Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರೂಪಕ ಸುಧೀರ್ ಚೌಧರಿಗೆ 14 ಕೋಟಿ ರೂ....

ನಿರೂಪಕ ಸುಧೀರ್ ಚೌಧರಿಗೆ 14 ಕೋಟಿ ರೂ. ಪ್ಯಾಕೇಜ್ ಆಫರ್ ನೀಡಿದ ಡಿಡಿ ನ್ಯೂಸ್?

ವಾರ್ತಾಭಾರತಿವಾರ್ತಾಭಾರತಿ21 Feb 2025 7:11 PM IST
share
ನಿರೂಪಕ ಸುಧೀರ್ ಚೌಧರಿಗೆ 14 ಕೋಟಿ ರೂ. ಪ್ಯಾಕೇಜ್ ಆಫರ್ ನೀಡಿದ ಡಿಡಿ ನ್ಯೂಸ್?

ಹೊಸದಿಲ್ಲಿ : ಹಿಂದಿ ಸುದ್ದಿ ವಾಹಿನಿ ಆಜ್ ತಕ್‌ನ ಪ್ರೈಮ್ ಟೈಮ್ ಕಾರ್ಯಕ್ರಮದ ನಿರೂಪಕ ಸುಧೀರ್ ಚೌಧರಿ ಏಪ್ರಿಲ್‌ನಿಂದ ಸರಕಾರಿ ಸ್ವಾಮ್ಯದ ಡಿಡಿ ನ್ಯೂಸ್‌ಗೆ ಸೇರುವ ಸಾಧ್ಯತೆಯಿದೆ ಎಂದು freepressjournal ವರದಿ ಮಾಡಿದೆ.

ಪ್ರಸ್ತುತ ಆಜ್ ತಕ್‌ನಲ್ಲಿ ರಾತ್ರಿ 9 ರಿಂದ 10ರವರೆಗೆ ಪ್ರಸಾರವಾಗುವ 'ಬ್ಲ್ಯಾಕ್ & ವೈಟ್' ಕಾರ್ಯಕ್ರಮವನ್ನು ಸುಧೀರ್ ಚೌಧರಿ ನಿರೂಪಣೆ ಮಾಡುತ್ತಿದ್ದಾರೆ. ಡಿಡಿ ನ್ಯೂಸ್ ಅವರಿಗೆ 14 ಕೋಟಿ ರೂ. ವಾರ್ಷಿಕ ಪ್ಯಾಕೇಜ್ ಆಫರ್ ನೀಡಿದೆ ಎಂದು ಹೇಳಲಾಗಿದೆ.

ಈ ಕುರಿತು ಪತ್ರಕರ್ತೆ ಶ್ರುತಿ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಮೂಲಗಳ ಪ್ರಕಾರ ಸುಧೀರ್ ಚೌಧರಿ ಈ ವರ್ಷದ ಏಪ್ರಿಲ್‌ನಿಂದ ಡಿಡಿ ನ್ಯೂಸ್‌ಗೆ ಸೇರುತ್ತಿದ್ದಾರೆ. ತೆರಿಗೆದಾರರ ಹಣದಿಂದ 14 ಕೋಟಿ ರೂ. ಪ್ಯಾಕೇಜ್ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

ಝೀ ಮೀಡಿಯಾದಲ್ಲಿ ಪ್ರಧಾನ ಸಂಪಾದಕ ಮತ್ತು ಸಿಇಒ ಆಗಿದ್ದ ಸುಧೀರ್ ಚೌಧರಿ, ಜೂನ್ 2022ರಲ್ಲಿ ಝೀ ನ್ಯೂಸ್ ತೊರೆದು ಆಜ್ ತಕ್‌ನ ಸಲಹಾ ಸಂಪಾದಕರಾಗಿ ಸೇರ್ಪಡೆಗೊಂಡಿದ್ದರು. ನಿರೂಪಕರಾಗಿ ಸುಧೀರ್ ಚೌಧರಿ ಹಲವು ಬಾರಿ ವಿವಾದವನ್ನು ಸೃಷ್ಟಿಸಿದ್ದರು. ಸೆಪ್ಟೆಂಬರ್ 2023ರಲ್ಲಿ ಆಜ್‌ತಕ್‌ ಸುದ್ದಿ ವಾಹಿನಿಯ ಕಾರ್ಯಕ್ರಮದಲ್ಲಿ ಕೋಮು ಸಾಮರಸ್ಯ ಧಕ್ಕೆ ಆರೋಪದಲ್ಲಿ ಕರ್ನಾಟಕ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಕಳೆದ ಜನವರಿಯಲ್ಲಿ ಬುಡಕಟ್ಟು ಸಮುದಾಯದ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಜಾರ್ಖಂಡ್‌ನಲ್ಲಿ ಸುಧೀರ್ ಚೌಧರಿ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಜಾರ್ಖಂಡ್ ಹೈಕೋರ್ಟ್ ಅವರಿಗೆ ಪ್ರಕರಣದಲ್ಲಿ ರಿಲೀಫ್ ನೀಡಿತ್ತು.

ಸುಧೀರ್ ಚೌಧರಿ ಡಿಡಿ ನ್ಯೂಸ್‌ಗೆ ಸೇರುವ ಬಗ್ಗೆ ಊಹಾಪೋಹಗಳಿಂದ ಸರಕಾರ ಸಾರ್ವಜನಿಕ ವಲಯದ ಸುದ್ದಿ ವಾಹಿನಿಯನ್ನು ಖಾಸಗಿ ಸುದ್ದಿ ವಾಹಿನಿಯಾಗಿ ಪರಿವರ್ತಿಸಲು ಯೋಜಿಸುತ್ತಿದೆಯೇ ಎಂಬ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X