LIVE UPDATES | ತೆಲಂಗಾಣ : ಸರಕಾರ ರಚಿಸಲು ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ

ಹೊಸದಿಲ್ಲಿ: ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ತೆಲಂಗಾಣ ಹೊರತುಪಡಿಸಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಡದಲ್ಲಿ ಬಿಜೆಪಿಯ ಕಮಲ ಅರಳಿದೆ. ತೆಲಂಗಾಣದಲ್ಲಿ ಕೆಸಿಆರ್ ಅವರ ಬಿಆರ್ಸಿ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟುಕೊಟ್ಟಿದೆ. ಆ ಮೂಲಕ ತೆಲಂಗಾಣದ ಇತಿಹಾಸದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದೆ. ಕೆಸಿಆರ್ ರಾಜೀನಾಮೆ ಸಲ್ಲಿಸಿದ್ದಾರೆ. ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ವಾರ್ತಾಭಾರತಿ ಲೈವ್ ಅಪ್ಡೇಟ್ ನಿರೀಕ್ಷಿಸಿ....
Live Updates
- 3 Dec 2023 10:59 AM IST
ಛತ್ತೀಸ್ ಗಡ : ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ; ಬಿಜೆಪಿ ಅಧ್ಯಕ್ಷ ಅರುಣ್ ಸಾವೊ
- 3 Dec 2023 10:57 AM IST
ಮಧ್ಯಪ್ರದೇಶ: ಅಗರ್ ಕ್ಷೇತ್ರದಲ್ಲಿ ಮತ ಎಣಿಕೆ ಸ್ಥಗಿತ
ಇವಿಎಂ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಗರ್ ಮಾಲ್ವಾ ಜಿಲ್ಲೆಯ ಅಗರ್ ಕ್ಷೇತ್ರದಲ್ಲಿ ಮತ ಎಣಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
- 3 Dec 2023 10:55 AM IST
ಮಧ್ಯಪ್ರದೇಶ : ಬಿಜೆಪಿ 156 ಕ್ಷೇತ್ರದಲ್ಲಿ ಮುನ್ನಡೆ. ಕಾಂಗ್ರೆಸ್ 71 ಕ್ಷೇತ್ರಗಳಲ್ಲಿ ಮುನ್ನಡೆ
- 3 Dec 2023 10:50 AM IST
ಛತ್ತೀಸ್ ಗಡ: ಬಿಜೆಪಿ - ಕಾಂಗ್ರೆಸ್ ನಡುವೆ ನೇರಾ ಹಣಾಹಣಿ
- 3 Dec 2023 10:47 AM IST
ಚುನಾವಣಾ ಫಲಿತಾಂಶ ಹಿನ್ನಲೆ : ಇಂಡಿಯಾ ಒಕ್ಕೂಟ ಸಭೆ ಕರೆದ ಕಾಂಗ್ರೆಸ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ 6 ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ ಕರೆದಿದ್ದಾರೆ.
- 3 Dec 2023 10:45 AM IST
ತೆಲಂಗಾಣದ ಜುಬಿಲಿ ಹಿಲ್ಸ್ ವಿಧಾನ ಸಭಾ ಕ್ಷೇತ್ರ : ಕಾಂಗ್ರೆಸ್ ನ ಮುಹಮ್ಮದ್ ಅಝರುದ್ದೀನ್ ಗೆ ಮುನ್ನಡೆ





