Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸತ್ಯ, ಸದಾಚಾರದ ಬದುಕಿಗೆ ಗುರು ಅಗತ್ಯ:...

ಸತ್ಯ, ಸದಾಚಾರದ ಬದುಕಿಗೆ ಗುರು ಅಗತ್ಯ: ಪ್ರಭುದೇವ್ ಮಹಾಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 July 2026 6:42 PM IST
share
ಸತ್ಯ, ಸದಾಚಾರದ ಬದುಕಿಗೆ ಗುರು ಅಗತ್ಯ: ಪ್ರಭುದೇವ್ ಮಹಾಸ್ವಾಮಿ

ಹುಲಸೂರ್ : ಭಕ್ತರನ್ನು ದೇವರಿಗೆ ಸಲ್ಲುವಂತೆ ರೂಪಿಸಿ, ಅವರ ಬದುಕನ್ನು ತಿದ್ದಿ, ಸನ್ಮಾರ್ಗದಲ್ಲಿ ನಡೆಸುವವನೇ ಸದ್ಗುರು. ಗುರುವಿನ ಕೈಹಿಡಿದು ದೇವರ ಕಡೆಗೆ ಪಯಣಿಸುವವನೇ ಜಾಣ. ಸತ್ಯ, ಸದಾಚಾರದ ಬದುಕಿಗೆ ಗುರು ಅಗತ್ಯ ಎಂದು ಲಿಂಗಾಯತ ಮಹಾಮಠದ ಪೀಠಾಧಿಪತಿ ಪ್ರಭುದೇವ ಸ್ವಾಮಿ ಹೇಳಿದರು.

ತಾಲ್ಲೂಕಿನ ಗೋರ್ಟಾ (ಬಿ) ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಗುರುವಾರ ನಡೆದ ಮಾಸಿಕ ಶರಣ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಗುರು ಮತ್ತು ದೇವರ ನಡುವಿನ ವ್ಯತ್ಯಾಸ ತಾಯಿ–ತಂದೆಯರ ನಡುವಿನ ವ್ಯತ್ಯಾಸದಂತಿದೆ. ಮಗುವನ್ನು ಸ್ವಚ್ಛಗೊಳಿಸಿ, ಅಲಂಕರಿಸಿ ಸಿದ್ಧಪಡಿಸಿದ ಬಳಿಕ ತಂದೆ ಎತ್ತಿಕೊಂಡು ಮುದ್ದಿಸುತ್ತಾನೆ. ಅದೇ ರೀತಿ ಭಕ್ತರನ್ನು ದೇವರಿಗೆ ಅರ್ಪಣೆಯಾಗುವಂತೆ ತಿದ್ದಿ, ತಿಕ್ಕಿ, ತೊಳೆದು ಸಿದ್ಧಪಡಿಸುವವನು ಸದ್ಗುರು ಎಂದು ಅವರು ತಿಳಿಸಿದರು.

ಗುರುವಿನ ಕೃಪೆಯಾದರೆ ಕರ್ಮಗಳೆಲ್ಲ ಬೆಚ್ಚಿ ಬೀಳುತ್ತವೆ. ಯಾರ ಬದುಕಿನಲ್ಲಿ ಗುರುವಿಲ್ಲವೋ ಅವರು ದಿಕ್ಕೆಟ್ಟವರಾಗುತ್ತಾರೆ. ದಿಕ್ಕು ತೋರಿಸುವ ದಿಕ್ಸೂಚಿಯೇ ಗುರು. ಆಕಾಶದಲ್ಲಿ ನಕ್ಷತ್ರಗಳು, ಸೂರ್ಯ ಇದ್ದರೂ ಮನೆಯನ್ನು ಬೆಳಗಿಸಲು ಒಂದು ದೀಪ ಬೇಕಾಗುತ್ತದೆ. ಅದೇ ರೀತಿ ಬದುಕಿನ ಅಂಧಕಾರವನ್ನು ದೂರ ಮಾಡಿ ಮನಸ್ಸನ್ನು ಬೆಳಗಿಸುವ ದೀಪವೇ ಗುರು ಎಂದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಂಭುಲಿಂಗ್ ಕಾಮಣ್ಣ ಅವರು ಮಾತನಾಡಿ, ಬಸವಣ್ಣನವರು ಜಗದ್ಗುರು. ಮರ್ತ್ಯ ಮಾನವರ ಮನದ ಮೈಲಿಗೆಯನ್ನು ತೊಳೆಯಲು ಬಂದವರು. ಅಲ್ಲಮಪ್ರಭು ದೇವರು ಕೂಡ 'ಎನಗೆಯೂ ಗುರು, ನಿನಗೆಯೂ ಗುರು, ಜಗವೆಲ್ಲಕೆಯೂ ಗುರು ಕಾಣ ಗುಹೇಶ್ವರ’ ಎಂದು ಸಾರಿದ್ದಾರೆ. ಚೆನ್ನಬಸವಣ್ಣನವರು ಹರನು ತನ್ನ ರೂಪವನ್ನು ತೋರಲೆಂದು ಗುರುವಾಗಿ ಬಂದನು ಎಂದು ಹೇಳಿದ್ದಾರೆ’ ಎಂದು ತಿಳಿಸಿದರು.

ಅಲ್ಲಮಪ್ರಭು ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಚಂದ್ರಕಾಂತ್ ಅಕ್ಕಣ್ಣ ಅವರು ಮಾತನಾಡಿ, ಇಂದಿನ ಯುವಜನರ ಸ್ಥಿತಿಯನ್ನು ನೋಡಿದರೆ ಮನ ಮರುಗುತ್ತದೆ. ಗೊತ್ತು–ಗುರಿಯಿಲ್ಲದೆ ಬದುಕು ಹಾಳು ಮಾಡಿಕೊಳ್ಳುತ್ತಿರುವ ಯುವಜನರಿಗೆ ದಾರಿ ತೋರಿಸುವ ಉದ್ದೇಶದಿಂದ ಲಿಂಗಾಯತ ಮಹಾಮಠದಲ್ಲಿ ಪ್ರತಿತಿಂಗಳು ಮಾಸಿಕ ಶರಣ ಸಂಗಮ ಆಯೋಜಿಸಿ ಸದ್ಗುಣಗಳನ್ನು ಬಿತ್ತುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಈ ವೇಳೆ ನಿವೃತ್ತ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಶರಣಬಸವ ಮಠಪತಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆರತಿ ಚನ್ನಬಸವ ಯರನಾಳೆ, ಶ್ರೀದೇವಿ ಶರಣಬಸವ ಮಠಪತಿ, ವೀರಶೆಟ್ಟಿ ರಾಜೋಳೆ ಹಾಗೂ ಮಲ್ಲಮ್ಮ ಸೇರಿದಂತೆ ಇತರರು ಇದ್ದರು. ಪ್ರಜ್ವಲ ಪತಂಗೆ ನಿರೂಪಿಸಿದರು. ಸಾನಿಧ್ಯ ಪತಂಗೆ ಸ್ವಾಗತಿಸಿದರು. ಗೌರಿ ಮಠಪತಿ ವಚನಗಾಯನ ನಡೆಸಿದರು.

Tags

Prabhudev MahaswamiBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X