Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಕಿ ಸಮುದಾಯ ಕುರಿತು ಅಮಿತ್‌ ಶಾ ಹೇಳಿಕೆ...

ಕುಕಿ ಸಮುದಾಯ ಕುರಿತು ಅಮಿತ್‌ ಶಾ ಹೇಳಿಕೆ ವಿರೋಧಿಸಿದ ಮಿಜೋ ಸಂಸದರ ಮೈಕ್‌ ಆಫ್!

ವಾರ್ತಾಭಾರತಿವಾರ್ತಾಭಾರತಿ11 Aug 2023 3:26 PM IST
share
ಕುಕಿ ಸಮುದಾಯ ಕುರಿತು ಅಮಿತ್‌ ಶಾ ಹೇಳಿಕೆ ವಿರೋಧಿಸಿದ ಮಿಜೋ ಸಂಸದರ ಮೈಕ್‌ ಆಫ್!

ಹೊಸದಿಲ್ಲಿ: ಮಣಿಪುರದ ಬುಡಕಟ್ಟು ಜನರನ್ನು ಮ್ಯಾನ್ಮಾರ್‌ನವರು ಎಂದು ಹೇಳುವುದು ತಪ್ಪು ಎಂದು ಹೇಳಲು ಯತ್ನಿಸಿದ ಮಿಜೋ ನ್ಯಾಷನಲ್‌ ಫ್ರಂಟ್‌ ಸಂಸದ ಕೆ ವನ್ಲಲ್ವೇನಾ ಅವರ ಮೈಕ್ರೋಫೋನ್‌ ಅನ್ನು ಸ್ವಿಚ್‌ ಆಫ್‌ ಮಾಡಿದ ಘಟನೆ ಗುರುವಾರ ರಾಜ್ಯಸಭೆಯಲ್ಲಿ ನಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ ಅವರು ಮಣಿಪುರ ಹಿಂಸಾಚಾರ ಉಲ್ಲೇಖಿಸುವಾಗ ಮಿಜೋರಾಂನಿಂದ ವಲಸೆ ಬರುವವರನ್ನು ಉಲ್ಲೇಖಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ಗುರುವಾರ ಮಾತನಾಡಿದ ವನ್ಲಲ್ವೇನಾ “ನಾನೊಬ್ಬ ಬುಡಕಟ್ಟು ಸಂಸದ. ಮಾನ್ಯ ಗೃಹ ಸಚಿವರು ಮಣಿಪುರದ ಬುಡಕಟ್ಟು ಜನರು ಮ್ಯಾನ್ಮಾರ್‌ನವರು ಎಂದು ಹೇಳಿದರು. ನಾವು ಮ್ಯಾನ್ಮಾರ್‌ನವರು ಅಲ್ಲ. ನಾವು ಭಾರತೀಯರು. ಬ್ರಿಟಿಷರ ಆಡಳಿತಕ್ಕಿಂತಲೂ ಮುಂಚೆ ನಾವಿಲ್ಲೇ ಇದ್ದೆವು,” ಎಂದು ಹೇಳಿದರು.

ಅವರ ಹೇಳಿಕೆಯನ್ನು ಕಡತದಲ್ಲಿ ಸೇರಿಸದಂತೆ ನಂತರ ರಾಜ್ಯಸಭಾ ಸಭಾಪತಿ ಹೇಳಿದರು.

ನಂತರ ಮಾಧ್ಯಮವೊಂದರ ಜೊತೆ ಮಾತನಾಡಿದ ಸಂಸದ, ತಮ್ಮ ಪಕ್ಷ ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತದೆ, ಅವಿಶ್ವಾಸ ನಿರ್ಣಯವನ್ನು ಮಣಿಪುರ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷ ಬೆಂಬಲಿಸುತ್ತದೆ. ಅದರ ಹೊರತಾಗಿ ನಮ್ಮ ಬೆಂಬಲ ಎನ್‌ಡಿಎಗೆ” ಎಂದು ಅವರು ಹೇಳಿದರು.

ಬುಧವಾರ ಮಣಿಪುರ ಕುರಿತ ಚರ್ಚೆಯಲ್ಲಿ ಮಾತನಾಡಿದ್ದ ಶಾ, ಮ್ಯಾನ್ಮಾರ್‌ನಲ್ಲಿ 2021ರಲ್ಲಿ ನಡೆದ ಮಿಲಿಟರಿ ಕ್ಷಿಪ್ರ ಕ್ರಾಂತಿಯಲ್ಲಿ ಕೂಕಿ ಡೆಮಾಕ್ರೆಟಿಕ್‌ ಫ್ರಂಟ್‌ ಎಂಬ ಸಂಘಟನೆ ಮಿಲಿಟರಿ ನಾಯಕತ್ವದ ವಿರುದ್ಧ ಹೋರಾಡಿತ್ತು. ಅಲ್ಲಿನ ಸಮಸ್ಯೆಯಿಂದಾಗಿ ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ಹಲವಾರು ಕೂಕಿಗಳು ಬಂದಿದ್ದರು ಎಂದಿದ್ದರು.

ಈ ವಲಸೆಯು ರಾಜ್ಯದ ಬಹುಸಂಖ್ಯಾತ ಮೈತ ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು ಎಂದು ಅವರು ಹೇಳಿದ್ದರು.

ಭಾರತದಲ್ಲಿ ಕೂಕಿ ಡೆಮಾಕ್ರೆಟಿಕ್‌ ಫ್ರಂಟ್‌ ಎಂಬ ಕೂಕಿ ಸಂಘಟನೆಯಿಲ್ಲ ಎಂದು ಕೂಕಿ ನ್ಯಾಷನಲ್‌ ಆರ್ಗನೈಜೇಶನ್‌ (ಬರ್ಮಾ) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿತ್ತು. ಮ್ಯಾನ್ಮಾರ್‌ ಮಿಲಿಟರಿ ಆಡಳಿತದ ವಿರುದ್ಧ ಹೋರಾಡುವ ಏಕೈಕ ಸಂಘಟನೆ ಕೂಕಿ ನ್ಯಾಷನಲ್‌ ಆರ್ಮಿ (ಬರ್ಮಾ) ಎಂದಾಗಿದೆ ಎಂದೂ ಪತ್ರದಲ್ಲಿ ಹೇಳಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X