Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಕೈಕ ಅಭ್ಯರ್ಥಿ ಕಣದಲ್ಲಿದ್ದರೂ...

ಏಕೈಕ ಅಭ್ಯರ್ಥಿ ಕಣದಲ್ಲಿದ್ದರೂ ಮತದಾರರಿಗೆ ನೋಟಾ ಚಲಾವಣೆ ಸಾಧ್ಯತೆ ಬಗ್ಗೆ ಸುಪ್ರೀಂ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ8 Aug 2025 9:51 AM IST
share
ಏಕೈಕ ಅಭ್ಯರ್ಥಿ ಕಣದಲ್ಲಿದ್ದರೂ ಮತದಾರರಿಗೆ ನೋಟಾ ಚಲಾವಣೆ ಸಾಧ್ಯತೆ ಬಗ್ಗೆ ಸುಪ್ರೀಂ ಪರಿಶೀಲನೆ

ಹೊಸದಿಲ್ಲಿ: ಏಕೈಕ ಅಭ್ಯರ್ಥಿ ಚುನಾವಣಾ ಕಣದಲ್ಲಿದ್ದರೂ ಮತದಾರರಿಗೆ ನನ್ ಆಫ್ ದ ಅಬವ್ (ನೋಟಾ) ಚಲಾಯಿಸುವ ಅಧಿಕಾರವನ್ನು ನೀಡುವ ಪ್ರಸ್ತಾವವನ್ನು ಪರಿಶೀಲಿಸಲು ಗುರುವಾರ ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ಈ ಮೂಲಕ ಆ ಅಭ್ಯರ್ಥಿಯ ಆಯ್ಕೆಯನ್ನು ಅನುಮೋದಿಸುವ ಅಥವಾ ಅಭ್ಯರ್ಥಿಗೆ ಚಲಾವಣೆಯಾದ ಮತಕ್ಕಿಂತ ಹೆಚ್ಚು ಮತ ನೋಟಾಗೆ ಚಲಾವಣೆಯಾದಲ್ಲಿ ಆಯ್ಕೆಯನ್ನು ರದ್ದುಪಡಿಸಲು ಸಾಧ್ಯವಾಗಲಿದೆ.

ಸುಪ್ರೀಂಕೋರ್ಟ್ ನ 2013ರ ತೀರ್ಪಿಗೆ ಅನುಗುಣವಾಗಿ ಜಾರಿಗೆ ಬಂದಿರುವ ನೋಟಾ ವ್ಯವಸ್ಥೆ ವಿಫಲ ಪರಿಕಲ್ಪನೆ ಎಂದು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ಬಣ್ಣಿಸಿ, ಮತದಾರರಿಂದ ಇದಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಹೇಳಿದ್ದರೂ, ನ್ಯಾಯಮೂರ್ತಿಗಳಾದ ಸೂರ್ಯಕಾಂತ, ಉಜ್ಜಲ್ ಭೂಯಾನ್ ಮತ್ತು ಎನ್.ಕೆ.ಸಿಂಗ್ ಅವರಿದ್ದ ವಿಭಾಗೀಯ ಪೀಠ, "ಇದೊಂದು ಆಸಕ್ತಿದಾಯಕ ಪ್ರಶ್ನೆ. ಭಾರತದ ಚುನಾವಣೆಯಲ್ಲಿ ತುರುಸಿನ ಸ್ಪರ್ಧೆ ಇರುತ್ತದೆ. ಆದರೆ ಕಣದಲ್ಲಿರುವ ಏಕೈಕ ಅಭ್ಯರ್ಥಿಯನ್ನು ಕೂಡಾ ಮತದಾರ ಇಷ್ಟಪಡುವುದಿಲ್ಲ ಎಂದಾದರೆ, ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ತಮ್ಮ ಪ್ರತಿನಿಧಿಯಾಗಿ ಯಾರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು?" ಎಂದು ಅಭಿಪ್ರಾಯಪಟ್ಟರು.

"ಕಣದಲ್ಲಿರುವ ಏಕೈಕ ಅಭ್ಯರ್ಥಿ ಬಗ್ಗೆ ಮತದಾರರಲ್ಲಿ ಅಸಮಾಧಾನ ಇದ್ದರೆ, ಮತದಾರರು ದೊಡ್ಡ ಸಂಖ್ಯೆಯಲ್ಲಿ ಬಂದು ನೋಟಾ ಆಯ್ಕೆ ಮಾಡಬಹುದು. ಅಭ್ಯರ್ಥಿಗಿಂತ ಹೆಚ್ಚು ಮತಗಳು ನೋಟಾಗೆ ಚಲಾವಣೆಯಾದಲ್ಲಿ, ಏನು ಮಾಡಬೇಕು? ಇದು ಅಧ್ಯಯನ ಯೋಗ್ಯ. ಆದರೆ ಆಸಕ್ತಿದಾಯಕ ಪ್ರಶ್ನೆಯಾಗಿದ್ದು, ನ್ಯಾಯಾಂಗದ ವಿವೇಚನೆ ಅಗತ್ಯವಿದೆ" ಎಂದು ಹೇಳಿದರು.

ಆದರೆ ಇದನ್ನು ವಿರೋಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಭಾರತೀಯ ಪರಿಸ್ಥಿತಿಯಲ್ಲಿ ಇದು ಅಸಂಬದ್ಧ ಪರಿಕಲ್ಪನೆ ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗದ ವಕೀಲ ರಾಕೇಶ್ ದ್ವಿವೇದಿ ಕೂಡಾ ಆರಂಭಿಂದಲೂ ನೋಟಾ ಯಾವುದೇ ಪರಿಣಾಮ ಬೀರಿಲ್ಲ ಎಂದು ವಾದಿಸಿದರು.

Tags

Supreme CourtNOTA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X