Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರೊಫೆಸರ್ ನಿಂದ ಲೈಂಗಿಕ ಕಿರುಕುಳ: 500...

ಪ್ರೊಫೆಸರ್ ನಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಸಿಎಂಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ8 Jan 2024 7:36 AM IST
share
ಪ್ರೊಫೆಸರ್ ನಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಸಿಎಂಗೆ ಪತ್ರ

ಗುರುಗಾಂವ್: ಸಿರ್ಸಾದ ಚೌಧರಿ ದೇವಿಲಾಲ್ ವಿಶ್ವವಿದ್ಯಾನಿಲಯದ 500 ವಿದ್ಯಾರ್ಥಿನಿಯರು ಹರ್ಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್, ಅಲ್ಲಿನ ರಾಜ್ಯಪಾಲರು ಹಾಗೂ ಮಹಿಳಾ ಆಯೋಗಕ್ಕೆ ಪತ್ರ ಬರೆದು, ಪ್ರೊಫೆಸರ್ ಒಬ್ಬರು ತಮ್ಮ ಚೇಂಬರ್ ಗೆ ಕರೆದು ಹಲವು ದಿನಗಳ ಕಾಲ ಲೈಂಗಿಕ ಕಿರುಕುಳ ನೀಡಿದ್ದಾಗಿ ಆಪಾದಿಸಿದ್ದಾರೆ.

ಗುರುವಾರ ಈ ಪತ್ರ ಬರಯಲಾಗಿದ್ದು, ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ದೂರಿನ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲಾಗಿದೆ.

ಇದು ವಿದ್ಯಾರ್ಥಿನಿಯರು ಬರೆದ ನಾಲ್ಕನೇ ಪತ್ರವಾಗಿದ್ದು, ವಿಶ್ವವಿದ್ಯಾನಿಲಯದ ಆಂತರಿಕ ದೂರು ಸಮಿತಿ ಎರಡು ಬಾರಿ ಈ ಬಗ್ಗೆ ಪ್ರೊಫೆಸರ್ ಗೆ ಕ್ಲೀನ್ ಚಿಟ್ ನೀಡಿದೆ. ಪ್ರಾಥಮಿಕ ತನಿಖೆ ನಡೆಸಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲು ಸಾಧ್ಯ ಎಂದು ಎಎಸ್ಪಿ ದೀಪ್ತಿ ಗರ್ಗ್ ಹೇಳಿದ್ದಾರೆ.

ಆರೋಪಿ ಪ್ರೊಫೆಸರ್ ಈ ಆರೋಪಗಳನ್ನು ನಿರಾಕರಿಸಿದ್ದು, "ಇದು ರಾಜಕೀಯ ದುರುದ್ದೇಶದ ಕ್ರಮ" ಎಂದು ಹೇಳಿದ್ದಾರೆ. "ನಾನು ವಿವಿಯಲ್ಲಿ ಕೆಲ ಕಾರ್ಯಗಳಲ್ಲಿ ಸಕ್ರಿಯವಾಗಿರುವುದರಿಂದ ನನ್ನನ್ನು ಗುರಿ ಮಡಲಾಗಿದೆ. ನಾನು ಯಾವುದೇ ತನಿಖೆ ಎದುರಿಸಲು ಸಿದ್ಧ. ಇದು ರಾಜಕೀಯ ದ್ವೇಷವಲ್ಲದೇ ಬೇರೇನೂ ಅಲ್ಲ" ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಪ್ರೊಫೆಸರ್ ವಿರುದ್ಧ ಬರೆಯಲಾಗಿರುವ ನಾಲ್ಕೂ ಪತ್ರಗಳು ಖೈರ್ ಪುರ ಅಂಚೆ ಕಚೇರಿಯಿಂದ ಪೋಸ್ಟ್ ಆಗಿವೆ. ಮೊದಲ ಪತ್ರ ಕಳೆದ ವರ್ಷ ಕುಲಪತಿಗಳಿಗೆ ಬಂದಾಗ ತನಿಖೆ ನಡೆಸಲಾಗಿತ್ತು. ಆದರೆ ಈ ಆರೋಪಕ್ಕೆ ಯಾವ ಪುರಾವೆಯೂ ಸಿಗಲಿಲ್ಲ ಎಂದು ವಿವಿ ಮೂಲಗಳು ಹೇಳಿವೆ. ಕಳೆದ ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ರಾಜ್ಯಪಾಲರಿಗೆ ಇಂಥ ಎರಡು ಪತ್ರ ಬಂದಿತ್ತು. ವಿವಿ ಮತ್ತೆ ತನಿಖೆ ನಡೆಸಿದಾಗಲೂ ಯಾವುದೇ ಪುರಾವೆ ಸಿಗದೇ ಕ್ಲೀನ್ ಚಿಟ್ ನೀಡಲಾಗಿತ್ತು.

ನಾಲ್ಕನೇ ಪತ್ರದಲ್ಲಿ ಈ ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ನಡೆಸಿಕೊಳ್ಳಲಾಗುತ್ತಿತ್ತು ಎಂದು ಆಪಾದಿಸಲಾಗಿದೆ. "ನಮ್ಮನ್ನು ತಮ್ಮ ಕಚೇರಿಯ ಬಾತ್ ರೂಂ ಗೆ ಕರೆಸಿಕೊಂಡು ಅಸಭ್ಯವಾಗಿ ಸ್ಪರ್ಶಿಸಲಾಗುತ್ತಿತ್ತು. ನಾವು ಪ್ರತಿಭಟಿಸಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಬೆದರಿಕೆ ಹಾಕುತ್ತಿದ್ದರು" ಎಂದು ಆಪಾದಿಸಲಾಗಿದೆ.

ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಎಲ್ಲ ಪುರಾವೆಗಳನ್ನು ಇವರು ನಾಶಪಡಿಸಿದ್ದಾರೆ ಎನ್ನುವುದು ವಿದ್ಯಾರ್ಥಿನಿಯರ ಆರೋಪ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X