Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ | ತ್ಯಾವರೆಕೊಪ್ಪದ ಹುಲಿ ಮತ್ತು...

ಶಿವಮೊಗ್ಗ | ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಹೊಸ ಪ್ರಾಣಿ,ಪಕ್ಷಿಗಳು ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ17 Nov 2024 5:39 PM IST
share
ಶಿವಮೊಗ್ಗ | ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಹೊಸ ಪ್ರಾಣಿ,ಪಕ್ಷಿಗಳು ಸೇರ್ಪಡೆ

ಶಿವಮೊಗ್ಗ: ಶಿವಮೊಗ್ಗದ ಹೊರವಲಯದಲ್ಲಿರುವ ಹುಲಿ-ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ.ಮೃಗಾಲಯಗಳ ನಡುವೆ ಪ್ರಾಣಿಗಳ ವಿನಿಮಯ ಕಾರ್ಯಕ್ರಮದ ಅಡಿ ಐದು ಬಗೆಯ ಹೊಸ ಪ್ರಾಣಿ, ಪಕ್ಷಿಗಳು ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಸೇರ್ಪಡೆಯಾಗಿವೆ. ಇದರಿಂದ ತ್ಯಾವರೆಕೊಪ್ಪದಲ್ಲಿ ಪ್ರಾಣಿ ಪ್ರಬೇಧಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಪ್ರಾಣಿಗಳ ವಿನಿಮಯ ಕಾರ್ಯಕ್ರಮದ ಅಡಿ ಹೆಚ್ಚುವರಿ ಪ್ರಾಣಿಗಳನ್ನು ವಿನಿಮಯ ಮಾಡಿಕೊಳ್ಳಲು ಅನುಮೋದನೆ ದೊರತಿತ್ತು. ಅದರಂತೆ ತ್ಯಾವರೆಕೊಪ್ಪದ ಮೃಗಾಲಯದಲ್ಲಿ ಹೆಚ್ಚುವರಿಯಾದ ಪ್ರಾಣಿಗಳನ್ನು ಕೇರಳದ ತಿರುವನಂತಪುರದ ಮೃಗಾಲಯಕ್ಕೆ ರವಾನಿಸಲಾಗಿದೆ. ಅಲ್ಲಿಂದ ಹೆಚ್ಚುವರಿ ಪ್ರಾಣಿಗಳನ್ನು ತ್ಯಾವರೆಕೊಪ್ಪ ಮೃಗಾಲಯಕ್ಕೆ ತರಲಾಗಿದೆ.

ಯಾವೆಲ್ಲ ಪ್ರಾಣಿ, ಪಕ್ಷಿಗಳು ಬಂದಿವೆ:

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಎರಡು ಘಾರಿಯಲ್‌ ಮೊಸಳೆಗಳು (ಒಂದ ಗಂಡು, ಒಂದು ಹೆಣ್ಣು), ನಾಲ್ಕು ಲೆಸ್ಸೆರ್‌ ರಿಹ ಪಕ್ಷಿಗಳು (ಎರಡು ಗಂಡು, ಎರಡು ಹೆಣ್ಣು), ಒಂದು ಗಂಡು ಕತ್ತೆ ಕಿರುಬ, ಎರಡು ಮುಳ್ಳು ಹಂದಿಗಳು (ಒಂದು ಗಂಡು, ಒಂದು ಹೆಣ್ಣು), ಸನ್‌ ಕನೂರು ಪಕ್ಷಿಗಳು (ಮೂರು ಗಂಡು, ಮೂರು ಹೆಣ್ಣು) ವಿನಿಮಯವಾಗಿವೆ.

ಯಾವೆಲ್ಲ ಪ್ರಾಣಿಗಳು ರವಾನೆಯಾಗಿವೆ:

ತ್ಯಾವರೆಕೊಪ್ಪದಿಂದ ತಿರುವನಂತಪುರಕ್ಕೆ ಎರಡು ಮೊಸಳೆಗಳು (ಒಂದು ಗಂಡು, ಒಂದು ಹೆಣ್ಣು), ಮೂರು ಹೆಣ್ಣು ಕತ್ತೆ ಕಿರುಬಗಳು, ಎರಡು ನರಿಗಳು (ಒಂದು ಗಂಡು, ಒಂದು ಹೆಣ್ಣು), ತಾಳೆಬೆಕ್ಕು (ಒಂದು ಗಂಡು, ಒಂದು ಹೆಣ್ಣು) ರವಾನೆ ಮಾಡಲಾಗಿದೆ.

ಯಾವೆಲ್ಲ ಪ್ರಾಣಿಗಳನ್ನು ಯಾಕೆ ತರಲಾಗಿದೆ:

ಘಾರಿಯಲ್‌ ಮೊಸಳೆ ಅಳಿವಿನಂಚಿನಲ್ಲಿರುವ ಪ್ರಭೇದವಾಗಿದೆ. ಇವುಗಳ ಸಂರಕ್ಷಣೆ ಕುರಿತು ಪ್ರಕೃತಿ ಶಿಕ್ಷಣ ನೀಡಲು ಈ ಪ್ರಭೇದವನ್ನು ತ್ಯಾವರೆಕೊಪ್ಪಕ್ಕೆ ತರಲಾಗಿದೆ. ದಕ್ಷಿಣ ಅಮೆರಿಕಕ್ಕೆ ಸಂಬಂಧಿಸಿದ ಲೆಸ್ಸೆರ್‌ ರಿಹಾ ಮತ್ತು ಸನ್‌ ಕಾನ್ಯೂರ್‌ ಪ್ರಭೇದಗಳು ದಕ್ಷಿಣ ಅಮೆರಿಕಕ್ಕೆ ಸಂಬಂಧಿಸಿದವು. ಇವೆರಡು ಪ್ರಬೇಧ ಇದೇ ಮೊದಲು ತ್ಯಾವರೆಕೊಪ್ಪದ ಮೃಗಾಲಯಕ್ಕೆ ಬಂದಿವೆ ಎಂದು ತಿಳಿಸಲಾಗಿದೆ.

ತಿರುವನಂತಪುರದಿಂದ ಆಗಮಿಸಿರುವ ಪ್ರಾಣಿಗಳು ಆರೋಗ್ಯವಾಗಿವೆ ಎಂದು ಮೃಗಾಲಯದ ವೈದ್ಯರು ತಿಳಿಸಿದ್ದಾರೆ. ಇದರಿಂದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಪ್ರಾಣಿ, ಪಕ್ಷಿಗಳ ಪ್ರಭೇದಗಳ ಸಂಖ್ಯೆ 30 ರಿಂದ 34ಕ್ಕೆ ಏರಿಕೆಯಾಗಿದೆ ಎಂದು ಮೃಗಾಲಯದ ಕಾರ್ಯಪಾಲಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















share
ವಾರ್ತಾಭಾರತಿ
ವಾರ್ತಾಭಾರತಿ
Next Story
X