Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ...

ದಿಲ್ಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ವಾರ್ತಾಭಾರತಿವಾರ್ತಾಭಾರತಿ6 Aug 2025 3:14 PM IST
share
  • ದಿಲ್ಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
  • ದಿಲ್ಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
  • ದಿಲ್ಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಸೆಂಟ್ರಲ್ ವಿಸ್ಟಾ ಯೋಜನೆಯಡಿ ನಿರ್ಮಿತ ಈ ಹೈಟೆಕ್ ಕಟ್ಟಡದಲ್ಲಿ ಏನೆಲ್ಲಾ ವಿಶೇಷತೆಗಳಿವೆ?; ಇಲ್ಲಿದೆ ಮಾಹಿತಿ...

ಹೊಸದಿಲ್ಲಿ : ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳನ್ನು ಒಂದೇ ಸೂರಿನಡಿ ತರುವ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ದಿಲ್ಲಿಯಲ್ಲಿ ನಿರ್ಮಿಸಲಾದ ಕರ್ತವ್ಯ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು.

ಸೆಂಟ್ರಲ್ ವಿಸ್ಟಾ ಯೋಜನೆಯಡಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಗೃಹ ಸಚಿವಾಲಯ ಮಾತ್ರ ಈಗ ಅದರ ಹಿಂದಿನ ನಾರ್ತ್ ಬ್ಲಾಕ್ ನಿಂದ ಕರ್ತವ್ಯ ಭವನ್ 3ಕ್ಕೆ ಸ್ಥಳಾಂತರಗೊಂಡಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯಗಳು ಸ್ಥಳಾಂತರಗೊಳ್ಳಲಿವೆ ಎಂದು ಹೇಳಲಾಗಿದೆ.

ಕರ್ತವ್ಯ ಭವನದ ಮೂರೂ ಕಟ್ಟಡಗಳ ನಿರ್ಮಾಣಕ್ಕಾಗಿ ಕೇಂದ್ರ ಸರಕಾರ 3,690 ಕೋಟಿ ಮಂಜೂರು ಮಾಡಿತ್ತು. 2027ರ ಕರ್ತವ್ಯ ಭವನ ಸಂಪೂರ್ಣವಾಗಿ ಸಿದ್ಧವಾಗಲಿದೆ ಎಂದು ಹೇಳಲಾಗಿದೆ.

ಕರ್ತವ್ಯ ಭವನದಲ್ಲಿ 24 ಮುಖ್ಯ ಕಾನ್ಫರೆನ್ಸ್ ಕೊಠಡಿಗಳಿದ್ದು, ಒಂದೊಂದರಲ್ಲಿ 45 ಜನರು ಕುಳಿತುಕೊಳ್ಳಬಹುದಾಗಿದೆ. ತಲಾ 25 ಜನರಿಗೆ ಕುಳಿತುಕೊಳ್ಳಬಹುದಾದ 26 ಸಣ್ಣ ಕಾನ್ಫರೆನ್ಸ್ ಕೊಠಡಿಗಳು, ತಲಾ 9 ಜನರು ಕುಳಿತುಕೊಳ್ಳಬಹುದಾದ 67 ಸಣ್ಣ ಮೀಟಿಂಗ್ ಕೊಠಡಿಗಳು ಇರಲಿವೆ ಎಂದು ಹೇಳಲಾಗಿದೆ.

ಹಳೆಯ ಕೇಂದ್ರ ಸಚಿವಾಲಯ ಸಂಕೀರ್ಣ 22 ಕೇಂದ್ರ ಸಚಿವಾಲಯಗಳ ಕಚೇರಿಗಳನ್ನು ಹೊಂದಿದ್ದು, 41,000 ಉದ್ಯೋಗಿಗಳಿಗೆ ವಸತಿ ಕಲ್ಪಿಸಲಾಗಿದೆ. ಶಾಸ್ತ್ರಿ ಭವನ, ನಿರ್ಮಾಣ ಭವನ, ಉದ್ಯೋಗ ಭವನ, ಕೃಷಿ ಭವನ ಮತ್ತು ವಾಯು ಭವನದಲ್ಲಿ ಇರುವ ಕೇಂದ್ರ ಸಚಿವಾಲಯಗಳ ಕಚೇರಿಗಳು ಇವುಗಳಲ್ಲಿ ಸೇರಿವೆ.

ಕೇಂದ್ರ ಸರಕಾರದ ಬಹುತೇಕ ಸಚಿವಾಲಯಗಳು ಕರ್ತವ್ಯ ಭವನಕ್ಕೆ ಸ್ಥಳಾಂತರಗೊಂಡರೆ, ವಾಣಿಜ್ಯ ಸಚಿವಾಲಯದ ಕಚೇರಿಗಳಿರುವ ವಾಣಿಜ್ಯ ಭವನ ಮತ್ತು ವಿದೇಶಾಂಗ ಸಚಿವಾಲಯದ

ಕಚೇರಿಗಳಿರುವ ಜವಾಹರಲಾಲ್ ನೆಹರು ಭವನದಂಥ ಕೆಲವು ಕಟ್ಟಡಗಳನ್ನು ಹಾಗೆಯೇ ಉಳಿಸಿಕೊಳ್ಳಲಿದೆ ಎಂದು ತಿಳಿದು ಬಂದಿದೆ.

ಕೇಂದ್ರ ಸಚಿವಾಲಯದ ಸಂಕೀರ್ಣದಲ್ಲಿರುವ ಇತರ ಕಟ್ಟಡಗಳಲ್ಲಿ ರಾಷ್ಟ್ರೀಯ ವಸ್ತುಸಂಗ್ರಹಾಲಯ ಮತ್ತು ಅಂಬೇಡ್ಕರ್ ಸಭಾಂಗಣ ಸೇರಿವೆ. ಹಲವಾರು ಗ್ರೀನ್ ಫೀಚರ್‌ಗಳನ್ನು ಹೊಂದಿರುವ ಹೊಸ ಭವನ ಶೇ. 30 ಇಂಧನ ಉಳಿತಾಯಕ್ಕೆ ನೆರವಾಗುವಂತೆ ಎಲ್ಇಡಿ ಲೈಟಿಂಗ್, ಆಕ್ಯುಪೆನ್ಸಿ ಸೆನ್ಸರ್‌ಗಳು ಮತ್ತು ಹಗಲು ಬೆಳಕಿನ ಸೆನ್ಸರ್‌ಗಳನ್ನು ಒಳಗೊಂಡಿದೆ ಎನ್ನಲಾಗಿದೆ.

ಅಧಿಕಾರಿಗಳಿಗೆ, ಸಂದರ್ಶಕರಿಗೆ, ಐಡಿ ಕಾರ್ಡ್ ಇದ್ದರಷ್ಟೇ ಕರ್ತವ್ಯ ಭವನದ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಭದ್ರತೆಗಾಗಿ ಕಾಂಪೌಂಡ್ ಗೋಡೆಯ ಮೇಲೆ ವಿದ್ಯುತ್ ಬೇಲಿಯನ್ನು ಕೂಡ ಹಾಕಲಾಗಿದೆ. ಸೆಂಟ್ರಲ್ ವಿಸ್ಟಾಗೆ ಸಂಯೋಜಿಸಲಾದ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವಿದ್ದು, ಅಲ್ಲಿಂದ ಆ ಪ್ರದೇಶದ ಎಲ್ಲಾ ಚಲನವಲನಗಳ ಮೇಲ್ವಿಚಾರಣೆ ನಡೆಯಲಿದೆ.

ಕರ್ತವ್ಯ ಭವನದಲ್ಲಿ ಕೆಲಸದ ಸ್ಥಳಗಳು ಇಕ್ಕಟ್ಟಾಗಿದ್ದು, ಗೌಪ್ಯತೆಗೆ ಧಕ್ಕೆ ತರುವಂತಿವೆ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ. ಈ ಕುರಿತು ಕೇಂದ್ರ ಸಚಿವಾಲಯ ಸೇವೆಯ (ಸಿಎಸ್ಎಸ್) ನೌಕರರು ಪ್ರಧಾನಿ ಕಾರ್ಯಾಲಯ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಕರ್ತವ್ಯ ಭವನ 3 ರಲ್ಲಿನ ಆಸನ ವ್ಯವಸ್ಥೆ ವಿವಿಧ ವಿಭಾಗಗಳಿಗೆ ಅಗತ್ಯವಾದ ಪ್ರತ್ಯೇಕತೆಯನ್ನು ಹೊಂದಿಲ್ಲ ಎಂದು ಪತ್ರದಲ್ಲಿ ದೂರಲಾಗಿದೆ. ಕೆಲಸದ ಗೌಪ್ಯತೆ ಮತ್ತು ಪ್ರಾಮುಖ್ಯತೆಯ ಖಾತರಿಗಾಗಿ ಅಧಿಕಾರಿಗಳ ಕೆಲಸದ ಸ್ಥಳಗಳನ್ನು ಮುಚ್ಚಿದ ಕೊಠಡಿಗಳಾಗಿ ವಿನ್ಯಾಸಗೊಳಿಸುವುದು ಕಡ್ಡಾಯವಾಗಿದೆ. ಆದರೆ ಇಲ್ಲಿನ ಇಕ್ಕಟ್ಟಾದ ಕೆಲಸದ ಸ್ಥಳಗಳಲ್ಲಿ ಸಂದರ್ಶಕರಿಗೂ ಆಸನಗಳಿಲ್ಲ ಎನ್ನಲಾಗಿದೆ. ಒಂದೇ ಶ್ರೇಣಿಯ ಹುದ್ದೆಯಲ್ಲಿರುವ ಅಧಿಕಾರಿಗಳಿಗೂ ಸ್ಥಳ ಹಂಚಿಕೆಯಲ್ಲಿ ಸಮಾನತೆ ಇಲ್ಲದಿರುವುದು ಅಧಿಕಾರಿಗಳ ನೈತಿಕತೆಯನ್ನು ಕುಗ್ಗಿಸುವಂತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X