Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಂದಿನ ಸಭೆಯಲ್ಲಿ ತಪ್ಪು ಮಾಹಿತಿ...

ಮುಂದಿನ ಸಭೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಸ್ಥಳದಲ್ಲೇ ಸಸ್ಪೆಂಡ್: ಅಧಿಕಾರಿಗಳಿಗೆ ಸಚಿವ ಝಮೀರ್ ಅಹ್ಮದ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ6 Sept 2023 5:35 PM IST
share
ಮುಂದಿನ ಸಭೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಸ್ಥಳದಲ್ಲೇ ಸಸ್ಪೆಂಡ್: ಅಧಿಕಾರಿಗಳಿಗೆ ಸಚಿವ ಝಮೀರ್ ಅಹ್ಮದ್ ಎಚ್ಚರಿಕೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿರುವ ಸ್ಲಂ ಪ್ರದೇಶಗಳು ಹಾಗೂ ಈ ಪ್ರದೇಶದಲ್ಲಿ ವಾಸಿಸುವವರಿಗೆ ಕಳೆದ 10 ವರ್ಷಗಳಲ್ಲಿ ಮಂಜೂರಾಗಿರುವ ಮನೆಗಳು ಸೇರಿದಂತೆ ಸಮಗ್ರ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ಅಧಿಕಾರಿಗಳು ನೀಡಬೇಕು. ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದರೆ ಸ್ಥಳದಲ್ಲೇ ಸಸ್ಪೆಂಡ್ ಮಾಡುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಈ ಎಚ್ಚರಿಕೆ ನೀಡಿದರು.

ದ.ಕ. ಜಿಲ್ಲೆಯ ಸ್ಲಂ ಏರಿಯಾಗಳಲ್ಲಿ ಕಳೆದ 10 ವರ್ಷಗಳಲ್ಲಿ ಎಷ್ಟು ಮನೆಗಳು ಮಂಜೂರಾಗಿವೆ, ಅವು ಯಾವ ಹಂತದಲ್ಲಿವೆ ಎಂದು ಸಚಿವರು ಪ್ರಶ್ನಿಸಿದಾಗ, ಸ್ಲಂ ಬೋರ್ಡ್ನಡಿ 500 ಮನೆಗಳಷ್ಟೇ ಮಂಜೂರಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ತಾಲೂಕುವಾರು ಮಾಹಿತಿ ನೀಡಲು ತಿಳಿಸಿದ ಸಚಿವರು, ಉಳ್ಳಾಲದಲ್ಲಿ ಎಷ್ಟು ಮನೆಗಳು ಮಂಜೂರಾಗಿವೆ ಎಂದಾಗ ಒಂದೂ ಮನೆ ಇಲ್ಲ ಎಂಬ ಉತ್ತರಕ್ಕೆ ನಿಬ್ಬೆರಗಾದರು.

ರಾಜೀವ್ ಗಾಂಧಿ ವಸತಿ ಯೋಜನೆಯಡಿ ನಗರ ಮತ್ತು ಗ್ರಾಮಾಂತರದಲ್ಲಿ ಎಷ್ಟು ಮನೆಗಳು ಮಂಜೂರಾತಿ ಆಗಿವೆ ಎಂದು ಪ್ರಶ್ನಿಸಿದರು. ನಗರ ಪ್ರದೇಶದಲ್ಲಿ ವಾಜಪೇಯಿ ವಸತಿ ಯೋಜನೆಯಡಿ 1125 ಗುರಿ ನೀಡಲಾಗಿದೆ. 635 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಅಂಬೇಡ್ಕರ್ ವಸತಿ ಯೋಜನೆಯಡಿ 270 ಗುರಿಯಡಿ 164 ಆಯ್ಕೆಯಾಗಿದ್ದು, ಮನೆಗಳು ಪ್ರಗತಿ ಹಂತದಲ್ಲಿದೆ ಎಂದು ಅಧಿಕಾರಿಗಳು ಹೇಳಿದಾಗ ಇದು ಇಡೀ ಜಿಲ್ಲೆಯ ಅಂಕಿಅಂಶವೇ ಎಂದು ಸಚಿವರು ಪ್ರಶ್ನಿಸಿದರೆ ಅಧಿಕಾರಿಗಳು ಹೌದೆಂದರು.

ಅಧಿಕಾರಿಗಳ ಉತ್ತರದಿಂದ ಸಮಾಧಾನಗೊಳ್ಳದ ಸಚಿವ ಜಮೀರ್ ಅಹ್ಮದ್, ಮುಂದಿನ 15 ದಿನಗಳಲ್ಲಿ ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಲಿದ್ದೇನೆ. ನನ್ನ ಮಾಹಿತಿ ಪ್ರಕಾರ ಸ್ಲಂ ಬೋರ್ಡ್ನಡಿ 2013ರಿಂದ 2023ರವರೆಗೆ 1,67,600 ಮನೆಗಳು ಮಂಜೂರಾಗಿದ್ದರೂ ಒಂದೂ ಮನೆ ನೀಡಲು ಸಾಧ್ಯವಾಗಿಲ್ಲ. ಒಂದು ಮನೆ ಕಟ್ಟಲ್ಲು 7.50 ಲಕ್ಷ ಖರ್ಚಾಗುತ್ತದೆ. ಕೇಂದ್ರದಿಂದ 1.50 ಲಕ್ಷ ರೂ. ರಾಜ್ಯ ಸರಕಾರ 1.20 ಲಕ್ಷ ರೂ. ಸಬ್ಸಿಡಿ ರೂಪದಲ್ಲಿ ನೀಡುತ್ತದೆ. ಉಳಿದ ನಾಲ್ಕೂವರೆ ಲಕ್ಷವನ್ನು ಫಲಾನುಭವಿ ಭರಿಸಬೇಕು. ಶಾಸಕರು ನಾವು ಇಷ್ಟು ಸಾವಿರ ಮನೆ ಮಂಜೂರು ಮಾಡಿದ್ದೇವೆ ಎನ್ನುತ್ತಾರೆಯೇ ಹೊರತು ಅದರ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿಲ್ಲ. ಹೀಗಾಗಿ ಫಲಾನುಭವಿಗಳಿಂದ ನೀಡಬೇಕಾದ ಹಣ ಪಾವತಿಯಾಗುವುದಿಲ್ಲ. ಗುತ್ತಿಗೆದಾರರು ಕೇಂದ್ರ ರಾಜ್ಯದ ಸಬ್ಸಿಡಿಯಡಿ ಪಂಚಾಂಗ, ಪಿಲ್ಲರ್ ಹಾಕಿ ಬಿಡುತ್ತಾರೆ. ಕೇಂದ್ರದಿಂದ ಸಬ್ಸಿಡಿ ಸಿಗುತ್ತಿದೆಯಾದರೂ ಆ ಹಣ ಮನೆ ವೆಚ್ಚದ ಮೇಲೆ ಶೇ. 18 ರಷ್ಟು ಜಿಎಸ್ಟಿ ವೆಚ್ಚ ಹಾಕುವುದರಿಂದ ಅವರು ಕೊಟ್ಟ ಹಣದಲ್ಲಿ ಜಿಎಸ್ಟಿ ಪಾಲಾಗುತ್ತದೆ. ಇದರಿಂದ ಸ್ಲಂ ಬೋರ್ಡ್ನಿಂದ ಫಲಾನುಭವಿಗಳಿಗೆ ಮನೆ ಕೊಡಿಸಲು ಸಾಧ್ಯವಾಗಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ನನ್ನಲ್ಲಿ ಈ ಬಗ್ಗೆ ಮಾಹಿತಿ ಇದೆ. ಯಾವ ಜಿಲ್ಲೆ, ತಾಲೂಕಿನಲ್ಲಿ ಎಷ್ಟು ಮನೆಗಳು ಮಂಜೂರಾಗಿವೆ, ಯಾವ ಹಂತದಲ್ಲಿವೆ ಎಂಬ ಮಾಹಿತಿ ನನ್ನಲ್ಲಿದೆ. ತರಲು ಮರೆತಿದ್ದೇನೆ. ಇಂದು ತುರ್ತಾಗಿ ನಿರ್ಗಮಿಸಬೇಕಿರುವ ಕಾರಣ ಮುಂದಿನ ಸಭೆಗೆ ಮಾಹಿತಿಯೊಂದಿಗೆ ಬರುತ್ತೇನೆ. 2013ರಿಂದ ಇಲ್ಲಿವರೆಗೆ ಜಿಲ್ಲೆಯ ಏಳು ತಾಲೂಕುಗಳಲ್ಲಿ ಎಷ್ಟು ಮನೆಗಳು ಪೂರ್ಣಗೊಂಡು ನೀಡಲಾಗಿದೆ ಅಲ್ಲಿಯವರೆಗಿನ ಸಮಗ್ರ ಮಾಹಿತಿಯನ್ನು ಒದಗಿಸಬೇಕು. ನನ್ನ ಮಾಹಿತಿಗೂ ಅಧಿಕಾರಿಗಳು ನೀಡುವ ಮಾಹಿತಿಗೂ ವ್ಯತ್ಯಾಸ ಕಂಡು ಬಂದರೆ ಸ್ಪಸ್ಪೆಂಡ್ ಮಾಡುವುದಾಗಿ ಎಚ್ಚರಿಸಿದರು.

ಹಾಸ್ಟೆಲ್ ಅವ್ಯವಸ್ಥೆಗೆ ಸಚಿವರ ಆಕ್ರೋಶ

ನಿನ್ನೆ ರಾತ್ರಿ ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ಗೆ ದಿಢೀರ್ ಭೇಟಿ ನೀಡಿದಾಗ ಆ ಹಾಸ್ಟೆಲ್ಗೆ ರಸ್ತೆಯೇ ಇಲ್ಲ. ಸಂದಿಯಲ್ಲಿ ಸ್ಟೀಲ್ ಮೆಟ್ಟಿಲು ಹತ್ತಿ ಹೋಗಬೇಕು. ಬಾತ್ರೂಂ ಕ್ಲೀನ್ ಮಾಡುವವರಿಲ್ಲ. ಐದು ವರ್ಷದಿಂದ ಬೆಡ್ ಕೊಟ್ಟಿಲ್ಲ. ಬೆಡ್ಶೀಟ್ ಒಗೆಯುವರಿಲ್ಲ. ಹಾಸ್ಟೆಲ್ ಪರಿಸ್ಥಿತಿ ಅಧ್ವಾನವಾಗಿದೆ . ಮಕ್ಕಳು ನಾನ್ವೆಜ್ ಊಟ ಬೇಕು ಎಂದು ಕೇಳಿದ್ದಕ್ಕೆ ಹಿಂದೆ ವಾರಕ್ಕೊಮ್ಮೆ ಕೊಡುತ್ತಿದ್ದನ್ನೂ ಅಧಿಕಾರಿ ಅದನ್ನೂ ನಿಲ್ಲಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಬೇಸರ ವ್ಯಕ್ತಪಡಿಸಿದರು.

10 ಹಾಸ್ಟೆಲ್ಗೆ ಒಬ್ಬರೇ ವಾರ್ಡನ್ ಇರುವುದು ಅದರಿಂದ ಕಷ್ಟವಾಗುತ್ತಿದೆ ಎಂದು ಅಧಿಕಾರಿ ಹೇಳಿದಾಗ, ದಿನಕ್ಕೊಂದು ಹಾಸ್ಟೆಲ್ನಂತೆ ಭೇಟಿ ನೀಡಿ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿತ್ತಲ್ಲವೇ ಎಂದು ಕೇಳಿದಾಗ, ಅಧಿಕಾರಿ ತಾನು ಸರಿಪಡಿಸುವುದಾಗಿ ಪ್ರತಿಕ್ರಿಯಿಸಿದರು.

ನಾನು ಬಂದು ನೋಡಿದ ಮೇಲೆ ಸರಿಪಡಿಸುವುದೇ? ನಿಮ್ಮ ಮನೆಯ ಮಕ್ಕಳನ್ನು ಇದೇ ರೀತಿ ನೋಡುತ್ತೀರಾ? ಬಾತ್ರೂಂನಲ್ಲಿ ಫ್ಲಶ್ ಮಾಡುವ ಪೈಪ್ ಕಿತ್ತು ಹೋಗಿದ್ದರೂ ಸರಿಪಡಿಸಿಲ್ಲ. ಆ ಕಟ್ಟಕ್ಕೆ 1.50 ಲಕ್ಷ ರೂ. ಬಾಡಿಗೆ ನೀಡಲಾಗುತ್ತದೆ. ಇದೆಂತಹ ವ್ಯವಸ್ಥೆ ಎಂದು ಅವರು ಪ್ರಶ್ನಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್ ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X