Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೂ. 4,002 ಕೋಟಿ ಮೌಲ್ಯದ ಚುನಾವಣಾ ಬಾಂಡ್...

ರೂ. 4,002 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ಇಲ್ಲ: ಏಕೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ16 March 2024 2:21 PM IST
share
ರೂ. 4,002 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ಇಲ್ಲ: ಏಕೆ ಗೊತ್ತೇ?

ಹೊಸದಿಲ್ಲಿ: ಭಾರತೀಯ ಸ್ಟೇಟ್ ಬ್ಯಾಂಕ್ 2018ರ ಮಾರ್ಚ್‍ನಿಂದೀಚೆಗೆ ಒಟ್ಟು 16,518 ಕೋಟಿ ರೂಪಾಯಿ ಮೌಲ್ಯದ 28030 ಚುನಾವಣಾ ಬಾಂಡ್‍ಗಳನ್ನು ಮಾರಾಟ ಮಾಡಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಬಹಿರಂಗಪಡಿಸಿದೆ. ಆದರೆ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಖರೀದಿದಾರರ ಪಟ್ಟಿಯಲ್ಲಿ ಕೇವಲ 12516 ಕೋಟಿ ರೂಪಾಯಿ ಮೌಲ್ಯದ 18871 ಬಾಂಡ್‍ಗಳ ವಿವರಗಳಿವೆ. ಈ ಕ್ರಮದಿಂದಾಗಿ 4002 ಕೋಟಿ ರೂಪಾಯಿ ಮೌಲ್ಯದ 9159 ಬಾಂಡ್‍ಗಳ ಬಹೆಗಿನ ಮಾಹಿತಿ ನಿಗೂಢವಾಗಿಯೇ ಉಳಿದಿದೆ.

ಈ ಅಂತರಕ್ಕೆ ಮುಖ್ಯ ಕಾರಣ, ಎಸ್‍ಬಿಐ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ ವಿವರಗಳಲ್ಲಿನ ಅಜಾಗರೂಕತೆ ಕಾರಣ. ಮಾರ್ಚ್ 6ರ ಒಳಗಾಗಿ ಚುನಾವಣಾ ಆಯೋಗಕ್ಕೆ ಎಲ್ಲ ಚುನಾವಣಾ ಬಾಂಡ್‍ಗಳ ಸಮಗ್ರ ವಿವರಗಳನ್ನು ನೀಡುವಂತೆ ಕೋರ್ಟ್ ಸೂಚಿಸಿದ್ದರೂ, ಮಾರ್ಚ್ 4ರಂದು ಎಸ್‍ಬಿಐ ಸಲ್ಲಿಸಿದ ಅರ್ಜಿಯಲ್ಲಿ 2019ರಿಂದೀಚೆಗೆ 22 ಹಂತಗಳಲ್ಲಿ ಮಾರಾಟ ಮಾಡಿದ ಬಾಂಡ್‍ಗಳ ವಿವರ ಮಾತ್ರ ಇದೆ.

ಆರಂಭದಲ್ಲಿ 2019ರ ಎಪ್ರಿಲ್ 12ರಿಂದ 2024ರ ಫೆಬ್ರವರಿ 15ರವರೆಗೆ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು 22,217 ಬಾಂಡ್‍ಗಳನ್ನು ಬಳಸಲಾಗಿದೆ ಎಂದು ಹೇಳಿತ್ತು. ಆದರೆ ಆ ಬಳಿಕ ಮಾರ್ಚ್ 12ರಂದು ಸಲ್ಲಿಸಿದ ಅನುಸರಣಾ ಅಫಿಡವಿಟ್‍ನಲ್ಲಿಕೇವಲ 18,871 ಬಾಂಡ್‍ಗಳನ್ನು ಮಾತ್ರ ಮಾರಾಟ ಮಾಡಲಾಗಿದೆ ಎಂದು ಬಹಿರಂಗಪಡಿಸಿತ್ತು. ಉಳಿದ ಬಾಂಡ್‍ಗಳಣ್ನು 2019ರ ಎಪ್ರಿಲ್ 1 ರಿಂದ 11ರ ಅವಧಿಯಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ಸುಪ್ರೀಂಕೋರ್ಟ್ ತೀರ್ಪನ್ನು ಎಸ್‍ಬಿಐ ವಿಶ್ಲೇಷಣೆ ಮಾಡಿರುವ ವಿಧಾನ ಈ ವ್ಯತ್ಯಾಸಕ್ಕೆ ಕಾರಣ. 2019ರ ಎಪ್ರಿಲ್ 12ರಂದು ನೀಡಿದ ಮಧ್ಯಂತರ ಆದೇಶದ ಬಳಿಕ ಖರೀದಿ ಮಾಡಲಾದ ಚುನಾವಣಾ ಬಾಂಡ್‍ಗಳ ವಿವರಗಳನ್ನು ಸಲ್ಲಿಸುವಂತೆ ಎಸ್‍ಬಿಐಗೆ ಕೋರ್ಟ್ ಸೂಚಿಸಿತ್ತು.

ಮಧ್ಯಂತರ ತೀರ್ಪಿನ ಪ್ರಕಾರ, ಚುನಾವಣಾ ಬಾಂಡ್‍ಗಳಿಗೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು 2019ರ ಮೇ 15ರೊಳಗೆ ಚುನಾವಣಾ ಆಯೋಗಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ಇದನ್ನು ವಿಶ್ಲೇಷಿಸಿದ ಎಸ್‍ಬಿಐ 2018ರ ಮಾರ್ಚ್ 1ರಿಂದ 2019ರ ಎಪ್ರಿಲ್ 11ರ ವರೆಗಿನ ಮಾಹಿತಿಯನ್ನು ಹೊರತುಪಡಿಸಲಾಗಿದೆ ಎಂದು ನಿರ್ಧರಿಸಿತ್ತು. ಇದು ಈ ಮಾಹಿತಿಯ ಅಂತರಕ್ಕೆ ಕಾರಣವಾಗಿದೆ. ಇದರ ಪರಿಣಾಮವಾಗಿ ಮುಚ್ಚಿದ ಲಕೋಟೆಯಲ್ಲಿದ್ದ ಮಾಹಿತಿ ಬಹಿರಂಗವಾಗಿದ್ದು, ಉಳಿದ ಮಾಹಿತಿ ಬಹಿರಂಗವಾಗಿಲ್ಲ.

ಮುಚ್ಚಿದ ಲಕೋಟೆಯಲ್ಲಿರುವ ಮಾಹಿತಿಯಲ್ಲಿ 2018ರ ಮಾರ್ಚ್ 1ರಿಂದ 2019ರ ಮೇ 15ರವರೆಗೆ 10 ಹಂತಗಳಲ್ಲಿ ಬಿಡುಗಡೆ ಮಾಡಿದ ಬಾಂಡ್‍ಗಳ ವಿವರಗಳಿವೆ. ಇದರಲ್ಲಿ ಒಟ್ಟು 11681 ಬಾಂಡ್‍ಗಳಿವೆ. 2018ರ ಮಾರ್ಚ್ 1ರಿಂದ 2019ರ ಎಪ್ರಿಲ್ 12ರವರೆಗಿನ ಒಟ್ಟು 9159 ಬಾಂಡ್‍ಗಳ ಮಾಹಿತಿ ಇಲ್ಲ. ಇದರ ಒಟ್ಟು ಮೌಲ್ಯ 4002 ಕೋಟಿ ರೂಪಾಯಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X