Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಅಬಕಾರಿ ಹಗರಣದಲ್ಲಿ ಕವಿತಾರನ್ನು...

ದಿಲ್ಲಿ ಅಬಕಾರಿ ಹಗರಣದಲ್ಲಿ ಕವಿತಾರನ್ನು ರಕ್ಷಿಸಲು ಬಿಜೆಪಿ ನಾಯಕರ ಫೋನ್ ಕದ್ದಾಲಿಕೆಗೆ ಆದೇಶಿಸಿದ್ದ ಕೆ.ಸಿ.ಆರ್.: ಮಾಜಿ ಡಿಸಿಪಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ28 May 2024 11:55 PM IST
share
ದಿಲ್ಲಿ ಅಬಕಾರಿ ಹಗರಣದಲ್ಲಿ ಕವಿತಾರನ್ನು ರಕ್ಷಿಸಲು ಬಿಜೆಪಿ ನಾಯಕರ ಫೋನ್ ಕದ್ದಾಲಿಕೆಗೆ ಆದೇಶಿಸಿದ್ದ ಕೆ.ಸಿ.ಆರ್.: ಮಾಜಿ ಡಿಸಿಪಿ ಬಹಿರಂಗ

ತೆಲಂಗಾಣ,: ದಿಲ್ಲಿ ಮದ್ಯ ನೀತಿ ಪರಿಷ್ಕರಣೆ ಹಗರಣದಲ್ಲಿ ಆರೋಪಿಯಾಗಿರುವ ತನ್ನ ಪುತ್ರಿ ಹಾಗೂ ಶಾಸಕಿ ಕೆ ಕವಿತಾಗೆ ಜಾಮೀನು ದೊರಕಿಸಿಕೊಡುವುದಕ್ಕೆ ಸಹಕರಿಸುವಂತೆ ಬಿಜೆಪಿಗೆ ಒತ್ತಡ ಹೇರುವ ಉದ್ದೇಶದಿಂದ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು 2022ರ ಶಾಸಕರ ಕುದುರೆ ವ್ಯಾಪಾರ ಯತ್ನ ಪ್ರಕರಣವನ್ನು ಬಳಸಿಕೊಳ್ಳಲು ಬಯಸಿದ್ದರು ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಅಕ್ರಮ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಹೈದರಾಬಾದ್ ಪೊಲೀಸ್ ಕಾರ್ಯಪಡೆಯ ಮಾಜಿ ಡಿಸಿಪಿ ರಾಧಾ ಕಿಶನ್ ರಾವ್ ಅವರು ಸಲ್ಲಿಸಿದ ತಪ್ಪೊಪ್ಪಿಗೆ ವರದಿಯಲ್ಲಿ ಅವರು ಈ ವಿಷಯವನ್ನು ಉಲ್ಲೇಖಿಸಿದ್ದಾರೆ ಎಂದು ʼಟೈಮ್ಸ್ ಆಫ್ ಇಂಡಿಯಾʼ ಪತ್ರಿಕೆಯ ವರದಿ ತಿಳಿಸಿದೆ.

ಆಗ ಮುಖ್ಯಮಂತ್ರಿಯಾಗಿದ್ದ ಕೆ.ಚಂದ್ರಶೇಖರ್ ರಾವ್ ಅವರು ಟಿಆರ್‌ಎಸ್‌ ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕರ ಫೋನ್ ಕದ್ದಾಲಿಕೆಗೆ ಆದೇಶಿಸಿದ್ದರು. ಈ ಪ್ರಕರಣದಲ್ಲಿ ಬಿಜೆಪಿಯ ಪದಾಧಿಕಾರಿ ಬಿ.ಎಲ್.ಸಂತೋಷ್ ಅವರ ಬಂಧಿಸುವಂತೆಯೂ ಆದೇಶಿಸಿದ್ದರು. ಆದರೆ ಪ್ರಕರಣವು ತೆಲಂಗಾಣ ಹೈಕೋರ್ಟ್ ಮೆಟ್ಟಲೇರಿದ್ದು, ಆನಂತರ ಅದನ್ನು ನ್ಯಾಯಾಲಯ ಸಿಬಿಐಗೆ ಹಸ್ತಾಂತರಿಸಿತ್ತು. ಇದರಿಂದಾಗಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆ.ಸಿ.ಆರ್. ಅವರ ಪ್ರಯತ್ನ ವಿಫಲವಾಯಿತೆಂದು ವರದಿ ಹೇಳಿದೆ.

ಬಿಜೆಪಿಯ ಕೆಲವು ಪ್ರಭಾವಿ ವ್ಯಕ್ತಿಗಳೆನ್ನಲಾದ ಕೆಲವರು ತನ್ನ ಜೊತೆ ಸಂಪರ್ಕದಲ್ಲಿದ್ದು, ಬಿಆರ್‌ಎಸ್ ಕೆಲವು ಶಾಸಕರೊಂದಿಗೆ ಪಕ್ಷವನ್ನು ತೊರೆದು ಬಿಜೆಪಿಯನ್ನು ಸೇರುವಂತೆ ಅವರು ತನ್ನ ಮನವೊಲಿಸಲು ಯತ್ನಿಸುತ್ತಿದ್ದಾರೆಂದು ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರು ಮುಖ್ಯಮಂತ್ರಿ ಕೆ.ಸಿ.ಆರ್.ತಿಳಿಸಿದ್ದರು. ಆಗ ವಿಶೇಷ ಗುಪ್ತಚರದಳದ ವರಿಷ್ಠರಾಗಿದ್ದ ಟಿ.ಪ್ರಭಾಕರ ರಾವ್ ಅವರು ಈ ವಿಷಯವನ್ನು ತನಗೆ ಹೇಳಿದ್ದರೆಂದು ರಾಧಾ ಕಿಶನ್ ರಾವ್ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಬಹಿರಂಗಪಡಿಸಿದ್ದಾರೆ.

ಕೆ.ಸಿ.ಆರ್. ಸೂಚನೆಯಂತೆ ಎಸ್ಐಬಿಯ ಮಾಜಿ ಡಿವೈಎಸ್ಪಿ ಡಿ.ಪ್ರಣೀತ್ರಾವ್ ಅವರು ಕೆಲವು ವ್ಯಕ್ತಿಗಳು ಹಾಗೂ ಶಾಸಕರೊಬ್ಬರ ಫೋನನ್ನು ಕದ್ದಾಲಿಸಿದ್ದರು ಮತ್ತು ಈ ಕುರಿತ ಅಡಿಯೋ ತುಣುಕನ್ನು ಕೂಡಾ ಅವರು ಮುಖ್ಯಮಂತ್ರಿಗೆ ಸಲ್ಲಿಸಿದ್ದರು. ಆನಂತರ ಮುಖ್ಯಮಂತ್ರಿಯವರು ಬಿಜೆಪಿ ನಾಯಕರ ಬಂಧನಕ್ಕೆ ಜಾಲ ಬೀಸುವಂತೆ ಸೂಚಿಸಿದ್ದರು. ಅಲ್ಲದೆ ಪೊಲೀಸರೊಂದಿಗೆ ಸಹಕರಿಸುವಂತೆಯೂ ಶಾಸಕ ರೋಹಿತ್ಗೆ ತಿಳಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಇನ್ನೂ ಮೂವರು ಶಾಸಕರು ಪಾಲ್ಗೊಳ್ಳುವಂತೆಯೂ ಕೆ.ಸಿ.ಆರ್.ಸೂಚಿಸಿದ್ದರೆಂದು ರಾಧಾ ಕಿಶನ್ ರಾವ್ ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X