Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಅಭ್ಯರ್ಥಿಗೆ ಜಯ :...

ಬಿಜೆಪಿ ಅಭ್ಯರ್ಥಿಗೆ ಜಯ : ಚುನಾವಣಾಧಿಕಾರಿ ಘೋಷಣೆ

ಚಂಡೀಗಢ ಮೇಯರ್ ಚುನಾವಣೆ ; 8 ಮತಗಳು ‘‘ಅಸಿಂಧು’’ ► ಹಾಡಹಗಲಲ್ಲೇ ನಡೆದ ದರೋಡೆ: ಕೇಜ್ರಿವಾಲ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 Jan 2024 8:07 PM IST
share
ಬಿಜೆಪಿ ಅಭ್ಯರ್ಥಿಗೆ ಜಯ : ಚುನಾವಣಾಧಿಕಾರಿ ಘೋಷಣೆ

ಹೊಸದಿಲ್ಲಿ : ಅತ್ಯಂತ ಸಂಶಯಾಸ್ಪದ ರೀತಿಯಲ್ಲಿ ಮಂಗಳವಾರ ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿ ಮನೋಜ್ ಸೊಂಕರ್ ವಿಜಯಿಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅನಿಲ್ ಮಸಿಹ್ ಘೋಷಿಸಿದ್ದಾರೆ. ಈ ಬೆಳವಣಿಗೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿ ಅಭ್ಯರ್ಥಿ ಗೆದ್ದಿರುವುದು ‘‘ಹಾಡುಹಗಲಲ್ಲೇ ನಡೆದ ದರೋಡೆ’’ ಎಂಬುದಾಗಿ ಬಣ್ಣಿಸಿದ್ದಾರೆ.

ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆಮ್ ಆದ್ಮಿ ಪಾರ್ಟಿ (ಆಪ್) ಮತ್ತು ಕಾಂಗ್ರೆಸ್ ನ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿತ್ತು.

35 ಸದಸ್ಯ ಬಲದ ಚಂಡೀಗಢ ಮುನ್ಸಿಪಾಲಿಟಿಯಲ್ಲಿ ಬಿಜೆಪಿ 14 ಕೌನ್ಸಿಲರ್ಗಳನ್ನು ಹೊಂದಿದೆ. ಆಪ್ 13 ಕೌನ್ಸಿಲರ್ ಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಬಳಿ ಏಳು ಕೌನ್ಸಿಲರ್ಗಳು ಇದ್ದಾರೆ. ಶಿರೋಮಣಿ ಅಕಾಲಿ ದಳ ಒಬ್ಬ ಸದಸ್ಯನನ್ನು ಹೊಂದಿದೆ. ಆಪ್ ಮತ್ತು ಕಾಂಗ್ರೆಸ್ ಕೌನ್ಸಿಲರ್ಗಳ ಒಟ್ಟು ಬಲ ಬಿಜೆಪಿಗಿಂತ ತುಂಬಾ ಹೆಚ್ಚಾಗಿದೆ.

ಸೊಂಕರ್ 16 ಮತ್ತು ಆಪ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ 12 ಮತಗಳನ್ನು ಪಡೆದಿದ್ದಾರೆ ಎಂಬುದಾಗಿ ಚುನಾವಣಾಧಿಕಾರಿ ಘೋಷಿಸಿದರು. ಅದೇ ವೇಳೆ, ಚಲಾವಣೆಯಾದ 8 ಮತಗಳು ‘‘ಅಸಿಂಧು’’ ಎಂಬುದಾಗಿಯೂ ಅವರು ಘೋಷಿಸಿದರು. ಇದಕ್ಕೆ ಕಾಂಗ್ರೆಸ್ ಮತ್ತು ಆಪ್ ಕೌನ್ಸಿಲರ್ಗಳು ಭಾರೀ ವಿರೋಧ ವ್ಯಕ್ತಪಡಿಸಿದರು.

ಆಪ್-ಕಾಂಗ್ರೆಸ್ ಮೈತ್ರಿಕೂಟವು ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿತ್ತು. ಆಪ್ ನ ಕುಲದೀಪ್ ಕುಮಾರ್ ಮೇಯರ್ ಅಭ್ಯರ್ಥಿಯಾದರೆ, ಕಾಂಗ್ರೆಸ್ ಸೀನಿಯರ್ ಉಪ ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು.

ಚಂಡೀಗಢ ಮೇಯರ್ ಚುನಾವಣೆಯು ಜನವರಿ 18ರಂದು ನಡೆಯಬೇಕಾಗಿತ್ತು. ಆದರೆ, ಚುನಾವಣಾಧಿಕಾರಿಯ ‘‘ಅಸೌಖ್ಯ’’ದಿಂದಾಗಿ ಅದನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.

ಚುನಾವಣೆಯನ್ನು ಜನವರಿ 30ರಂದು ನಡೆಸಬೇಕು ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶಿಸಿತ್ತು.

ಲೋಕಸಭಾ ಚುನಾವಣೆಯ ಕತೆ ಏನು?:ಕೇಜ್ರಿವಾಲ್

ಚಂಡೀಗಢ ಮುನ್ಸಿಪಾಲಿಟಿಯ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಳಿಸಿರುವ ಜಯವು ‘‘ಹಾಡು ಹಗಲಲ್ಲೇ ನಡೆದ ದಡೋಡೆಯಾಗಿದೆ’’ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘‘ಮೇಯರ್ ಚುನಾವಣೆಯಲ್ಲಿ ಬಿಜೆಪಿಯು ಇಷ್ಟು ಕೆಳ ಮಟ್ಟಕ್ಕೆ ಇಳಿದರೆ, ಲೋಕಸಭಾ ಚುನಾವಣೆಯನ್ನು ಗೆಲ್ಲಲು ಅದು ಯಾವ ಹಂತಕ್ಕೆ ಹೋಗಬಹುದು ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ’’ ಎಂದು ಅವರು ಬಣ್ಣಿಸಿದ್ದಾರೆ.

‘‘ಚಂಡೀಗಢ ಮೇಯರ್ ಚುನಾವಣೆಯಲ್ಲಿ, ಹಾಡು ಹಗಲಲ್ಲೇ ಮಾಡಿರುವ ದರೋಡೆಯು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಈ ವ್ಯಕ್ತಿಗಳು ಮೇಯರ್ ಚುನಾವಣೆಯಲ್ಲೇ ಈ ಮಟ್ಟಕ್ಕೆ ಇಳಿದರೆ, ಲೋಕಸಭಾ ಚುನಾವಣೆಯನ್ನು ಗೆಲ್ಲಲು ಅವರು ಯಾವ ಮಟ್ಟಕ್ಕೆ ಹೋಗಬಹುದು? ಅತ್ಯಂತ ಕಳವಳಕಾರಿ ಬೆಳವಣಿಗೆಗಳು’’ ಎಂಬುದಾಗಿ ಕೇಜ್ರಿವಾಲ್ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದಿದ್ದಾರೆ.

ದೇಶ ದ್ರೋಹದ ಕೃತ್ಯ: ಆಪ್-ಕಾಂಗ್ರೆಸ್

ಚಂಡೀಗಢ ಮೇಯರ್ ಚುನಾವಣೆಯ ಚುನಾವಣಾಧಿಕಾರಿ ಅನಿಲ್ ಮಸಿಹ್, ಮತ ಎಣಿಕೆಯ ವೇಳೆ ಮತಪತ್ರಗಳಲ್ಲಿ ಹಸ್ತಕ್ಷೇಪ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಆರೋಪಿಸಿವೆ.

ಮಸಿಹ್ ಕೆಲವು ಮತ ಪತ್ರಗಳಲ್ಲಿ ಗುರುತುಗಳನ್ನು ಮಾಡುತ್ತಿರುವುದನ್ನು ತೋರಿಸುತ್ತದೆ ಎನ್ನಲಾದ ವೀಡಿಯೊವೊಂದನ್ನು ‘ಇಂಡಿಯಾ’ ಪ್ರತಿಪಕ್ಷ ಒಕ್ಕೂಟದ ಘಟಕ ಪಕ್ಷಗಳು ಬಿಡುಗಡೆ ಮಾಡಿವೆ.

ಚುನಾವಣಾಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಪ್ನ ರಾಜ್ಯಸಭಾ ಸದಸ್ಯ ರಾಘವ ಚಡ್ಡಾ ಆಗ್ರಹಿಸಿದ್ದಾರೆ.

‘‘ಇದು ಕೇವಲ ಅಸಾಂವಿಧಾನಿಕ ಮತ್ತು ಕಾನೂನುಬಾಹಿರ ಕೃತ್ಯವಲ್ಲ, ಇದ ದೇಶದ್ರೋಹದ ಕೃತ್ಯವಾಗಿದೆ. ಇಂದು ಚಂಡೀಗಢ ಮೇಯರ್ ಚುನಾವಣೆಯಲ್ಲಿ ಏನೆಲ್ಲಾ ನಡೆಯಿತೋ ಅವುಗಳನ್ನು ದೇಶದ್ರೋಹ ಎಂದು ಮಾತ್ರ ಕರೆಬಹುದಾಗಿದೆ’’ ಎಂದು ಅವಸರದಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಘವ ಚಡ್ಡಾ ಹೇಳಿದರು.

ಹೈಕೋರ್ಟ್ ಕದ ತಟ್ಟಿದ ಆಪ್

ಆಪ್-ಕಾಂಗ್ರೆಸ್ ಮೈತ್ರಿಕೂಟದ ಕೌನ್ಸಿಲರ್ಗಳ 8 ಮತಗಳನ್ನು ‘ಅಸಿಂಧು’ ಎಂಬುದಾಗಿ ಘೋಷಿಸಿದ ಚುನಾವಣಾಧಿಕಾರಿಯ ನಿರ್ಧಾರವನ್ನು ಆಮ್ ಆದ್ಮಿ ಪಕ್ಷವು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ.

ಆಪ್-ಕಾಂಗ್ರೆಸ್ನ ಜಂಟಿ ಅಭ್ಯರ್ಥಿ ಕುಲದೀಪ್ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂದು ಪಂಜಾಬ್ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ನ್ಯಾಯಲಯಕ್ಕೆ ಮನವಿ ಮಾಡಿದ್ದಾರೆ.

ಯಾವುದೇ ಕಾರಣ ನೀಡದೆ ಎಂಟು ಮತಗಳನ್ನು ಅಸಿಂಧು ಎಂಬುದಾಗಿ ಚುನಾವಣಾಧಿಕಾರಿ ಘೋಷಿಸಿದ್ದಾರೆ ಎಂದು ಹೇಳಿರುವ ಸಿಂಗ್, ಚುನಾವಣೆಯ ದಾಖಲೆಗಳಿಗೆ ಬೀಗಮುದ್ರೆ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರ ಎತ್ತಿಕೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X