Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮರ ವಿರುದ್ಧ ಸುಳ್ಳು ಸುದ್ದಿ...

ಮುಸ್ಲಿಮರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ‘Zee News’ಗೆ NBDSA ಪ್ರಾಧಿಕಾರದಿಂದ ಛೀಮಾರಿ

ವಾರ್ತಾಭಾರತಿವಾರ್ತಾಭಾರತಿ23 May 2026 10:59 PM IST
share
ಮುಸ್ಲಿಮರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ‘Zee News’ಗೆ NBDSA ಪ್ರಾಧಿಕಾರದಿಂದ ಛೀಮಾರಿ

ಹೊಸದಿಲ್ಲಿ: ಮುಸ್ಲಿಮರನ್ನು ಗುರಿಯಾಗಿಸುವ ಉದ್ದೇಶದಿಂದ ಪರಿಶೀಲಿಸದ ಮಾಹಿತಿಗಳನ್ನು ಆಧರಿಸಿ ದಾರಿ ತಪ್ಪಿಸುವ ಹಾಗೂ ಕೋಮು ಸೂಕ್ಷ್ಮ ವಿಷಯಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (NBDSA) ‘ಝೀ ನ್ಯೂಸ್’ಗೆ ಛೀಮಾರಿ ಹಾಕಿದೆ.

ಈ ಸಂಬಂಧ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿರುವ NBDSA ಅಧ್ಯಕ್ಷ ಎ.ಕೆ. ಸಿಕ್ರಿ, ವಾಹಿನಿಯು ನಿಖರತೆ, ಪರಿಶೀಲನೆ ಹಾಗೂ ಕೋಮು ಸೌಹಾರ್ದತೆಯಂತಹ ಪತ್ರಿಕೋದ್ಯಮದ ಮೂಲಭೂತ ತತ್ವಗಳನ್ನು ಉಲ್ಲಂಘಿಸಿದೆ ಎಂದು ಹೇಳಿದ್ದಾರೆ.

ಒಂದು ಪ್ರಕರಣದಲ್ಲಿ ಸಂಬಂಧಿತ ಸುದ್ದಿ ತುಣುಕನ್ನು ತೆಗೆದುಹಾಕುವಂತೆ ಪ್ರಾಧಿಕಾರ ಸೂಚಿಸಿದ್ದು, ಮತ್ತೊಂದು ಪ್ರಕರಣದಲ್ಲಿ ಎಚ್ಚರಿಕೆ ನೀಡಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

ಮೊದಲ ಪ್ರಕರಣವು 2025ರ ಜುಲೈ 13ರಂದು ಪ್ರಸಾರವಾದ ಕಾರ್ಯಕ್ರಮಕ್ಕೆ ಸಂಬಂಧಿಸಿದೆ. ಶಿವಭಕ್ತರು ನಡೆಸುವ ಕನ್ವರ್ ಯಾತ್ರೆಯ ಸಂದರ್ಭದಲ್ಲಿ ದಿಲ್ಲಿಯ ರಸ್ತೆಯೊಂದರಲ್ಲಿ ಒಡೆದ ಗಾಜಿನ ಚೂರುಗಳು ಚೆಲ್ಲಾಪಿಲ್ಲಿಯಾಗಿದ್ದ ಘಟನೆ ಕುರಿತು ‘ಝೀ ನ್ಯೂಸ್’ ಚರ್ಚೆ ಪ್ರಸಾರ ಮಾಡಿತ್ತು. ಈ ಘಟನೆ ಕನ್ವರ್ ಯಾತ್ರಿಕರನ್ನು ಗುರಿಯಾಗಿಸಿಕೊಂಡು ಮಾಡಿರುವ ಪಿತೂರಿಯಾಗಿರಬಹುದೇ ಎಂಬ ಅನುಮಾನವನ್ನು ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಲಾಗಿತ್ತು.

ಆದರೆ ದಾಖಲೆಗಳ ಪ್ರಕಾರ, ಗಾಜಿನ ಫಲಕಗಳನ್ನು ಸಾಗಿಸುತ್ತಿದ್ದ ಇ–ರಿಕ್ಷಾಗೆ ಹಿಂಬದಿಯಿಂದ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಜುಗಳು ರಸ್ತೆಯ ಮೇಲೆ ಬಿದ್ದಿದ್ದವು ಎಂದು ತಿಳಿದುಬಂದಿದೆ.

ಚರ್ಚೆಯ ವೇಳೆ ನಿರೂಪಕ ಭಾಗವಹಿಸಿದ್ದವರ ಬಳಿ ಇಂತಹ ಅನುಮಾನ ಹುಟ್ಟಿಸುವ ಪ್ರಶ್ನೆಗಳನ್ನು ಕೇಳಿದ್ದರಿಂದ ಆರೋಪಗಳಿಗೆ ಮತ್ತಷ್ಟು ಉತ್ತೇಜನ ಸಿಕ್ಕಿತ್ತು ಎಂದು NBDSA ಹೇಳಿದೆ. ಪರಿಶೀಲಿಸದ ಆರೋಪಗಳನ್ನು ಹಿಂದೂ ಯಾತ್ರಾರ್ಥಿಗಳ ವಿರುದ್ಧದ ದ್ವೇಷದೊಂದ ಉದ್ದೇಶಪೂರ್ವಕವಾಗಿ ಚರ್ಚೆ ರೂಪಿಸಲಾಗಿದೆ ಎಂದು ಪ್ರಾಧಿಕಾರ ಟೀಕಿಸಿದೆ.

‘ಯಾವುದೇ ಸ್ವತಂತ್ರ ಪರಿಶೀಲನೆ ಇಲ್ಲದೆ ಊಹಾಪೋಹಗಳು ಮತ್ತು ರಾಜಕೀಯ ಹೇಳಿಕೆಗಳ ಆಧಾರದ ಮೇಲೆ ವಾಹಿನಿಯು ತನ್ನದೇ ಆದ ನಿರೂಪಣೆಯನ್ನು ಕಟ್ಟಿಕೊಟ್ಟಿದೆ. ಸಮುದಾಯವೊಂದಕ್ಕೆ ಕಳಂಕ ಹಚ್ಚಿ, ಕೋಮು ಸೌಹಾರ್ದತೆಯನ್ನು ಕದಡುವ ರೀತಿಯ ಚರ್ಚೆ ಸುದ್ದಿ ವಾಹಿನಿಗೆ ತಕ್ಕದ್ದಲ್ಲ’ ಎಂದು ಪ್ರಾಧಿಕಾರ ಅಭಿಪ್ರಾಯಪಟ್ಟಿದೆ.

ಇನ್ನೊಂದು ಪ್ರಕರಣವು 2024ರ ಡಿಸೆಂಬರ್ 1ರಂದು ಪ್ರಸಾರವಾದ ಕಾರ್ಯಕ್ರಮಕ್ಕೆ ಸಂಬಂಧಿಸಿದೆ. ಈ ಕಾರ್ಯಕ್ರಮದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದೆ ಎಂದು ‘ಝೀ ನ್ಯೂಸ್’ ವರದಿ ಮಾಡಿತ್ತು.

ಈ ಕುರಿತು ದೂರು ನೀಡಿದ್ದ ವಕೀಲ ಇಂದ್ರಜೀತ್ ಘೋರ್ಪಡೆ, ದೇವರ ವಿಗ್ರಹವನ್ನು ಅಪವಿತ್ರಗೊಳಿಸುವ ದೃಶ್ಯಗಳನ್ನು ವಾಹಿನಿ ಬಾಂಗ್ಲಾದೇಶದ ಘಟನೆ ಎಂದು ಪ್ರಸಾರ ಮಾಡಿದೆ. ಆದರೆ ಆ ದೃಶ್ಯಗಳು ಪಶ್ಚಿಮ ಬಂಗಾಳದ ಸಾಂಪ್ರದಾಯಿಕ ಆಚರಣೆಯ ಭಾಗವಾಗಿದ್ದು, ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಪದ್ಧತಿಯೊಂದಾಗಿದೆ ಎಂದು ವಾದಿಸಿದ್ದರು.

ಈ ಆಚರಣೆಯ ವೇಳೆ ಹಳೆಯ ವಿಗ್ರಹವನ್ನು ವಿಧಿವತ್ತಾಗಿ ಭಗ್ನಗೊಳಿಸಿ, ಹೊಸ ವಿಗ್ರಹ ನಿರ್ಮಾಣವಾಗುವವರೆಗೆ ನೀರಿನಲ್ಲಿ ಮುಳುಗಿಸಲಾಗುತ್ತದೆ ಎಂದು ಅವರು ವಿವರಿಸಿದ್ದರು.

ತಾನು ಪ್ರಸಾರ ಮಾಡಿದ್ದ ದೃಶ್ಯಗಳು ಬಾಂಗ್ಲಾದೇಶದ್ದೇ ಎಂಬುದಕ್ಕೆ ಯಾವುದೇ ಪುರಾವೆ ಸಲ್ಲಿಸುವಲ್ಲಿ ‘ಝೀ ನ್ಯೂಸ್’ ವಿಫಲವಾಗಿದೆ ಎಂಬುದನ್ನು NBDSA ಗಮನಿಸಿತ್ತು. ಹೀಗಾಗಿ, ಇಂದ್ರಜೀತ್ ಘೋರ್ಪಡೆ ಸಲ್ಲಿಸಿದ್ದ ವಾದವನ್ನು ಮಾನ್ಯಗೊಳಿಸಿದ ಪ್ರಾಧಿಕಾರ, ವಾಹಿನಿಯ ಪ್ರಸಾರ ತಪ್ಪು ಆರೋಪ ಹಾಗೂ ದಾರಿ ತಪ್ಪಿಸುವ ಸ್ವರೂಪದ್ದಾಗಿದೆ ಎಂದು ಹೇಳಿದೆ.

ಆದರೆ ಸಂಬಂಧಿತ ವಿಡಿಯೊವನ್ನು ವಾಹಿನಿಯು ಈಗಾಗಲೇ ತೆಗೆದುಹಾಕಿರುವುದನ್ನು ಪರಿಗಣಿಸಿದ NBDSA, ದಂಡ ವಿಧಿಸುವ ಬದಲು ಎಚ್ಚರಿಕೆ ನೀಡಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

Tags

NBDSAZee NewsMuslims
share
ವಾರ್ತಾಭಾರತಿ
ವಾರ್ತಾಭಾರತಿ
Next Story
X