Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳಾ ಪೊಲೀಸ್ ಹತ್ಯೆ ಆರೋಪ: ಎರಡು...

ಮಹಿಳಾ ಪೊಲೀಸ್ ಹತ್ಯೆ ಆರೋಪ: ಎರಡು ವರ್ಷಗಳ ಬಳಿಕ ದೆಹಲಿ ಪೊಲೀಸ್ ಮುಖ್ಯಪೇದೆಯ ಬಂಧನ

ವಾರ್ತಾಭಾರತಿವಾರ್ತಾಭಾರತಿ2 Oct 2023 11:32 AM IST
share
ಮಹಿಳಾ ಪೊಲೀಸ್ ಹತ್ಯೆ ಆರೋಪ: ಎರಡು ವರ್ಷಗಳ ಬಳಿಕ ದೆಹಲಿ ಪೊಲೀಸ್ ಮುಖ್ಯಪೇದೆಯ ಬಂಧನ

ಹೊಸದಿಲ್ಲಿ: ಹಲವು ತಿಂಗಳಿಂದ ತಾನು ಹಿಂಬಾಲಿಸುತ್ತಿದ್ದ ಸಹೋದ್ಯೋಗಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಂದು, ಜೌಗುಹೊಂಡದಲ್ಲಿ ಮೃತದೇಹವನ್ನು ಹೂತು ಹಾಕಿದ ಆರೋಪದಲ್ಲಿ ಎರಡು ವರ್ಷಗಳಗಳ ಬಳಿಕ ದೆಹಲಿ ಪೊಲೀಸ್ ಮುಖ್ಯಪೇದೆಯನ್ನು ಬಂಧಿಸಲಾಗಿದೆ.

2021ರಲ್ಲಿ ಈ ಘಟನೆ ನಡೆದಿದ್ದು, ಮುಂದಿನ 18 ತಿಂಗಳ ಕಾಲ ಮಹಿಳೆಯ ಧ್ವನಿ ಸಂದೇಶವನ್ನು ಬಳಸಿಕೊಂಡು, ಆಕೆ ಜೀವಂತ ಇದ್ದಾಳೆ ಎಂದು ಆಕೆಯ ಕುಟುಂಬದವರನ್ನು ನಂಬಿಸುತ್ತಾ ಬಂದಿದ್ದ ಎಂದು ಆಪಾದಿಸಲಾಗಿದೆ. ಕುಟುಂಬದವರನ್ನು ವಂಚಿಸಲು ಸುಳ್ಳಿನ ಜಾಲ ಹೆಣೆದಿರುವುದು ಇದೀಗ ಬೆಳಕಿಗೆ ಬಂದಿದೆ.

ಮೃತ ಮಹಿಳಾ ಪೊಲೀಸ್ನ ಸಹೋದರಿಯ ನಿರಂತರ ಪ್ರಯತ್ನದಿಂದಾಗಿ ಎರಡು ವರ್ಷಗಳಿಂದ ಕಟ್ಟುಕಥೆಗಳ ಮೂಲಕ ಎಲ್ಲರನ್ನೂ ನಂಬಿಸಿದ್ದ ಈತನ ಸುಳ್ಳಿನ ಕೋಟೆ ಸೆಪ್ಟೆಂಬರ್ನಲ್ಲಿ ಕುಸಿಯಲಾರಂಭಿಸಿದೆ. ಕೊಲೆ ಆರೋಪದಲ್ಲಿ 42 ವರ್ಷ ವಯಸ್ಸಿನ ಸುರೇಂಧ್ರ ಸಿಂಗ್ ರಾಣಾ ಎಂಬ ಸಹೋದ್ಯೋಗಿಯನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಿದಾಗ ಎರಡು ವರ್ಷಗಳ ಹಿಂದೆ ಮೋನಿಕಾ ಯಾದವ್ (27) ಎಂಬಾಕೆಯನ್ನು ಎರಡು ವರ್ಷಗಳ ಹಿಂದೆ ಕೊಲೆ ಮಾಡಿರುವುದು ದೃಢಪಟ್ಟಿದೆ.

ಮೃತ ಮಹಿಳೆಯ ದೇಹದ ಅವಶೇಷಗಳನ್ನು ವಶಪಡಿಸಿಕೊಂಡು ಡಿಎನ್ಎ ಪರೀಕ್ಷೆಗೆ ಒಳಪಡಿಸಲಾಗಿದೆ. ಕುಟುಂಬ ಹಾಗೂ ನಮ್ಮನ್ನು ನಂಬಿಸುವ ಎಲ್ಲ ಕುಟಿಲ ಪ್ರಯತ್ನವನ್ನೂ ರಾಣಾ ಮಾಡುತ್ತಾ ಬಂದಿದ್ದ. ಆದರೆ ಪ್ರಕರಣವನ್ನು ಯಶಸ್ವಿಯಾಗಿ ಬೇಧಿಸಲಾಗಿದೆ ಎಂದು ವಿಶೇಷ ಆಯುಕ್ತ ರವೀಂದ್ರ ಯಾದವ್ ಹೇಳಿದ್ದಾರೆ. ಕಳೆದ ವಾರ ರಾಣಾ, ತಾನು ಮೃತದೇಹವನ್ನು ಹೂತಿದ್ದ ಅಲೀಪುರ ಪ್ರದೇಶದ ಗಿಡಗಂಟಿಗಳಿಂದ ತುಂಬಿದ್ದ ಜಾಗಕ್ಕೆ ಪೊಲೀಸರನ್ನು ಕರೆದೊಯ್ದಿದ್ದಾನೆ. ಪೊಲೀಸರು ಮೃತಮಹಿಳೆಯ ಎಲುಬುಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದರು.

ಮುಖರ್ಜಿ ನಗರದ ಪೊಲೀಸರು ಕುಟುಂಬದ ದೂರನ್ನು ಸ್ವೀಕರಿಸಲು ನಿರಾಕರಿಸಿದ್ದು, ಸತತ 18 ತಿಂಗಳ ಪ್ರಯತ್ನದ ಬಳಿಕ ಏಪ್ರಿಲ್ನಲ್ಲಿ ದೂರು ದಾಖಲಿಸಿಕೊಂಡಿದ್ದಾಗಿ ಕುಟುಂಬ ಆಪಾದಿಸಿದೆ.

ದೆಹಲಿ ಪೊಲೀಸ್ ಪಿಸಿಆರ್ ಘಟಕದಲ್ಲಿ ನೇಮಕಗೊಂಡ ಬಳಿಕ ಯಾದವ್ ಹಾಗೂ ರಾಣಾ 2018ರಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದಾರೆ. ರಾಣಾ ಈ ವಿಭಾಗದಲ್ಲಿ 2012ರಿಂದ ಉದ್ಯೋಗದಲ್ಲಿದ್ದ. ಇಬ್ಬರೂ ಸ್ನೇಹಿತರಾಗಿದ್ದರು ಹಾಗೂ ಕೆಲ ವರ್ಷಗಳ ಕಾಲ ಕರೆ ಮತ್ತು ಸಂದೇಶ, ಧ್ವನಿ ಸಂದೇಶಗಳನ್ನು ವಿನಿಯಮ ಮಾಡಿಕೊಳ್ಳುತ್ತಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಯಾದವ್, ರಾಣಾನನ್ನು ತಂದೆಯ ಸ್ಥಾನದಲ್ಲಿ ಕಂಡಿದ್ದಳು ಹಾಗೂ ಆತ ಕೂಡಾ ಈಕೆಯನ್ನು ಬೇಟಾ ಎಂದು ಸಂಬೋಧಿಸುತ್ತಿದ್ದ. ಯಾದವ್ ಮೂಲತಃ ಉತ್ತರ ಪ್ರದೇಶದ ಬುಲಂದರ್ಶಹರ್ನವರಾಗಿದ್ದು, 2020ರಲ್ಲಿ ತವರು ರಾಜ್ಯದಲ್ಲಿ ಪೊಲೀಸ್ ಸೇವೆಗೆ ಆಯ್ಕೆಯಾದ ಬಳಿಕ ದೆಹಲಿ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. 2021ರಲ್ಲಿ ಆಡಳಿತಾತ್ಮಕ ಸೇವೆ ಪರೀಕ್ಷೆಗೆ ಸಜ್ಜಾಗುವ ಸಲುವಾಗಿ ಮುಖರ್ಜಿನಗರದಲ್ಲಿ ಪಿಜಿ ಸೇರಿದ್ದರು. ಆಗಲೇ ವಿವಾಹಿತನಾಗಿದ್ದ ರಾಣಾ ಈಕೆಯನ್ನು ಹಿಂಬಾಲಿಸುತ್ತಿದ್ದ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X