Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವೇಷ ಭಾಷಣದ ವಿರುದ್ಧ ಪೊಲೀಸರೇ ಸ್ವಯಂ...

ದ್ವೇಷ ಭಾಷಣದ ವಿರುದ್ಧ ಪೊಲೀಸರೇ ಸ್ವಯಂ ಪ್ರೇರಿತ ದೂರು ದಾಖಲಿಸಿ ಎಂದಿದೆ ಸುಪ್ರೀಂ ಕೋರ್ಟ್ !

ದ್ವೇಷ ಭಾಷಣ ತಡೆಯಲು ರಾಜ್ಯಗಳಿಗೆ, ಪೊಲೀಸರಿಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವೇನು ?

ವಾರ್ತಾಭಾರತಿವಾರ್ತಾಭಾರತಿ26 Dec 2023 5:32 PM IST
share
ದ್ವೇಷ ಭಾಷಣದ ವಿರುದ್ಧ ಪೊಲೀಸರೇ ಸ್ವಯಂ ಪ್ರೇರಿತ ದೂರು ದಾಖಲಿಸಿ ಎಂದಿದೆ ಸುಪ್ರೀಂ ಕೋರ್ಟ್ !

ಬೆಂಗಳೂರು: ಈ ವರ್ಷ ಆಗಸ್ಟ್ 25 ರಂದು ದ್ವೇಷ ಭಾಷಣದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್ ದ್ವೇಷ ಭಾಷಣ ಮಾಡಿದರೆ ಸಂತ್ರಸ್ತರು ದೂರು ನೀಡುವವರೆಗೆ ಕಾಯದೆ ಪೊಲೀಸರೇ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಗಳಿಗೆ ಹೇಳಿತ್ತು. ಸಮಾಜದಲ್ಲಿ ಶಾಂತಿ, ಸೌಹಾರ್ದ ಹಾಗು ಸಹೋದರತೆಯನ್ನು ಕಾಪಾಡಲೇಬೇಕು. ಇದಕ್ಕಾಗಿ 2018 ರಲ್ಲಿ ತಾನು ದ್ವೇಷ ಅಪರಾಧಗಳಿಗೆ ಕಡಿವಾಣ ಹಾಕಲು ಸೂಚಿಸಿದ್ದ ಮಾರ್ಗದರ್ಶಿ ಸೂತ್ರಗಳನ್ನು ಇನ್ನಷ್ಟು ಬಲಪಡಿಸಲು ಕೆಲವು ಹೆಚ್ಚುವರಿ ಕ್ರಮಗಳು ಅಗತ್ಯ ಎಂದು ಹೇಳಿತ್ತು. ಆ ಪೈಕಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ, ದ್ವೇಷ ಭಾಷಣ ಹೆಚ್ಚಿರುವ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಗಳ ವಿಶೇಷ ಸಮಿತಿ ರಚನೆಯಂತಹ ಕ್ರಮಗಳನ್ನು ನ್ಯಾ.ಸಂಜೀವ್ ಖನ್ನಾ ಹಾಗು ಎಸ್ ವಿ ಎನ್ ಭಟ್ಟಿ ಅವರ ಪೀಠ ಸೂಚಿಸಿತ್ತು.

ಇದೇ ಸಂದರ್ಭದಲ್ಲಿ ತಾನು ಈ ಹಿಂದೆ ದ್ವೇಷ ಭಾಷಣ ಹಾಗು ಅಪರಾಧಗಳ ನಿಯಂತ್ರಣಕ್ಕೆ ನೀಡಿದ್ದ ಆದೇಶದ ಪಾಲನೆ ರಾಜ್ಯಗಳಿಂದ ಆಗುತ್ತಿದೆಯೇ ಎಂದು ಪರಿಶೀಲಿಸಲು ನಿರ್ಧರಿಸಿತ್ತು. ಪ್ರತಿ ಜಿಲ್ಲೆಯಲ್ಲಿ ನೋಡಲ್ ಆಫೀಸರ್ ಗಳನ್ನು ನೇಮಿಸಿ ಗುಂಪು ಹಲ್ಲೆ ಹಾಗು ದ್ವೇಷ ಭಾಷಣವನ್ನು ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ತಾನು ನೀಡಿದ ಸೂಚನೆಗಳ ಪಾಲನೆಯಾಗಿದೆಯೇ ಎಂದು ಪರಿಶೀಲಿಸಿ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಹೇಳಿತ್ತು.

ಸುಪ್ರೀಂ ಕೋರ್ಟ್ ತನ್ನ 2018ರ ತೀರ್ಪಿನಲ್ಲಿ ಗುಂಪು ಹತ್ಯೆ ಹಾಗು ಹಲ್ಲೆ ಸಮಾಜಕ್ಕೆ ಘಾತುಕವಾಗಿದ್ದು, ಇವು ಅಸಹಿಷ್ಣುತೆ ಹಾಗು ತಪ್ಪು ಮಾಹಿತಿ ಪ್ರಸಾರದಿಂದ ಆಗುತ್ತಿವೆ. ಇದನ್ನು ತಡೆಯಲು ಹಾಗು ನಡೆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮಾರ್ಗದರ್ಶಿ ಸೂತ್ರಗಳನ್ನು ನೀಡಿ ಆದೇಶಿಸಿತ್ತು.

ದ್ವೇಷ ಅಪರಾಧ ಆಗದಂತೆ ತಡೆಯಲು ಪ್ರತಿ ಜಿಲ್ಲೆಯಲ್ಲಿ ಎಸ್ಪಿ ದರ್ಜೆಯ ಅಧಿಕಾರಿಯನ್ನು ನೋಡಲ್ ಆಫೀಸರ್ ಆಗಿ ನೇಮಿಸಲು ಹೇಳಿತ್ತು. ಜೊತೆಗೆ ಒಂದು ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಇಂತಹ ದ್ವೇಷಾಪರಾಧ ಎಸಗುವ ಸಾಧ್ಯತೆ ಇರುವವರ ಬಗ್ಗೆ, ದ್ವೇಷ ಭಾಷಣ ಮಾಡುವವರ ಬಗ್ಗೆ, ಪ್ರಚೋದನಕಾರಿ ಹೇಳಿಕೆ ನೀಡುವವರ ಬಗ್ಗೆ, ಸುಳ್ಳು ಸುದ್ದಿ ಹರಡುವವರ ಬಗ್ಗೆ ನಿಗಾ ಇಡಲು ಹೇಳಿತ್ತು. ದ್ವೇಷ ಭಾಷಣ ಮಾಡಿದವರ ವಿರುದ್ಧ ನೊಂದವರು ದೂರು ಸಲ್ಲಿಸಲು ಕಾಯದೆ ಸ್ವತಃ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಅದು ಪೊಲೀಸರಿಗೆ ಆದೇಶ ನೀಡಿತ್ತು.

ಆಗ ನೀಡಿದ್ದ ಮಾರ್ಗದರ್ಶಿ ಸೂತ್ರಗಳು ಸಮಗ್ರವಾಗಿದ್ದವು. ಆದರೆ ಅದಕ್ಕೆ ಕೆಲವು ಸೇರ್ಪಡೆ ಈಗಲೂ ಮಾಡಬಹುದು. "ಅದರಿಂದ ಏನನ್ನೂ ಕಡಿಮೆ ಮಾಡದೆ ಕೆಲವನ್ನು ಸೇರಿಸಲಾಗುವುದು. ಸಿಸಿಟಿವಿ ಕ್ಯಾಮರಾ ಇದ್ದರೆ ದ್ವೇಷ ಅಪರಾಧಕ್ಕೆ ಅದೊಂದು ತಡೆಯಾಗುತ್ತದೆ. ಹಾಗಾಗಿ ಅದನ್ನು ಇನ್ಸ್ಟಾಲ್ ಮಾಡಬೇಕು. ಪೊಲೀಸರಿಗೂ ದ್ವೇಷ ಅಪರಾಧಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಕಾಡೆಮಿ ಅವರನ್ನು ತರಬೇತುಗೊಳಿಸಬೇಕು" ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಅವಹೇಳನ, ಬೆದರಿಕೆ, ಕಿರುಕುಳ, ಹಿಂಸೆಗೆ, ದ್ವೇಷಕ್ಕೆ ಪ್ರಚೋದನೆ, ಒಬ್ಬರ ಧರ್ಮ, ಜನಾಂಗ, ಹುಟ್ಟಿದ್ದ ಸ್ಥಳ, ವಿಳಾಸ, ಪ್ರದೇಶ, ಭಾಷೆ , ಜಾತಿ , ಸಮುದಾಯ, ಲೈಂಗಿಕ ಆದ್ಯತೆ , ವೈಯಕ್ತಿಕ ನಂಬಿಕೆಗಳ ಆಧಾರದಲ್ಲಿ ತಾರತಮ್ಯದ ಅಭಿವ್ಯಕ್ತಿ ದ್ವೇಷ ಭಾಷಣ ಆಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ದೇಶಾದ್ಯಂತ ದ್ವೇಷ ಭಾಷಣ ಹಾಗು ದ್ವೇಷ ಅಪರಾಧಗಳು ಹೆಚ್ಚುತ್ತಿರುವ ಬಗ್ಗೆ ಸಲ್ಲಿಸಲಾದ ಹಲವು ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಈ ನಿರ್ದೇಶನ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X