Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲರನ್ನೂ ರಕ್ಷಿಸಲು ಪೊಲೀಸರಿಂದ...

ಎಲ್ಲರನ್ನೂ ರಕ್ಷಿಸಲು ಪೊಲೀಸರಿಂದ ಸಾಧ್ಯವಿಲ್ಲ: ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

ವಾರ್ತಾಭಾರತಿವಾರ್ತಾಭಾರತಿ2 Aug 2023 8:04 PM IST
share
ಎಲ್ಲರನ್ನೂ ರಕ್ಷಿಸಲು ಪೊಲೀಸರಿಂದ ಸಾಧ್ಯವಿಲ್ಲ: ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

ಹೊಸದಿಲ್ಲಿ: ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಿದ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನು ಪೊಲೀಸರಿಂದ ರಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು NDTV ವರದಿ ಮಾಡಿದೆ.

ಸೋಮವಾರದಿಂದ ಹರ್ಯಾಣದಲ್ಲಿ ಕೋಮು ಸಂಘರ್ಷ ಭುಗಿಲೆದ್ದಿದ್ದು, ಆರು ಜೀವಗಳು ಬಲಿಯಾಗಿವೆ.

ಸೌಹಾರ್ದತೆ ಇಲ್ಲದಿದ್ದರೆ ಭದ್ರತೆ ಇಲ್ಲ. ಎಲ್ಲರೂ ಒಬ್ಬರನ್ನೊಬ್ಬರು ವಿರೋಧಿಸಿ ಎಂದು ಹಠ ಹಿಡಿದರೆ ಭದ್ರತೆ ಇಲ್ಲ. ಪ್ರತಿಯೊಬ್ಬರನ್ನು ರಕ್ಷಿಸಲು ಪೊಲೀಸರಿಂದಾಗಲಿ, ಸೇನೆಯಿಂದಾಗಲಿ ಅಥವಾ ನಿಮ್ಮಿಂದಾಗಲಿ ನನ್ನಿಂದಾಗಲಿ ಸಾಧ್ಯವಿಲ್ಲ ಎಂದು ಕಟ್ಟರ್‌ ಹೇಳಿದ್ದಾರೆ.

“ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಒಂದು ನಿರ್ದಿಷ್ಟ ವಾತಾವರಣ ಬೇಕು. ಸೌಹಾರ್ದತೆ, ಉತ್ತಮ ಬಾಂಧವ್ಯ ಇರಬೇಕು... ಅದಕ್ಕಾಗಿ ನಮ್ಮಲ್ಲಿ ಶಾಂತಿ ಸಮಿತಿಗಳಿವೆ... ತೊಂದರೆಯಾದರೆ ನಾವು ಕ್ರಮಗಳನ್ನು ತೆಗೆದುಕೊಳ್ಳಬಹುದು. ಅವರು ಶಾಂತಿ ಮೆರವಣಿಗೆಗಳನ್ನು ಮಾಡಿದ್ದಾರೆ ... ಜಗತ್ತಿನಲ್ಲಿ ಎಲ್ಲಿಗೆ ಹೋದರೂ ಪೊಲೀಸರಿಂದ ಎಲ್ಲರನ್ನೂ ರಕ್ಷಿಸಲು ಸಾಧ್ಯವಿಲ್ಲ" ಎಂದು ಅವರು ಹೇಳಿದರು.

ಕೋಮು ಹಿಂಸಾಚಾರದ ಕೇಂದ್ರಬಿಂದುವಾಗಿರುವ ಮೋನು ಮಾನೇಸರ್ ಬಗ್ಗೆ ರಾಜ್ಯಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ಮನೋಹರ್ ಲಾಲ್ ಖಟ್ಟರ್ ಇದೇ ವೇಳೆ ಹೇಳಿದ್ದಾರೆ.

"ಆತನ ವಿರುದ್ಧ ಪ್ರಕರಣವನ್ನು ರಾಜಸ್ಥಾನ ಸರ್ಕಾರ ದಾಖಲಿಸಿದೆ. ಅವನನ್ನು ಪತ್ತೆಹಚ್ಚಲು ಸಹಾಯ ಬೇಕಾದರೆ ನಾವು ಸಹಾಯ ಮಾಡಲು ಸಿದ್ಧರಿದ್ದೇವೆ ಎಂದು ನಾನು ರಾಜಸ್ಥಾನ ಸರ್ಕಾರಕ್ಕೆ ಹೇಳಿದ್ದೇನೆ. ಈಗ ರಾಜಸ್ಥಾನ ಪೊಲೀಸರು ಆತನನ್ನು ಹುಡುಕುತ್ತಿದ್ದಾರೆ. ಅವನ ಇರುವಿಕೆಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ" ಅವರು ಹೇಳಿದರು.

ರಾಜಸ್ಥಾನದ ಜೋಧ್‌ಪುರದ ಇಬ್ಬರು ಮುಸ್ಲಿಂ ವ್ಯಕ್ತಿಗಳ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದುತ್ವವಾದಿ, ಸ್ವಘೋಷಿತ ಗೋರಕ್ಷಕ ಮೋನು ಮಾನೇಸರ್ ಫೆಬ್ರವರಿಯಿಂದ ತಲೆಮರೆಸಿಕೊಂಡಿದ್ದಾನೆ.

ನೂಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ನಡೆದ ಮೆರವಣಿಗೆಯಲ್ಲಿ ಆತ ಭಾಗವಹಿಸಿದ್ದಾನೆ ಎಂಬ ವದಂತಿಗಳು ದಾಳಿಗೆ ಕಾರಣವಾಗಿವೆ ಎನ್ನಲಾಗಿದೆ. ಮೋನು ಮಾನೆಸರ್‌ ಮೇಲಿನ ಕೋಪದಿಂದ ಕೆಲವರು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಮಧ್ಯರಾತ್ರಿಯ ವೇಳೆಗೆ ದುಷ್ಕರ್ಮಿಗಳ ಗುಂಪು ಮಸೀದಿಗೆ ನುಗ್ಗಿ ಬೆಂಕಿ ಹಚ್ಚಿತ್ತು. ಘಟನೆಯಲ್ಲಿ ನೂರಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಧ್ವಂಸಗೊಳಿಸಲಾಗಿದೆ.

ಘರ್ಷಣೆಯ ಅಲೆಗಳು ದಿಲ್ಲಿಯ ಪಕ್ಕದಲ್ಲಿರುವ ಗುರುಗ್ರಾಮ್‌ನ ಐಷಾರಾಮಿ ಪ್ರದೇಶಗಳರೆಗೂ ತಲುಪಿದ್ದು, ಬಳಿಕ ಈ ಪ್ರದೇಶಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X