Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೂಳು ತುಂಬಿದ ಕೊಳದಿಂದ ಹೊರಬರಲಾಗದೆ...

ಹೂಳು ತುಂಬಿದ ಕೊಳದಿಂದ ಹೊರಬರಲಾಗದೆ ಒದ್ದಾಡಿದ ನಾಗಾಲ್ಯಾಂಡ್ ಸಚಿವ

ಮೇಲೇಳಲು ಸಹಾಯ ಮಾಡುತ್ತಿದ್ದರೂ ಮತ್ತೆ ಕೆಸರಿಗೆ ಜಾರಿದ ಸಚಿವರ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ10 Feb 2024 7:30 PM IST
share
ಹೂಳು ತುಂಬಿದ ಕೊಳದಿಂದ ಹೊರಬರಲಾಗದೆ ಒದ್ದಾಡಿದ ನಾಗಾಲ್ಯಾಂಡ್ ಸಚಿವ

ಕೊಹಿಮಾ (ನಾಗಾಲ್ಯಾಂಡ್): ನಾಗಾಲ್ಯಾಂಡಿನ ಪ್ರವಾಸೋದ್ಯಮ ಮತ್ತು ಉನ್ನತ ಶಿಕ್ಷಣ ಸಚಿವ ತೇಮ್ಜೆನ್ ಇಮ್ನಾ ಅಲಾಂಗ್ ತಮ್ಮ ಕಚಗುಳಿ ಇಡುವ ಹಾಸ್ಯ ಹಾಗೂ ರಂಜನೀಯ ಸಾಮಾಜಿಕ ಮಾಧ್ಯಮ ಶೀರ್ಷಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು ನಿಯಮಿತವಾಗಿ ತಮ್ಮ ಹಿಂಬಾಲಕರಿಗೆ ಜೀವನ ಸಲಹೆ ಹಾಗೂ ಹೃದಯವನ್ನು ಬೆಚ್ಚಗಾಗಿಸುವ ವಿಡಿಯೊಗಳನ್ನೂ ಪೋಸ್ಟ್ ಮಾಡುತ್ತಿರುತ್ತಾರೆ. ಈ ಬಾರಿ ಅವರು ತಮ್ಮ ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ತಮಾಷೆಯ ವಿಡಿಯೊವೊಂದನ್ನು ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ. ಆ ಪೋಸ್ಟ್ ನಲ್ಲಿ ತಮಗೆ ಮೂವರು ವ್ಯಕ್ತಿಗಳು ಹೂಳು ತುಂಬಿದ ಕೊಳದಿಂದ ಹೊರ ಬರಲು ನೆರವು ನೀಡುತ್ತಿದ್ದರೂ, ತಾವು ಹೊರಬರಲಾಗದೆ ಒದ್ದಾಡುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಕಾರನ್ನು ಖರೀದಿಸುವ ಮುನ್ನ ವಾಹನದ ಸುರಕ್ಷತಾ ಮಾನದಂಡಗಳ ಮೌಲ್ಯಾಂಕದ ಬಗ್ಗೆ ತಿಳಿದುಕೊಳ್ಳಲು ಕಾರಿನ ಎನ್ಸಿಎಪಿ(ನೂತನ ಕಾರಿನ ಮೌಲ್ಯಮಾಪನ ಕಾರ್ಯಕ್ರಮಗಳು)ಯನ್ನು ಪರಿಶೀಲಿಸುವಂತೆ ಜನರಿಗೆ ಸಲಹೆ ನೀಡಲು ಅವರು ತಮ್ಮ ಈ ತಮಾಷೆಯ ಪೋಸ್ಟ್ ಅನ್ನು ಬಳಸಿಕೊಂಡಿದ್ದಾರೆ ಎಂದು ndtv.com ವರದಿ ಮಾಡಿದೆ.

“ಇಂದು ಜೆಸಿಬಿಯ ಪರೀಕ್ಷೆಯಿತ್ತು. ಇದೆಲ್ಲ ಎನ್ಸಿಎಪಿ ಮೌಲ್ಯದ ಕುರಿತಾಗಿದೆ. ವಾಹನವನ್ನು ಖರೀದಿಸುವುದಕ್ಕೂ ಮುನ್ನ ಖಂಡಿತವಾಗಿ ಎನ್ಸಿಎಪಿ ಮೌಲ್ಯಾಂಕವನ್ನು ಪರಿಶೀಲಿಸಿ. ಯಾಕೆಂದರೆ, ಇದು ನಿಮ್ಮ ಜೀವದ ಪ್ರಶ್ನೆಯಾಗಿದೆ” ಎಂದು ಇಮ್ನಾ ತಮ್ಮ ಪೋಸ್ಟ್ ಗೆ ಶೀರ್ಷಿಕೆ ನೀಡಿದ್ದಾರೆ.

ಇಮ್ನಾ ಹಂಚಿಕೊಂಡಿರುವ ವಿಡಿಯೊ ತುಣುಕಿನಲ್ಲಿ, ಇಮ್ನಾ ಅಲಾಂಗ್ ಹೂಳು ತುಂಬಿದ ಕೊಳದಿಂದ ಹೊರ ಬರಲು ಒದ್ದಾಡುತ್ತಿರುತ್ತಾರೆ. ಅವರನ್ನು ಹಿಂದೆಯಿಂದ ಒಬ್ಬರು ನೂಕುತ್ತಿದ್ದರೆ, ಮುಂದಿನಿಂದ ಇಬ್ಬರು ಅವರನ್ನು ಮೇಲಕ್ಕೆ ಎಳೆಯಲು ಪ್ರಯತ್ನಿಸುತ್ತಿರುತ್ತಾರೆ. ಹೀಗಿದ್ದೂ, ಸಚಿವ ಇಮ್ನಾ ಒದ್ದೆಯಾಗಿರುವ ಕೆಸರಿಗೆ ಜಾರುತ್ತಿರುತ್ತಾರೆ. ನಂತರ ಅವರು ಮಧ್ಯದಲ್ಲೇ ಸಿಕ್ಕಿ ಹಾಕಿಕೊಳ್ಳುತ್ತಾರೆ. ಆದರೆ, ಮತ್ತಷ್ಟು ಪ್ರಯತ್ನಗಳ ನಂತರ ಅವರು ಕೊಳದಿಂದ ಹೊರ ಬಂದು, ತಮಗೆ ನೆರವು ನೀಡಿದ ಜನರಿಗೆ ಧನ್ಯವಾದ ಸಲ್ಲಿಸುತ್ತಾರೆ.

ಇಮ್ನಾರ ಈ ತಮಾಷೆಯ ವೀಡಿಯೊ ಕೇವಲ ಕೆಲವೇ ಗಂಟೆಗಳಲ್ಲಿ 1,14,000ಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದಿದ್ದು, 8,000ಕ್ಕೂ ಹೆಚ್ಚು ಮೆಚ್ಚುಗೆಯನ್ನೂ ಗಿಟ್ಟಿಸಿದೆ.

ಪ್ರತಿಕ್ರಿಯೆಯ ವಿಭಾಗದಲ್ಲಿ ಓರ್ವ ಬಳಕೆದಾರ, “ನಮ್ಮ ದೇಶಕ್ಕೆ ಇಂತಹ ರಾಜಕಾರಣಿಗಳ ಅಗತ್ಯವಿದೆ. ವಿಡಿಯೊವನ್ನು ನೋಡುತ್ತಿದ್ದರೆ, ನಿಮಗೆ ಒಂದು ಕ್ಷಣವೂ ಅವರು ಭಾರತದ ದೊಡ್ಡ ರಾಜಕಾರಣಿ ಎಂಬ ಭಾವನೆ ಬರುವುದಿಲ್ಲ. ಬದಲಿಗೆ, ಸಾಮಾನ್ಯ ವ್ಯಕ್ತಿಯೊಬ್ಬ ತನ್ನ ಜನರೊಂದಿಗೆ ಸಂಭ್ರಮ ಪಡುತ್ತಿದ್ದಾರೆ ಎಂದು ನೀವು ಭಾವಿಸುತ್ತೀರಿ. ಅಂತಹ ನಿರಹಂಕಾರಿ ನಾಯಕ ಇಮ್ನಾ ಅಲಾಂಗ್” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಇದು ಹೇಳುವುದು ತಪ್ಪಾಗಿದ್ದರೂ, ನೀವು ಪರಿಶುದ್ಧ ಪ್ರೀತಿ! ನಾನು ಈ ದಿನ ನೋಡಿದ ಅತ್ಯಂತ ಸಿಹಿಯಾದ ಸಂಗತಿಯಿದು’ ಎಂದು ಮತ್ತೊಬ್ಬ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಇಮ್ನಾ ಅಲಾಂಗ್ ಸಕ್ರಿಯ ಸಾಮಾಜಿಕ ಬಳಕೆದಾರರಾಗಿದ್ದಾರೆ. ಅವರು ಕಳೆದ ವರ್ಷ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ತಾವು ನೀಡಿದ್ದ ಉಡುಗೊರೆಯ ಚಿತ್ರವನ್ನು ಹಂಚಿಕೊಂಡಿದ್ದರು. ಆ ತಮಾಷೆಯ ಪೋಸ್ಟ್ ಕೂಡಾ ಸಾಕಷ್ಟು ವೈರಲ್ ಆಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X