Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯ ವಿಧಾನಸಭೆಗಳ ಅಂಗೀಕೃತ ಮಸೂದೆಗೆ...

ರಾಜ್ಯ ವಿಧಾನಸಭೆಗಳ ಅಂಗೀಕೃತ ಮಸೂದೆಗೆ ರಾಜ್ಯಪಾಲರ ಅಂಕಿತ: ಗಡುವು ವಿಧಿಸಿದ ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 April 2025 8:01 AM IST
share
ರಾಜ್ಯ ವಿಧಾನಸಭೆಗಳ ಅಂಗೀಕೃತ ಮಸೂದೆಗೆ ರಾಜ್ಯಪಾಲರ ಅಂಕಿತ: ಗಡುವು ವಿಧಿಸಿದ ಸುಪ್ರೀಂಕೋರ್ಟ್

ಹೊಸದಿಲ್ಲಿ: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಲು ಅಥವಾ ಮಸೂದೆಯನ್ನು ವಾಪಾಸು ಕಳುಹಿಸಲು ಇಲ್ಲವೇ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಲು ಸಮಯಮಿತಿ ನಿಗದಿಪಡಿಸುವ ಸಂಬಂಧ ಪಾಕಿಸ್ತಾನ ಮತ್ತು ಅಮೆರಿಕದ ಸಂವಿಧಾನಾತ್ಮಕ ನಿಬಂಧನೆಗಳಿಂದ ಪ್ರೇರಣೆ ಪಡೆದ ಸುಪ್ರೀಂಕೋರ್ಟ್, ಸಮಯಮಿತಿಯ ಉಲ್ಲಂಘನೆಯು ನ್ಯಾಯಾಂಗ ಮೇಲ್ವಿಚಾರಣೆಯ ಉತ್ತರದಾಯಿತ್ವಕ್ಕೆ ಒಳಪಡುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದೀವಾಲಾ ಮತ್ತು ಆರ್.ಮಹದೇವನ್ ಈ ತಿಂಗಳ 8ರಂದು ನೀಡಿದ 415 ಪುಟಗಳ ತೀರ್ಪಿನ ವಿವರಗಳನ್ನು ಸುಪ್ರೀಂಕೋರ್ಟ್ ವೆಬ್ಸೈಟ್ ನಲ್ಲಿ ಶುಕ್ರವಾರ ಅಪ್ ಲೋಡ್ ಮಾಡಲಾಗಿದ್ದು, ರಾಜ್ಯ ವಿಧಾನಸಭೆ ಅಥವಾ ಸಂಸತ್ತು ಆಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳು ಒಪ್ಪಿಗೆ ನೀಡುವ ಸಂಬಂಧ ಸಂವಿಧಾನದಲ್ಲಿ ಇರುವ "ಸಾಧ್ಯವಾದಷ್ಟು ಬೇಗ" ಎಂಬ ಅಂಶವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬಂದಿದೆ.

ಸುಪ್ರೀಂಕೋರ್ಟ್ ನ ಮೇಲ್ವಿಚಾರಣೆ ಅಧಿಕಾರದ ಬಗ್ಗೆ ತೀರ್ಪಿನಲ್ಲಿ ಉಲ್ಲೇಖಿಸಿರುವ ನ್ಯಾಯಮೂರ್ತಿ ಪರ್ದೀವಾಲಾ, "ಸಂವಿಧಾನದಲ್ಲಿ ಅಡಕವಾದ ಯಾವುದೇ ಅಧಿಕಾರ ಚಲಾವಣೆಯು ನ್ಯಾಯಾಂಗದ ಪರಾಮರ್ಶೆಯ ಆಚೆಗೆ ಇರುವುದಿಲ್ಲ. ಆದ್ದರಿಂದ ಸಂವಿಧಾನದ 200 ಮತ್ತು 201ನೇ ವಿಧಿಗಳ ಅನ್ವಯ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳ ಕಾರ್ಯಗಳನ್ನು ಇದರಿಂದ ಹೊರತುಪಡಿಸಲು ಸಕಾರಣಗಳಿಲ್ಲ" ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯಪಾಲರಿಗೆ ಸಮಯಮಿತಿ ನಿಗದಿಪಡಿಸುವ ಸಂಬಂಧ ಸಂವಿಧಾನದಲ್ಲಿ ಲಿಖಿತವಾದ ಶಬ್ದಗಳ ಆಚೆಗೆ ನ್ಯಾಯಾಲಯದ ವ್ಯಾಪ್ತಿ ಇದೆಯೇ ಎನ್ನುವುದು ಸುಪ್ರೀಂಕೋರ್ಟ್ ಗೆ ಎದುರಾದ ಮೊದಲ ಪ್ರಶ್ನೆಯಾಗಿತ್ತು. ಪಕ್ಷಾಂತರ ನಿಷೇಧ ಕಾಯ್ದೆಯಲ್ಲಿ ಶಾಸಕರ ಅನರ್ಹತೆ ಕೋರಿದ ಮನವಿಗಳನ್ನು ಇತ್ಯರ್ಥಪಡಿಸಲು ಸ್ಪೀಕರ್ ಗಳಿಗೆ ಸಮಯಮಿತಿ ನಿಗದಿಪಡಿಸುವ ಸಂಬಂಧ 2021ರಲ್ಲಿ ನೀಡಿದ ತೀರ್ಪಿನ ಆಧಾರದಲ್ಲೇ ಈ ವಿಚಾರದಲ್ಲೂ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಪಾಕಿಸ್ತಾನ ಸಂವಿಧಾನದ 75ನೇ ವಿಧಿಯಲ್ಲಿ ಮತ್ತು ಅಮೆರಿಕ ಸಂವಿಧಾನದ ಸೆಕ್ಷನ್ 7ರ 1ನೇ ವಿಧಿಯಲ್ಲಿ ಇರುವ ಉಲ್ಲೇಖವನ್ನು ನ್ಯಾಯಮೂರ್ತಿಗಳು ಉದಾಹರಿಸಿದ್ದಾರೆ. ನಿಗದಿತ ಸಮಯದೊಳಗೆ ಅಧ್ಯಕ್ಷರು ಮಸೂದೆಗೆ ಒಪ್ಪಿಗೆ ನೀಡದಿದ್ದರೆ ಆ ಮಸೂದೆ ಅನುಮೋದನೆಗೊಂಡಿದೆ ಎಂದು ಭಾವಿಸಬೇಕಾಗುತ್ತದೆ ಎಂಬ ಉಲ್ಲೇಖ ಈ ಎರಡು ಸಂವಿಧಾನಗಳಲ್ಲಿದೆ.

Tags

Supreme CourtGovernorstate Assemblies
share
ವಾರ್ತಾಭಾರತಿ
ವಾರ್ತಾಭಾರತಿ
Next Story
X