Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವಸ್ಥಾನದಲ್ಲಿ ಅಣಕು ಕಾರ್ಯಾಚರಣೆ:...

ದೇವಸ್ಥಾನದಲ್ಲಿ ಅಣಕು ಕಾರ್ಯಾಚರಣೆ: ‘ಉಗ್ರನ ವೇಷ’ ಧರಿಸಿದ್ದ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ

ವಾರ್ತಾಭಾರತಿವಾರ್ತಾಭಾರತಿ9 Aug 2023 10:26 PM IST
share
ದೇವಸ್ಥಾನದಲ್ಲಿ ಅಣಕು ಕಾರ್ಯಾಚರಣೆ: ‘ಉಗ್ರನ ವೇಷ’ ಧರಿಸಿದ್ದ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ

ನಾಸಿಕ್: ಮಹಾರಾಷ್ಟ್ರದ ಧುಲೆ ನಗರದಲ್ಲಿ ಪೊಲೀಸ್ ಇಲಾಖೆಯು ಆಯೋಜಿಸಿದ್ದ ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ‘ಉಗ್ರನ ವೇಷ’ ಧರಿಸಿದ್ದ ಪೊಲೀಸ್ ಅಧಿಕಾರಿಯ ಕೆನ್ನೆಗೆ ಬಾರಿಸಿರುವ ಘಟನೆ ನಡೆದಿದೆ ಎಂದು Times Of India ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆದರೆ, ಅದು ಅಣಕು ಕಾರ್ಯಾಚರಣೆ ಎಂಬ ಸಂಗತಿ ತಿಳಿಯದೆ ಆ ವ್ಯಕ್ತಿ ಅಂತಹ ಕೃತ್ಯ ನಡೆಸಿದ್ದರಿಂದಾಗಿ ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಬಿಟ್ಟು ಕಳಿಸಲಾಗಿದೆ. ಈ ಘಟನೆಯು ಸೋಮವಾರ ಸಂಜೆ ನಡೆದಿದೆ.

ತನ್ನ ಮಕ್ಕಳು ‘ಉಗ್ರರ ವೇಷ’ ಧರಿಸಿರುವವರನ್ನು ಕಂಡು ಅಳತೊಡಗಿದ್ದನ್ನು ಕಂಡು ಆ ವ್ಯಕ್ತಿಯು ಕುಪಿತಗೊಂಡಿದ್ದಾನೆ ಎಂದು ಹೇಳಲಾಗಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್ ಪೆಕ್ಟರ್ ಹೇಮಂತ್ ಪಾಟೀಲ್, ಧುಲೆ ನಗರದ ದೇವಾಲಯವೊಂದರಲ್ಲಿ ಉಗ್ರಗಾಮಿ ನಿಗ್ರಹ ಪ್ರತಿಸ್ಪಂದನಾ ಅಣಕು ಕಾರ್ಯಾಚರಣೆಯಲ್ಲಿ ಸುಮಾರು 80-90ಕ್ಕಿಂತ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು ಎಂದು ತಿಳಿಸಿದ್ದಾರೆ.

ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ಸದ್ಯ ತನ್ನ ವರ್ತನೆಯಿಂದ ಪ್ರಶ್ನೆಗೊಳಗಾಗಿರುವ ವ್ಯಕ್ತಿಯೂ ತನ್ನ ಕುಟುಂಬದ ಸದಸ್ಯರೊಂದಿಗೆ ದೇವಾಲಯದಲ್ಲಿ ಉಪಸ್ಥಿತನಿದ್ದ ಎಂದು ವರದಿಯಾಗಿದೆ.

ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರಗಾಮಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಪೊಲೀಸರು ಪ್ರಾರಂಭಿಸುತ್ತಿದ್ದಂತೆಯೆ, ಪೊಲೀಸರನ್ನು ಎದುರುಗೊಂಡಿರುವ ಆ ವ್ಯಕ್ತಿಯು, ಉಗ್ರನ ವೇಷ ಧರಿಸಿದ್ದ ಪೊಲೀಸ್ ಅಧಿಕಾರಿಯ ಕೆನ್ನೆಗೆ ಬಾರಿಸಿ, “ಸಣ್ಣ ಮಕ್ಕಳು ಹೆದರಿಕೊಂಡಿದ್ದಾರೆ ಮತ್ತು ಅಳಲು ಪ್ರಾರಂಭಿಸಿದ್ದಾರೆ ಎಂಬುದು ನಿನಗೆ ಅರ್ಥವಾಗುತ್ತಿಲ್ಲವೆ?” ಎಂದು ಪ್ರಶ್ನಿಸಿದ್ದಾನೆ.

ಕೂಡಲೇ ಆ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಪೊಲೀಸ್ ಅಧಿಕಾರಿಗಳು, ಅದು ಪೊಲೀಸರ ಅಣಕು ಕಾರ್ಯಾಚರಣೆ ಎಂಬ ಸಂಗತಿಯನ್ನು ಆ ವ್ಯಕ್ತಿಗೆ ವಿವರಿಸಿದ್ದಾರೆ.

“ನಂತರ ಆ ವ್ಯಕ್ತಿ ಪೊಲೀಸರ ಕ್ಷಮೆ ಯಾಚಿಸಿದ ಮತ್ತು ಆ ವ್ಯಕ್ತಿಯ ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದು ಪೊಲೀಸ್ ಇನ್ಸ್ ಪೆಕ್ಟರ್ ಹೇಮಂತ್ ಪಾಟೀಲ್ ತಿಳಿಸಿದ್ದಾರೆ.

Tags

temple
share
ವಾರ್ತಾಭಾರತಿ
ವಾರ್ತಾಭಾರತಿ
Next Story
X