ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಎನ್ಡಿಎಗೆ ಐತಿಹಾಸಿಕ ಜಯ; ಮೋದಿ ಸಂತಸ

CREDIT: timesofindia
ತಿರುವನಂತಪುರ: ತಿರುವನಂತಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಐತಿಹಾಸಿಕ ಬಹುಮತ ಸಾಧಿಸಿದೆ. ಈ ಫಲಿತಾಂಶವನ್ನು ಕೇರಳದ ರಾಜಕೀಯದಲ್ಲಿ ಮಹತ್ವದ ತಿರುವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ‘ತಿರುವನಂತಪುರಕ್ಕೆ ಧನ್ಯವಾದಗಳು. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ದೊರೆತ ಬಹುಮತವು ಕೇರಳ ರಾಜಕೀಯದಲ್ಲಿ ಮಹತ್ವದ ಕ್ಷಣವಾಗಿದೆ. ರಾಜ್ಯದ ಅಭಿವೃದ್ಧಿಯ ಆಕಾಂಕ್ಷೆಗಳನ್ನು ನಮ್ಮ ಪಕ್ಷದಿಂದ ಮಾತ್ರ ಸಾಕಾರಗೊಳಿಸಬಹುದು ಎಂಬ ವಿಶ್ವಾಸವನ್ನು ಜನತೆ ವ್ಯಕ್ತಪಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ತಿರುವನಂತಪುರದ ಸಮಗ್ರ ಅಭಿವೃದ್ಧಿಗೆ ಎನ್ಡಿಎ ಬದ್ಧವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿ, ನಗರ ಸೇವೆಗಳ ಸುಧಾರಣೆ ಹಾಗೂ ಜನರ ಜೀವನವನ್ನು ಸುಲಭಗೊಳಿಸುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.
My gratitude to the people across Kerala who voted for BJP and NDA candidates in the local body polls in the state. Kerala is fed up of UDF and LDF. They see NDA as the only option that can deliver on good governance and build a #VikasitaKeralam with opportunities for all.
— Narendra Modi (@narendramodi) December 13, 2025







