Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕುರಿತು...

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕುರಿತು ಕೇಂದ್ರ ಸರಕಾರವು ದೇಶದ ಹಾದಿ ತಪ್ಪಿಸುತ್ತಿದೆ: ಕಾಂಗ್ರೆಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ29 Jun 2025 8:54 PM IST
share
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕುರಿತು ಕೇಂದ್ರ ಸರಕಾರವು ದೇಶದ ಹಾದಿ ತಪ್ಪಿಸುತ್ತಿದೆ: ಕಾಂಗ್ರೆಸ್ ಆರೋಪ

ಹೊಸದಿಲ್ಲಿ: ಭಾರತೀಯ ವಾಯು ಪಡೆ ಪಾಕಿಸ್ತಾನದ ಸೇನಾ ನೆಲೆಗಳು ಹಾಗೂ ಅವುಗಳ ರಕ್ಷಣಾ ಸ್ವತ್ತುಗಳ ಮೇಲೆ ದಾಳಿ ನಡೆಸಬಾರದು ಎಂದು ರಾಜಕೀಯ ನಾಯಕತ್ವದಿಂದ ಒತ್ತಡಕ್ಕೆ ಒಳಗಾಗಿದ್ದರಿಂದ, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಆರಂಭಿಕ ಹಂತವು ಭಾರಿ ರಾಜಕೀಯ ಕೋಲಾಹಲಕ್ಕೆ ಕಾರಣವಾಯಿತು ಎಂದು ಇಂಡೊನೇಶ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಯಾದ ಕ್ಯಾ. ಶಿವ್ ಕುಮಾರ್ ನೀಡಿರುವ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ.

ಸೇನಾಧಿಕಾರಿಯ ಈ ಹೇಳಿಕೆಯನ್ನು ಉಲ್ಲೇಖಿಸಿರುವ ವಿಪಕ್ಷ ಕಾಂಗ್ರೆಸ್, ಬಿಜೆಪಿ ಸರಕಾರ ದೇಶವನ್ನು ದಾರಿ ತಪ್ಪಿಸುತ್ತಿದೆ ಎಂದು ಟೀಕಿಸಿದೆ.

ಜೂನ್ 10ರಂದು ಇಂಡೋನೇಶ್ಯಾ ವಿಶ್ವವಿದ್ಯಾಲಯವೊಂದರಲ್ಲಿ ಆಯೋಜಿಸಲಾಗಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದ ಕ್ಯಾ. ಶಿವ್ ಕುಮಾರ್, “ಭಾರತ ಕೆಲವು ವಿಮಾನಗಳ ನಷ್ಟ ಅನುಭವಿಸಿತಾದರೂ, ಪಾಕಿಸ್ತಾನದ ಸೇನಾ ನೆಲೆಗಳು ಹಾಗೂ ವಾಯು ರಕ್ಷಣೆಯ ಮೇಲೆ ದಾಳಿ ನಡೆಸಬಾರದು ಎಂಬ ರಾಜಕೀಯ ಒತ್ತಡದಿಂದಾಗಿ ಆ ನಷ್ಟವನ್ನು ಅನುಭವಿಸಬೇಕಾಯಿತು” ಎಂದು ಹೇಳಿದ್ದರು.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಮೊದಲಿಗೆ ಡಿಫೆನ್ಸ್ ಸ್ಟ್ಯಾಫ್ ಮುಖ್ಯಸ್ಥರು ಸಿಂಗಾಪುರದಲ್ಲಿ ಮುಖ್ಯ ವಿಚಾರವೊಂದನ್ನು ಬಹಿರಂಗಗೊಳಿಸಿದ್ದರು. ನಂತರ, ಇಂಡೋನೇಶ್ಯಾದಲ್ಲಿ ಹಿರಿಯ ರಕ್ಷಣಾ ಅಧಿಕಾರಿಯೊಬ್ಬರು ಅವರನ್ನು ಹಿಂಬಾಲಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಆದರೆ, ಪ್ರಧಾನಿಯೇಕೆ ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಲು ಹಾಗೂ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಿರಾಕರಿಸುತ್ತಿದ್ದಾರೆ? ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕು ಎಂಬ ಬೇಡಿಕೆಯನ್ನು ಏಕೆ ತಿರಸ್ಕರಿಸಲಾಯಿತು?” ಎಂದೂ ಅವರು ಪ್ರಶ್ನಿಸಿದ್ದಾರೆ.

ತಮ್ಮ ಹೇಳಿಕೆ ವಿವಾದದ ಸ್ವರೂಪಕ್ಕೆ ತಿರುಗುತ್ತಿದ್ದಂತೆಯೇ ಈ ಕುರಿತು ಸ್ಪಷ್ಟನೆ ನೀಡಿರುವ ಇಂಡೊನೇಶ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿ, ‘ಮಾಧ್ಯಮ ವರದಿಗಳು ರಕ್ಷಣಾ ಅಧಿಕಾರಿಯ ಮಾತುಗಳನ್ನು ವ್ಯಾಪ್ತಿ ಮೀರಿ ಅರ್ಥೈಸಿವೆ’ ಎಂದು ತಿಳಿಸಿದೆ.

“ವಿಚಾರ ಸಂಕಿರಣವೊಂದರಲ್ಲಿ ರಕ್ಷಣಾ ಅಧಿಕಾರಿಯೊಬ್ಬರು ನೀಡಿದ ಉಪನ್ಯಾಸದ ಕುರಿತು ಮಾಧ್ಯಮಗಳ ವರದಿಯನ್ನು ನಾವು ನೋಡಿದ್ದೇವೆ. ಅವರ ಮಾತುಗಳನ್ನು ವ್ಯಾಪ್ತಿ ಮೀರಿ ಅರ್ಥೈಸಲಾಗಿದೆ ಹಾಗೂ ಭಾಷಣಕಾರರು ತಮ್ಮ ಉಪನ್ಯಾಸದ ವೇಳೆ ಹೊಂದಿದ್ದ ಉದ್ದೇಶ ಹಾಗೂ ಪ್ರಸ್ತುತಿಯನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ” ಎಂದು ಅದು ಸ್ಪಷ್ಟನೆ ನೀಡಿದೆ.

ऑपरेशन सिंदूर पर पहले सिंगापुर में चीफ ऑफ डिफेंस स्टाफ (CDS) ने अहम खुलासे किए। फिर इंडोनेशिया में एक कार्यक्रम के दौरान एक वरिष्ठ रक्षा अधिकारी ने उन बातों को आगे बढ़ाया।

लेकिन प्रधानमंत्री सर्वदलीय बैठक की अध्यक्षता करने और विपक्ष को भरोसे में लेने से क्यों इनकार कर रहे हैं?…

— Jairam Ramesh (@Jairam_Ramesh) June 29, 2025


share
ವಾರ್ತಾಭಾರತಿ
ವಾರ್ತಾಭಾರತಿ
Next Story
X