Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂಹ್ ಹಿಂಸಾಚಾರದ ಕುರಿತು 'ಸುಳ್ಳು,...

ನೂಹ್ ಹಿಂಸಾಚಾರದ ಕುರಿತು 'ಸುಳ್ಳು, ದಾರಿತಪ್ಪಿಸುವ' ಪೋಸ್ಟ್: ಸುದರ್ಶನ್ ನ್ಯೂಸ್ ನ ಸ್ಥಾನಿಕ ಸಂಪಾದಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Aug 2023 11:23 AM IST
share
ನೂಹ್ ಹಿಂಸಾಚಾರದ ಕುರಿತು ಸುಳ್ಳು, ದಾರಿತಪ್ಪಿಸುವ ಪೋಸ್ಟ್: ಸುದರ್ಶನ್ ನ್ಯೂಸ್ ನ ಸ್ಥಾನಿಕ ಸಂಪಾದಕನ ಬಂಧನ

ಹೊಸದಿಲ್ಲಿ: ನೂಹ್ ಹಾಗೂ ಹರ್ಯಾಣ ಇತರ ಜಿಲ್ಲೆಗಳಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಂಚಿಕೊಂಡ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿಯ ಸ್ಥಾನಿಕ ಸಂಪಾದಕನನ್ನು ಗುರುಗ್ರಾಮ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಸುದರ್ಶನ್ ನ್ಯೂಸ್ ನ ರೆಸಿಡೆಂಟ್ ಎಡಿಟರ್ ಮುಖೇಶ್ ಕುಮಾರ್ ಅವರನ್ನು ಗುರುಗ್ರಾಮದ ಸೆಕ್ಟರ್ 17 ರಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಮಾರ್ ಅವರನ್ನು ಕೆಲವು "ಗೂಂಡಾಗಳು" ಅಪಹರಿಸಿದ್ದಾರೆ ಎಂದು ಚಾನೆಲ್ ಆರಂಭದಲ್ಲಿ ಹೇಳಿಕೊಂಡಿತ್ತು. ಆದರೆ, ಸೈಬರ್ ಕ್ರೈಂ ವಿಭಾಗದಿಂದ ಅವರನ್ನು ಬಂಧಿಸಲಾಗಿದೆ ಎಂದು ಗುರುಗ್ರಾಮ್ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ (VHP) ಮೆರವಣಿಗೆಯ ಮೇಲೆ ಗುಂಪು ದಾಳಿ ಮಾಡಿದಾಗ ನೂಹ್ ನಲ್ಲಿ ನಡೆದ ಘರ್ಷಣೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಗೃಹರಕ್ಷಕರು ಹಾಗೂ ಓರ್ವ ಧರ್ಮಗುರು ಸೇರಿದ್ದಾರೆ.

ಕತರ್ ಮೂಲದ ಅಲ್ ಜಝೀರಾ ಸುದ್ದಿ ವಾಹಿನಿಯ ಒತ್ತಡದಿಂದಾಗಿ ಗುರುಗ್ರಾಮ್ ಪೊಲೀಸರು 'ಹಿಂದೂ ಕಾರ್ಯಕರ್ತರ' ವಿರುದ್ಧ ಕ್ರಮಕೈಗೊಳ್ಳುತ್ತಿದ್ದಾರೆ ಎಂದು ಕುಮಾರ್ ಟ್ವೀಟ್ ಮಾಡಿದ್ದಾರೆ.

ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದೇಶಿ ಮಾಧ್ಯಮಗಳು ಗುರುಗ್ರಾಮ್ ಪೊಲೀಸ್ ಕಮಿಷನರ್ ಕಲಾ ರಾಮಚಂದ್ರನ್ ಅವರಿಗೆ ಕರೆ ಮಾಡುತ್ತಿವೆ ಎಂದು ಕುಮಾರ್ ಟ್ವಿಟರ್ ನಲ್ಲಿ ಆರೋಪಿಸಿದ್ದಾರೆ.

ಗುರುಗ್ರಾಮ್ ಪೊಲೀಸರು ಕುಮಾರ್ ಅವರ ಪೋಸ್ಟ್ ಅನ್ನು "ಆಧಾರರಹಿತ, ಸುಳ್ಳು ಮತ್ತು ತಪ್ಪುದಾರಿಗೆಳೆಯುತ್ತದೆ” ಎಂದು ಹೇಳಿದ್ದಾರೆ, ಕುಮಾರ್ ಅವರ ವಿರುದ್ಧ ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಈ ಬಂಧನವು ಸಂಪೂರ್ಣವಾಗಿ ಕಾನೂನುಬಾಹಿರ ಹಾಗೂ ತಪ್ಪು. ಸುದರ್ಶನ್ ನ್ಯೂಸ್ ಮುಖೇಶ್ ಕುಮಾರ್ ಅವರ ಪರವಾಗಿ ನಿಂತಿದೆ ಹಾಗೂ ಅವರ ಬಂಧನವನ್ನು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಪರಿಗಣಿಸುತ್ತದೆ ”ಎಂದು ಚಾನೆಲ್ ಟ್ವೀಟ್ ಮಾಡಿದೆ.

ಸುದರ್ಶನ ನ್ಯೂಸ್ ನ ಪ್ರಧಾನ ಸಂಪಾದಕ ಸುರೇಶ್ ಚವ್ಹಾಂಕೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಸುದೀರ್ಘ ಪೋಸ್ಟ್ನಲ್ಲಿ ಕುಮಾರ್ ಬಂಧನದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

"ಪೊಲೀಸರು ಸಮವಸ್ತ್ರದಲ್ಲಿದ್ದಾಗ ಮುಕೇಶ್ ಕುಮಾರ್ ಅವರನ್ನು ಏಕೆ ಬಂಧಿಸಲಿಲ್ಲ? ಹರ್ಯಾಣ ಸರಕಾರವು ಅಧಿಕಾರಿಯ ಅಹಂಕಾರಕ್ಕೆ ತಲೆಬಾಗುತ್ತಿದೆಯೇ? ಪತ್ರಕರ್ತರು ಹಾಗೂ ಮಾನವ ಹಕ್ಕುಗಳ ಸಂಘಟನೆಗಳು ಎಲ್ಲಿವೆ? ಎಂದು ಸುರೇಶ್ ಚವ್ಹಾಂಕೆ ಟ್ವೀಟಿಸಿದ್ದಾರೆ.

ಒಂದು ಗಂಟೆಯ ನಂತರ ಕುಮಾರ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಸುರೇಶ್ ಹೇಳಿಕೊಂಡಿದ್ದಾರೆ. ಆದರೆ ಗುರುಗ್ರಾಮ ಪೊಲೀಸರು ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X