ನಾವು ದಿಲ್ಲಿ ಸುಗ್ರೀವಾಜ್ಞೆ ಬೆಂಬಲಿಸುವುದಿಲ್ಲ: ಪ್ರತಿಪಕ್ಷಗಳ ಬೃಹತ್ ಸಭೆಗೂ ಮುನ್ನ ಕಾಂಗ್ರೆಸ್ ಸ್ಪಷ್ಟನೆ
ಹೊಸದಿಲ್ಲಿ: ನಾವು ಕೇಂದ್ರ ಸರಕಾರದ ದಿಲ್ಲಿ ಸುಗ್ರೀವಾಜ್ಞೆ ಬೆಂಬಲಿಸುವುದಿಲ್ಲ ಎಂದು ಬೆಂಗಳೂರಿನಲ್ಲಿ ನಡೆಯುವ ಪ್ರತಿಪಕ್ಷಗಳ ಬೃಹತ್ ಸಭೆಗೂ ಮುನ್ನ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.
ದಿಲ್ಲಿ ಸುಗ್ರೀವಾಜ್ಞೆಗೆ ಸಂಬಂಧಿಸಿ ಕಾಂಗ್ರೆಸ್ ತನ್ನ ನಿಲುವನ್ನು ಬೆಂಬಲಿಸುವವರೆಗೆ ಅಂತಹ ಪ್ರತಿಪಕ್ಷಗಳ ಯಾವುದೇ ಸಭೆಯನ್ನು ಸೇರುವುದಿಲ್ಲ ಎಂದು ಎಎಪಿ ಹೇಳಿದ ಕೆಲವು ದಿನಗಳ ನಂತರ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ದಿಲ್ಲಿಯ ಅಧಿಕಾರಶಾಹಿಯ ಮೇಲೆ ಹಿಡಿತ ಸಾಧಿಸುವ ವಿವಾದಾತ್ಮಕ ಕೇಂದ್ರದ ಆದೇಶದ ವಿರುದ್ಧ ಆಮ್ ಆದ್ಮಿ ಪಕ್ಷದ ಅಭಿಯಾನವನ್ನು ಬೆಂಬಲಿಸಲು ಕಾಂಗ್ರೆಸ್ ರವಿವಾರ ಮುಂದಾಯಿತು, ಇದು ಸೋಮವಾರದಿಂದ ನಡೆಯಲಿರುವ ಪ್ರತಿಪಕ್ಷಗಳ ಸಭೆಯ ನಿರೀಕ್ಷೆಯನ್ನು ಹೆಚ್ಚಿಸಿದೆ.
ಅವರು (ಎಎಪಿ) ನಾಳೆ ನಮ್ಮ ಸಭೆಗೆ ಸೇರಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ (ದಿಲ್ಲಿಯಲ್ಲಿನ ಸೇವೆಗಳ ನಿಯಂತ್ರಣ), ನಮ್ಮ ನಿಲುವು ತುಂಬಾ ಸ್ಪಷ್ಟವಾಗಿದೆ. ನಾವು ಅದನ್ನು ಬೆಂಬಲಿಸಲು ಹೋಗುವುದಿಲ್ಲ ”ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.