Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ವಿದ್ಯುತ್ತೂ ಇಲ್ಲ, ವಿದ್ಯುತ್ ಬಿಲ್ಲೂ...

"ವಿದ್ಯುತ್ತೂ ಇಲ್ಲ, ವಿದ್ಯುತ್ ಬಿಲ್ಲೂ ಬರುವುದಿಲ್ಲ": ಬಿಹಾರ ಸಿಎಂ ನಿತೀಶ್ ಕುಮಾರ್‌ ಅವರ ಉಚಿತ ವಿದ್ಯುತ್ ಯೋಜನೆಗೆ ಬಿಜೆಪಿ ನಾಯಕ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ20 July 2025 3:29 PM IST
share
ವಿದ್ಯುತ್ತೂ ಇಲ್ಲ, ವಿದ್ಯುತ್ ಬಿಲ್ಲೂ ಬರುವುದಿಲ್ಲ: ಬಿಹಾರ ಸಿಎಂ ನಿತೀಶ್ ಕುಮಾರ್‌ ಅವರ ಉಚಿತ ವಿದ್ಯುತ್ ಯೋಜನೆಗೆ ಬಿಜೆಪಿ ನಾಯಕ ವ್ಯಂಗ್ಯ

ಲಕ್ನೊ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ, ಆಗಸ್ಟ್ 1ರಿಂದ ಪ್ರತಿ ವಸತಿ ಗೃಹಗಳಿಗೂ 125 ಯೂನಿಟ್ ಉಚಿತ ವಿದ್ಯುತ್ ಪೂರೈಸಲಾಗುವುದು ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಘೋಷಣೆಯನ್ನು ಶನಿವಾರ ವ್ಯಂಗ್ಯವಾಡಿರುವ ಉತ್ತರ ಪ್ರದೇಶ ಇಂಧನ ಮತ್ತು ನಗರಾಭಿವೃದ್ಧಿ ಸಚಿವ ಅರವಿಂದ್ ಕುಮಾರ್ ಶರ್ಮ, ವಿದ್ಯುತ್ ಸರಬರಾಜಾದಾಗ ಮಾತ್ರ ಅದು ಉಚಿತವಾಗಿರುತ್ತದೆ ಎಂದು ಛೇಡಿಸಿದ್ದಾರೆ.

ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ಕುಮಾರ್ ಶರ್ಮ, “ವಿದ್ಯುತ್ ಸರಬರಾಜಾದಾಗ ಮಾತ್ರ ಅದು ಉಚಿತವಾಗಿರುತ್ತದೆ. ವಿದ್ಯುತ್ತೂ ಬರುವುದಿಲ್ಲ, ವಿದ್ಯುತ್ ಬಿಲ್ಲೂ ಬರುವುದಿಲ್ಲ. ಉಚಿತ ಆಗಿ ಹೋಯಿತು. ಆದರೆ, ನಾವು ವಿದ್ಯುತ್ ಪೂರೈಸುತ್ತಿದ್ದೇವೆ” ಎಂದು 125 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಘೋಷಣೆಯ ಕುರಿತು ವ್ಯಂಗ್ಯವಾಡಿದ್ದಾರೆ.

ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರಕಾರ ರಚಿಸಿರುವ ಜನತಾ ದಳ (ಸಂಯುಕ್ತ) ಶರ್ಮರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಇದು ನೆಲದ ವಾಸ್ತವ ಮತ್ತು ಜ್ಞಾನದ ಕೊರತೆ ಎಂದು ತಿರುಗೇಟು ನೀಡಿದೆ. “ಉತ್ತರ ಪ್ರದೇಶದ ಇಂಧನ ಸಚಿವರಿಗೆ ನೆಲದ ವಾಸ್ತವ ತಿಳಿದಂತಿಲ್ಲ. ಬಿಹಾರದಲ್ಲಿ ಸಾಮಾನ್ಯ ಜನರಿಗೆ ದಿನದಲ್ಲಿ 22 ಗಂಟೆಗೂ ಹೆಚ್ಚು ಕಾಲ ವಿದ್ಯುತ್ ದೊರೆಯುತ್ತಿದೆ. ಸಾಮಾನ್ಯ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ವಿಫಲವಾದರೆ, ನಾನು ಮತ ಯಾಚಿಸುವುದಿಲ್ಲ ಎಂದು ಪ್ರತಿಜ್ಞೆ ತೊಟ್ಟಿದ್ದು ನಮ್ಮ ನಾಯಕ ನಿತೀಶ್ ಕುಮಾರ್. ಇಂತಹ ಹೊಣೆಗೇಡಿತನದ ಹೇಳಿಕೆಗಳು ಸಚಿವರ ಅರಿವಿನ ಕೊರತೆಯನ್ನು ಸೂಚಿಸುತ್ತದೆ. ಬಿಹಾರವು ಪ್ರತಿ ಪ್ರಗತಿ ಮತ್ತು ಅಭಿವೃದ್ಧಿಯ ಮಾನದಂಡದಲ್ಲಿ ಪ್ರಗತಿ ಸಾಧಿಸಿರುವುದನ್ನು ಕಾಣಲು ಅವರು ಬಿಹಾರ ಮತ್ತು ಉತ್ತರ ಪ್ರದೇಶದ ಗಡಿ ಭಾಗಗಳಿಗೆ ಭೇಟಿ ನೀಡಬೇಕು” ಎಂದು ಜನತಾ ದಳ (ಸಂಯುಕ್ತ) ಪಕ್ಷದ ಮುಖ್ಯ ವಕ್ತಾರ ಹಾಗೂ ಬಿಹಾರ ವಿಧಾನ ಪರಿಷತ್ ಸದಸ್ಯ ನೀರಜ್ ಕುಮಾರ್ ಪಂಥಾಹ್ವಾನ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶ ಸಚಿವ ಅರವಿಂದ್ ಕುಮಾರ್ ಶರ್ಮ ತಮ್ಮ ಹೇಳಿಕೆಗೆ ತಿರುಗೇಟು ಪಡೆದಿರುವುದು ಇದು ಎರಡನೆ ಬಾರಿಯಾಗಿದೆ. ಇದಕ್ಕೂ ಮುನ್ನ, ಜುಲೈ 10ರಂದು ಸುಲ್ತಾನ್ ಪುರ್ ನ ನಿವಾಸಿಗಳು ತಮ್ಮ ಪ್ರದೇಶದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಅವರ ಬಳಿ ಆರೋಪಿಸಿದಾಗ, ಅದಕ್ಕೆ ಪ್ರತಿಯಾಗಿ ಅವರು, “ಜೈ ಶ್ರೀರಾಮ್, ಜೈ ಬಜರಂಗ ಬಲಿ” ಎಂಬ ಘೋಷಣೆಗಳನ್ನು ಕೂಗಿದ್ದರ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X