Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಡಿಕೆಗಿಂತ ಕಡಿಮೆ ಮಳೆ: ರೈತರಲ್ಲಿ ಆತಂಕ

ವಾಡಿಕೆಗಿಂತ ಕಡಿಮೆ ಮಳೆ: ರೈತರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ16 Aug 2023 9:05 AM IST
share
ವಾಡಿಕೆಗಿಂತ ಕಡಿಮೆ ಮಳೆ: ರೈತರಲ್ಲಿ ಆತಂಕ

ಹೊಸದಿಲ್ಲಿ: ಹವಾಮಾನ ವೈಪರೀತ್ಯ ಪರಿಸ್ಥಿತಿ ಮುಂದುವರಿದಿದ್ದು, ಜುಲೈ ತಿಂಗಳ ಅಂತ್ಯದ ವೇಳೆಗೆ ವಾಡಿಕೆಗಿಂತ ಶೇಕಡ 5ರಷ್ಟು ಅಧಿಕ ಇದ್ದ ಮಳೆ ಪರಿಸ್ಥಿತಿ ಕೇವಲ 15 ದಿನಗಳಲ್ಲಿ ವಾಡಿಕೆಗಿಂತ ಶೇಕಡ 5ರಷ್ಟು ಕಡಿಮೆ ಮಟ್ಟಕ್ಕೆ ಇಳಿದಿದ್ದು, ರೈತಾಪಿ ವರ್ಗದಲ್ಲಿ ಆತಂಕ ಮೂಡಿಸಿದೆ. ಭಾರತದ 717 ಜಿಲ್ಲೆಗಳ ಪೈಕಿ 263 ಜಿಲ್ಲೆಗಳಲ್ಲಿ ಅಂದರೆ ಶೇಕಡ 36ರಷ್ಟು ಜಿಲ್ಲೆಗಳಲ್ಲಿ ಮಳೆ ಅಭಾವ ಶೇಕಡ 20 ರಷ್ಟು ಅಥವಾ ಅಧಿಕ ಇದೆ.

ಮಳೆ ಬಹಳಷ್ಟು ಕಡೆಗಳಲ್ಲಿ ಇದೀಗ ವಿರಾಮ ನೀಡಿದ್ದು, ಮಂಗಳವಾರದ ವೇಳೆಗೆ ಕ್ರೋಢೀಕೃತ ಮಳೆ ಪ್ರಮಾಣ ವಾಡಿಕೆ ಮಳೆಗಿಂತ ಶೇಕಡ 5ರಷ್ಟು ಕಡಿಮೆ ಇದೆ. ದೇಶಾದ್ಯಂತ ಆಗಸ್ಟ್ ತಿಂಗಳ ಮೊದಲಾರ್ಧದಲ್ಲಿ ಧೀರ್ಘಾವಧಿ ವಾಡಿಕೆ ಪ್ರಮಾಣಕ್ಕಿಂತ ಶೇಕಡ 35ರಷ್ಟು ಕೊರತೆ ಕಾಣಿಸಿಕೊಂಡಿದೆ. ಜುಲೈ ತಿಂಗಳಲ್ಲಿ ವಾಡಿಕೆ ಮಳೆ ಶೇಕಡ 13ರಷ್ಟು ಅಧಿಕ ಇದ್ದ ಕಾರಣ ಹಿಂದಿನ ಕೊರತೆ ನೀಗಿತ್ತು.

ಪೂರ್ವಭಾರತದ ರಾಜ್ಯಗಳಲ್ಲಿ ದೊಡ್ಡ ಪ್ರಮಾಣದ ಮಳೆ ಅಭಾವ ಪರಿಸ್ಥಿತಿ ಇದ್ದರೆ, ದಕ್ಷಿಣ ರಾಜ್ಯಗಳಲ್ಲಿ ಕೂಡಾ ಮಳೆ ಅಭಾವ ಪರಿಸ್ಥಿತಿ ತೀವ್ರವಾಗುತ್ತಿದೆ. ಆದರೆ ಆಗಸ್ಟ್ 18ರಿಂದ ಮಳೆ ವೇಗ ಪಡೆಯುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ಅಂದಾಜಿಸಿದೆ. "ಆಗಸ್ಟ್ ಉತ್ತರಾರ್ಧದಲ್ಲಿ ಉತ್ತಮ ಮಳೆ ಪರಿಸ್ಥಿತಿ ನಿರೀಕ್ಷಿಸಲಾಗಿದೆ. ಆಗಸ್ಟ್ 18ರ ವೇಳೆಗೆ ಮುಂಗಾರು ಪುನಶ್ಚೇತನದ ನಿರೀಕ್ಷೆ ಇದೆ. ಪಶ್ಚಿಮ ಕರಾವಳಿ ಮತ್ತು ಪರ್ಯಾಯದ್ವೀಪ ಪ್ರದೇಶಗಳಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಜತೆಗೆ ಪೂರ್ವ ಹಾಗೂ ಈಶಾನ್ಯ ಮತ್ತು ಕೇಂದ್ರ ಭಾರತದ ಹಲವು ರಾಜ್ಯಗಳಲ್ಲೂ ಮಳೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಡಿ.ಶಿವಾನಂದ ಪೈ ಹೇಳಿದ್ದಾರೆ.

ಎಲ್ನಿನೊ ಪೂರ್ಣಪ್ರಮಾಣದಲ್ಲಿ "ಕಪಲ್ಡ್ ಸಿಸ್ಟಂ" ಆಗಿ ಬೆಳೆದಿದ್ದು, ಆಗಸ್ಟ್- ಸೆಪ್ಟೆಂಬರ್ ಅವಧಿಯಲ್ಲಿ ಮಳೆ ಪ್ರಮಾಣದ ಬಗ್ಗೆ ಆತಂಕದ ಮೋಡ ಕವಿದಿದೆ. ಪೂರ್ವ ಮತ್ತು ಕೇಂದ್ರ ಫೆಸಿಫಿಕ್ ಪ್ರದೇಶದಲಿ ಸಾಗರ ಬಿಸಿಯಾಗುವಿಕೆಗೆ ಸಂಬಂಧಿಸಿದಂತೆ ಬದಲಾವಣೆ ಕಂಡುಬಂದಿದ್ದು, ಇದು ಈ ಪ್ರದೇಶದಲ್ಲಿ ಗಾಳಿಯ ವಿಧದಲ್ಲಿ ಬದಲಾವಣೆಗೂ ಕಾರಣವಾಗಲಿದೆ ಎಂದು ಅಮೆರಿಕದ ರಾಷ್ಟ್ರೀಯ ಹವಾಮಾನ ಏಜೆನ್ಸಿಗಳು ಅಂದಾಜಿಸಿವೆ. ಈ ಬೆಳವಣಿಗೆ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಪರಿಣಾಮ ಬೀರಲಿದೆ ಎನ್ನುವುದು ತಜ್ಞರ ಅಭಿಮತ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X