಅದನ್ನು ಓದಬಹುದು, ಆದರೆ ಎಡಿಟ್ ಸಾಧ್ಯವಿಲ್ಲ ಎಂದು ಹೇಳುತ್ತಿದ್ದೀರಿ. ಒಂದು ಮೂಲಭೂತ IIT ಪೋರ್ಟಲ್ ಅನ್ನೇ ಸುರಕ್ಷಿತವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. 16, 17 ಮತ್ತು 18 ವರ್ಷದ ಯುವಕರೇ ದುರ್ಬಲತೆಗಳನ್ನು ಪತ್ತೆಹಚ್ಚಿ CERTಗೆ ಎಚ್ಚರಿಕೆ ನೀಡುತ್ತಿದ್ದಾರೆ. ಇದು ವ್ಯವಸ್ಥೆಯನ್ನು ನಡೆಸುತ್ತಿರುವವರ ಸಾಮರ್ಥ್ಯದ ಮಟ್ಟವನ್ನು ತೋರಿಸುತ್ತದೆ’ ಎಂದು ಅವರು ಹೇಳಿದರು.

ಜಾಗತಿಕ ಮಟ್ಟದ ತಂತ್ರಜ್ಞಾನ ನಾಯಕರನ್ನು ರೂಪಿಸುವ ದೇಶವಾಗಿದ್ದರೂ ಮೂಲಭೂತ ಡಿಜಿಟಲ್ ಪೋರ್ಟಲ್ ಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗದಿರುವುದು ಕಳವಳಕಾರಿ ಎಂದು ಅವರು ಅಭಿಪ್ರಾಯಪಟ್ಟರು.

‘ಶಿಕ್ಷಣ ಸಚಿವರು ಸಂಪೂರ್ಣವಾಗಿ ಅಸಮರ್ಥರಾಗಿದ್ದಾರೆ. ಅವರು ಶಿಕ್ಷಣ ವ್ಯವಸ್ಥೆಯನ್ನು ನೆಲಸಮಗೊಳಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣ ವಜಾಗೊಳಿಸುವಂತೆ ನಾವು ಪ್ರಧಾನಿಗೆ ಮನವಿ ಮಾಡುತ್ತೇವೆ. ಇದು ನಮ್ಮ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ವಿಷಯ. ಇಲ್ಲಿ ಬಹಳಷ್ಟು ಅಪಾಯದಲ್ಲಿದೆ’ ಎಂದು ರಾಂಕಾ ಹೇಳಿದರು. ಸಾರ್ವಜನಿಕ ಸಂಸ್ಥೆಗಳಿಗೆ ವೈಜ್ಞಾನಿಕ ಮನೋಭಾವ ಮತ್ತು ತಾಂತ್ರಿಕ ಸಾಮರ್ಥ್ಯ ಹೊಂದಿರುವ ವ್ಯಕ್ತಿಗಳ ಅಗತ್ಯವಿದೆ ಎಂದೂ ಅವರು ಹೇಳಿದರು.

BJP ಆಡಳಿತಾವಧಿಯಲ್ಲಿ ನಡೆದಿರುವ ಎಲ್ಲ ದತ್ತಾಂಶ ಸೋರಿಕೆ ಮತ್ತು ಸೈಬರ್ ಭದ್ರತಾ ವೈಫಲ್ಯಗಳ ಕುರಿತು ಕೇಂದ್ರ ಸರ್ಕಾರ ಸಂಪೂರ್ಣ ಮಾಹಿತಿ ಬಹಿರಂಗಪಡಿಸಬೇಕು ಎಂದು ಪಕ್ಷ ಒತ್ತಾಯಿಸಿದೆ. ದತ್ತಾಂಶ ಎಲ್ಲಿಗೆ ಸೋರಿಕೆಯಾಗಿದೆ, ಅದನ್ನು ಯಾರು ಪ್ರವೇಶಿಸಿದ್ದಾರೆ ಹಾಗೂ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವ ಉಲ್ಲಂಘನೆಗಳ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದೆ.

ಜೂನ್ 6ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಕುರಿತು ಮಾತನಾಡಿದ ರಾಂಕಾ, ಹಿಂಸಾಚಾರದ ಕುರಿತು ವದಂತಿಗಳನ್ನು ಹರಡಲಾಗುತ್ತಿದೆ ಎಂದು ಆರೋಪಿಸಿದರು.

‘ಹಿಂಸಾಚಾರದ ಬಗ್ಗೆ ವದಂತಿಗಳನ್ನು ಹರಡಲಾಗುತ್ತಿದೆ. ಕಾಕ್ರೋಚ್ ಜನತಾ ಪಾರ್ಟಿಯು ಕಾನೂನು ಮತ್ತು ಸುವ್ಯವಸ್ಥೆಗೆ ಅನುಗುಣವಾದ ಶಾಂತಿಯುತ ಹಾಗೂ ಪ್ರಜಾಪ್ರಭುತ್ವದ ಪ್ರತಿಭಟನೆಗಳಿಗೆ ಮಾತ್ರ ಕರೆ ನೀಡುತ್ತದೆ. ಹಿಂಸಾಚಾರದಿಂದ ದೂರವಿರಲು ನಾವು ಜನರನ್ನು ಮನವಿ ಮಾಡುತ್ತೇವೆ’ ಎಂದು ಹೇಳಿದರು.

ಈ ಮಾಧ್ಯಮ ಸಂವಾದವು ಬುಧವಾರ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆದ ಪಕ್ಷದ ಉದ್ಘಾಟನಾ ಪತ್ರಿಕಾಗೋಷ್ಠಿಯ ನಂತರ ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಪಕ್ಷದ ನಾಯಕರು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹ ವ್ಯಕ್ತಪಡಿಸುವುದರ ಜೊತೆಗೆ ಸರ್ಕಾರ ಹಾಗೂ ವಿರೋಧ ಪಕ್ಷಗಳೊಂದಿಗೆ ಸಂವಾದ ನಡೆಸಲು ಸಿದ್ಧವಿರುವುದಾಗಿ ತಿಳಿಸಿದ್ದರು.

ಪ್ರಸ್ತುತ ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದಿಪ್ಕೆ, ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯುವ ಉದ್ದೇಶದಿಂದ ಜೂನ್ 6ರಂದು ದಿಲ್ಲಿಗೆ ಆಗಮಿಸಲಿದ್ದಾರೆ. ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಕಳೆದ ತಿಂಗಳು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನ್ಯಾಯಾಲಯದ ವಿಚಾರಣೆಯೊಂದರಲ್ಲಿ ಕೆಲವು ವ್ಯಕ್ತಿಗಳನ್ನು ‘ಜಿರಳೆಗಳು’ ಮತ್ತು ‘ಪರಾವಲಂಬಿಗಳು’ ಎಂದು ಉಲ್ಲೇಖಿಸಿದ್ದರೆಂದು ವರದಿಯಾಗಿತ್ತು. ಆ ಹೇಳಿಕೆಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹುಟ್ಟಿಕೊಂಡಿತು ಎಂದು ವರದಿಗಳು ತಿಳಿಸಿವೆ. ದಿಪ್ಕೆ ಮತ್ತು ಅವರ ಬೆಂಬಲಿಗರು ‘ಕಾಕ್ರೋಚ್’ ಎಂಬ ಪದವನ್ನೇ ರಾಜಕೀಯ ಸಂಕೇತವಾಗಿ ಅಳವಡಿಸಿಕೊಂಡು, ಡಿಜಿಟಲ್ ಯುವ ಚಳವಳಿಯನ್ನು ಸಂಘಟಿತ ರಾಜಕೀಯ ಅಭಿಯಾನವಾಗಿ ರೂಪಿಸಿದ್ದಾರೆ.

Tags

CJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X