Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣ: 9 ಮಂದಿ ಬಂಡಾಯ ಅಭ್ಯರ್ಥಿಗಳ...

ತೆಲಂಗಾಣ: 9 ಮಂದಿ ಬಂಡಾಯ ಅಭ್ಯರ್ಥಿಗಳ ಮನವೊಲಿಸಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ16 Nov 2023 8:38 AM IST
share
ತೆಲಂಗಾಣ: 9 ಮಂದಿ ಬಂಡಾಯ ಅಭ್ಯರ್ಥಿಗಳ ಮನವೊಲಿಸಿದ ಕಾಂಗ್ರೆಸ್

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕೆ ಧುಮುಕಿದ್ದ 9 ಮಂದಿಯನ್ನು ಮನವೊಲಿಸಿ, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಬುಧವಾರ ನಾಮಪತ್ರಗಳನ್ನು ವಾಪಾಸು ತೆಗೆಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಈ ಅಭ್ಯರ್ಥಿಗಳು ಕಣಕ್ಕೆ ಧುಮುಕಿದ್ದರು. ಕಾಂಗ್ರೆಸ್ ಮುಖಂಡರು ಮನವೊಲಿಸಿದ ಬಳಿಕ ಇದೀಗ ಅಧಿಕೃತ ಅಭ್ಯರ್ಥಿಗಳ ಪರವಾಗಿ ನಾಮಪತ್ರ ವಾಪಾಸು ಪಡೆದಿದ್ದಾರೆ. ಅದಿಲಾಬಾದ್ ಕ್ಷೇತ್ರದಲ್ಲಿ ಮಾತ್ರ ಬಂಡಾಯ ಅಭ್ಯರ್ಥಿ ಕಣದಲ್ಲಿ ಉಳಿದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಸಂಜೀವ್ ರೆಡ್ಡಿ ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ.

ಕರ್ನಾಟಕ ಮತ್ತು ಇತರ ಕಡೆಗಳ ಅನುಭವದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಬಂಡಾಯ ಅಭ್ಯರ್ಥಿಗಳ ಮನವೊಲಿಸಲು ನಿರ್ದಿಷ್ಟ ತಂಡಗಳನ್ನು ನಿಯೋಜಿಸಿದ್ದರು. ಈ ಅಭ್ಯರ್ಥಿಗಳಿಗೆ ಕೆಲ ಹುದ್ದೆಗಳ ಆಮಿಷ ನೀಡಲಾಗಿದ್ದು, ಮತ್ತೆ ಕೆಲವರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶ ನೀಡುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಸೂರ್ಯಪೇಟೆ ಕ್ಷೇತ್ರದಿಂದ ಕಣದಲ್ಲಿದ್ದ ಪಟೇಲ್ ರಮೇಶ್ ರೆಡ್ಡಿಯವರ ನಿವಾಸಕ್ಕೆ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೋಹಿತ್ ಚೌಧರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲು ರವಿ ಭೇಟಿ ನೀಡಿ, ಮನವೊಲಿಸುವಲ್ಲಿ ಯಶಸ್ವಿಯಾದರು. ಅಧಿಕೃತ ಅಭ್ಯರ್ಥಿ ರಾಮರೆಡ್ಡಿ, ದಾಮೋದರ್ ರೆಡ್ಡಿಯವರನ್ನು ಬೆಂಬಲಿಸಿ ಕಣದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದರು. ಆದರೆ ಇದರಿಂದ ಉದ್ರಿಕ್ತರಾದ ರಮೇಶ್ ರೆಡ್ಡಿ ಬೆಂಬಲಿಗರು 73 ವರ್ಷದ ಮಲ್ಲು ರವಿ ಮೇಲೆ ಹಲ್ಲೆಗೆ ಮುಂದಾದರು. ಅವರ ಪತ್ನಿ ಕೂಡಾ ಕಣ್ಣೀರಿಡುತ್ತಾ ರಮೇಶ್ ರೆಡ್ಡಿ ಉಮೇದುವಾರಿಕೆಯನ್ನು ಬೆಂಬಲಿಸುವಂತೆ ಕೋರಿದರು.

ಕೊನೆಗೂ ಕಣದಿಂದ ಹಿಂದೆ ಸರಿಯಲು ಒಪ್ಪಿಕೊಂಡ ರೆಡ್ಡಿಯವರಿಗೆ ಲೋಕಸಭಾ ಚುನಾವಣೆ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ.

Tags

TelanganaCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X