Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೆತನ್ಯಾಹು 21ನೇ ಶತಮಾನದ ಹಿಟ್ಲರ್:...

ನೆತನ್ಯಾಹು 21ನೇ ಶತಮಾನದ ಹಿಟ್ಲರ್: ಇರಾನ್ ರಾಯಭಾರಿ

ವಾರ್ತಾಭಾರತಿವಾರ್ತಾಭಾರತಿ2 Oct 2024 7:35 AM IST
share
ನೆತನ್ಯಾಹು 21ನೇ ಶತಮಾನದ ಹಿಟ್ಲರ್: ಇರಾನ್ ರಾಯಭಾರಿ

ಹೊಸದಿಲ್ಲಿ: ಟೆಹರಾನ್ ನ ರಾಷ್ಟ್ರೀಯ ಸ್ವತ್ತುಗಳ ಮೇಲೆ ಮತ್ತು ಈ ಭಾಗದ ಹಿತಾಸಕ್ತಿಯ ಮೇಲೆ ದಾಳಿ ನಡೆಸುವುದರಿಂದ ಟೆಲ್ ಅವೀವ್ ಹಿಂದೆ ಸರಿಯುವವರೆಗೂ ಇರಾನ್ ದೇಶ ಇಸ್ರೇಲ್ ಮೇಲೆ ದಾಳಿ ಮುಂದುವರಿಸಲಿದೆ ಎಂದು ಭಾರತದಲ್ಲಿ ಇರಾನ್ ರಾಯಭಾರಿಯಾಗಿರುವ ಐರಾಜ್ ಇಲಾಹಿ ಹೇಳಿದ್ದಾರೆ.

ಇಸ್ರೇಲ್ ಮೇಲೆ ನಡೆಸಿದ ಕ್ಷಿಪಣಿ ದಾಳಿಯನ್ನು "ಪ್ರತಿದಾಳಿಯ ಕಾರ್ಯಾಚರಣೆ" ಎಂದ ಅವರು, "ಅಂತರಾಷ್ಟ್ರೀಯ ಹಿತಾಸಕ್ತಿಗಳು ಮತ್ತು ರಾಷ್ಟ್ರೀಯ ಭದ್ರತೆಯನ್ನು ಇರಾನ್ ಲಘುವಾಗಿ ಪರಿಗಣಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದರು. ಇಸ್ರೇಲ್ ಭೂಭಾಗಗಳನ್ನು ಗುರಿ ಮಾಡಿ ಮಂಗಳವಾರ 200ಕ್ಕೂ ಹೆಚ್ಚು ಕ್ಷಿಪಣಿ ದಾಳಿಯನ್ನು ಇರಾನ್ ನಡೆಸಿದ ಬಳಿಕ ಇಲಾಹಿ ಈ ಹೇಳಿಕೆ ನೀಡಿದ್ದಾರೆ.

ಹಿಝ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ಹತ್ಯೆಗೆ ಪ್ರತೀಕಾರ ಕ್ರಮ ಕೈಗೊಳ್ಳುವುದಾಗಿ ಇರಾನ್ ಎಚ್ಚರಿಕೆ ನೀಡಿತ್ತು. ಎನ್ ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಇಲಾಹಿ, "ಇಸ್ರೇಲ್ ದ್ವೇಷಭಾವನೆಯನ್ನು ಬಿಡದಿದ್ದರೆ ಮತ್ತು ಇರಾನ್ ನ ರಾಷ್ಟ್ರೀಯ ಹಿತಾಸಕ್ತಿಯನ್ನು ಉಲ್ಲಂಘಿಸಿದಲ್ಲಿ ಮತ್ತೆ ಮತ್ತೆ ದಾಳಿಯನ್ನು ಎದುರಿಸಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದರು.

ನೆತನ್ಯಾಹು ಅವರನ್ನು 21ನೇ ಶತಮಾನದ ಹಿಟ್ಲರ್ ಎಂದ ಅವರು, ಈ ಭಾಗದ ಮಾತ್ರವಲ್ಲದೇ ಇಡೀ ವಿಶ್ವದ ಜನತೆ ಪಶ್ಚಿಮ ಏಷ್ಯಾ ಬಗೆಗಿನ ಇಸ್ರೇಲ್ ದ್ವೇಷಭಾವನೆಯನ್ನು ಅರ್ಥ ಮಾಡಿಕೊಂಡಿದ್ದಾರೆ. ಗಾಝಾ ಮತ್ತು ದಕ್ಷಿಣ ಲೆಬನಾನ್ ನಲ್ಲಿ ರಕ್ತಪಾತಕ್ಕೆ ಎಲ್ಲರೂ ಸಾಕ್ಷಿಗಳಾಗಿದ್ದಾರೆ. ಜನರಲ್ಲಿ ಆಕ್ರೋಶವಿದೆ. ಇಸ್ರೇಲ್ ಎಲ್ಲ ಮಾನವ ಹಕ್ಕು ಒಪ್ಪಂದಗಳನ್ನು, ಅಂತರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸಿದೆ. ಇಸ್ರೇಲ್ ಈ ಭಾಗದಲ್ಲಿ ಎಸಗುತ್ತಿರುವ ಕೃತ್ಯಗಳ ಬಗ್ಗೆ ಇಡೀ ವಿಶ್ವದಲ್ಲಿ ಜನರಿಗೆ ಕೋಪ ಇದೆ ಈ ಸಂಘರ್ಷವನ್ನು ಅಂತ್ಯಗೊಳಿಸುವಲ್ಲಿ ಎರಡೂ ದೇಶಗಳ ಜತೆಗೆ ಒಳ್ಳೆಯ ಸಂಬಂಧ ಹೊಂದಿರುವ ಭಾರತ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X