Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಎನ್ ಸಿಪಿ ಬಣಗಳ ಪ್ರತ್ಯೇಕ ಶಕ್ತಿ...

ಎನ್ ಸಿಪಿ ಬಣಗಳ ಪ್ರತ್ಯೇಕ ಶಕ್ತಿ ಪ್ರದರ್ಶನ: ಸಂಖ್ಯಾಬಲದಲ್ಲಿ ಶರದ್ ಪವಾರ್ ರನ್ನು ಸೋಲಿಸಿದ ಅಜಿತ್ ಪವಾರ್

ವಾರ್ತಾಭಾರತಿವಾರ್ತಾಭಾರತಿ5 July 2023 2:50 PM IST
share
ಎನ್ ಸಿಪಿ ಬಣಗಳ ಪ್ರತ್ಯೇಕ ಶಕ್ತಿ ಪ್ರದರ್ಶನ: ಸಂಖ್ಯಾಬಲದಲ್ಲಿ ಶರದ್ ಪವಾರ್ ರನ್ನು ಸೋಲಿಸಿದ ಅಜಿತ್ ಪವಾರ್
83ರ ಹರೆಯದ ಪವಾರ್ ಮುಖವು ಎರಡೂ ಸಭೆಗಳಲ್ಲಿ ವೇದಿಕೆಯ ಹಿಂದಿನ ಫ್ಲೆಕ್ಸ್‌ನಲ್ಲಿತ್ತು. ಶರದ್ ಪವಾರ್ ಕರೆದಿರುವ ಸಭೆ ಹಾಗೂ ಅವರ ವಿರುದ್ಧ ಬಂಡಾಯ ಎದ್ದಿರುವ ಸೋದರಳಿಯ ಅಜಿತ್ ಪವಾರ್ ಕರೆದಿದ್ದ ಸಭೆಯಲ್ಲಿ ಪವಾರ್ ಫೋಟೊ ಕಾಣಿಸಿಕೊಂಡಿದೆ.

ಮುಂಬೈ: ಶರದ್ ಪವಾರ್ ಹಾಗೂ ಅವರ ಸೋದರಳಿಯ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಬಣಗಳು ಬುಧವಾರ ಮುಂಬೈನಲ್ಲಿ ಪ್ರತ್ಯೇಕ ಶಕ್ತಿ ಪ್ರದರ್ಶನವನ್ನು ಮಾಡಿದ್ದು ಬಂಡಾಯ ಎದ್ದಿರುವ ಅಜಿತ್ ಪವಾರ್ ಬುಧವಾರದ ಸಂಖ್ಯಾಬಲದ ಆಟದಲ್ಲಿ ಶರದ್ ಪವಾರ್ ಅವರನ್ನು ಸೋಲಿಸಿದರು.

ಇಲ್ಲಿಯವರೆಗೆ, 14 ಶಾಸಕರು ಶರದ್ ಪವಾರ್ ಅವರನ್ನು ಬೆಂಬಲಿಸಿ ವೈ.ಬಿ. ಚವಾಣ್ ಕೇಂದ್ರಕ್ಕೆ ತೆರಳಿದ್ದಾರೆ. ಏತನ್ಮಧ್ಯೆ, ಅಜಿತ್ ಪವಾರ್ ಬಾಂದ್ರಾದ ಮುಂಬೈ ಶಿಕ್ಷಣ ಟ್ರಸ್ಟ್ ನಲ್ಲಿ ಕರೆದಿರುವ ಸಭೆಗೆ 29 ಶಾಸಕರು ಹಾಗೂ ನಾಲ್ವರು ಎಂಎಲ್ ಸಿಗಳು ಹಾಜರಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಅನಂತ್ ಕಲ್ಸೆ ಪ್ರಕಾರ, ಅಜಿತ್ ಪವಾರ್ ಅನರ್ಹತೆಯನ್ನು ತಪ್ಪಿಸಲು ಕನಿಷ್ಠ 36 ಶಾಸಕರ ಬೆಂಬಲ ಅಗತ್ಯವಿದೆ.

83ರ ಹರೆಯದ ಪವಾರ್ ಮುಖವು ಎರಡೂ ಸಭೆಗಳಲ್ಲಿ ವೇದಿಕೆಯ ಹಿಂದಿನ ಫ್ಲೆಕ್ಸ್‌ನಲ್ಲಿತ್ತು. ಶರದ್ ಪವಾರ್ ಕರೆದಿರುವ ಸಭೆ ಹಾಗೂ ಅವರ ವಿರುದ್ಧ ಬಂಡಾಯ ಎದ್ದಿರುವ ಸೋದರಳಿಯ ಸಭೆಯಲ್ಲಿ ಪವಾರ್ ಫೋಟೊ ಕಾಣಿಸಿಕೊಂಡಿದೆ.

ಬಹುಪಾಲು ಎನ್‌ಸಿಪಿ ಶಾಸಕರ ಬೆಂಬಲ ತನಗಿದೆ ಪ್ರತಿಪಾದಿಸುವ ಅಜಿತ್ ಪವಾರ್ ನೇತೃತ್ವದ ಬಣವು ತನ್ನ ಫೋಟೋವನ್ನು ಬಳಸದಂತೆ ಪವಾರ್ ಹೇಳಿಕೆಯನ್ನು ಲೆಕ್ಕಿಸದೆ ಅವರ ಫೋಟೊವನ್ನು ಬಳಸಿಕೊಂಡಿದೆ.

ಅಚ್ಚರಿಯ ನಡೆಯಲ್ಲಿ, ಅಜಿತ್ ಪವಾರ್ ಅವರ ಆಪ್ತ ಸಹಾಯಕ ಸ್ವತಂತ್ರ ಶಾಸಕ ದೇವೇಂದ್ರ ಭುಯಾರ್ ಅವರು ಶರದ್ ಪವಾರ್ ಅವರನ್ನು ಭೇಟಿ ಮಾಡಲು ವೈ ಬಿ ಚವಾಣ್ ಕೇಂದ್ರಕ್ಕೆ ತಲುಪಿದರು. ಶಿರೂರಿನ ಎನ್‌ಸಿಪಿ ಶಾಸಕ ಅಶೋಕ್ ಪವಾರ್ ಕೂಡ ಶರದ್ ಪವಾರ್ ಜೊತೆಗೂಡಿದರು. ಈ ವಾರದ ಆರಂಭದಲ್ಲಿ ಅಜಿತ್ ಪವಾರ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X