Keralam| CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ

Photo | indiatoday
ತಿರುವನಂತಪುರಂ: ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (CMRL) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಕೇರಳದಾದ್ಯಂತ 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ದಾಳಿ ನಡೆಸಿದೆ.
ಈ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಅವರ ಪುತ್ರಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ ಮತ್ತು ವಿಜಯನ್ ಅವರ ಪುತ್ರಿ ಟಿ ವೀಣಾ ಅವರ ಒಡೆತನದ ಎಕ್ಸಲಾಜಿಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
CMRL ಪ್ರಕರಣದ ಕುರಿತು ED ನಡೆಸುತ್ತಿರುವ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಮರು ದಿನವೇ ಈ ಬೆಳವಣಿಗೆ ನಡೆದಿದೆ.
ಕೋಝಿಕ್ಕೋಡ್ನಲ್ಲಿ ಮಾಜಿ ಸಚಿವ ಮತ್ತು ಶಾಸಕ ಪಿಎ ಮುಹಮ್ಮದ್ ರಿಯಾಸ್ ಅವರ ನಿವಾಸದ ಮೇಲೆ ಕೂಡ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.




