Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವು ಸರಕಾರವನ್ನು ನಂಬುವುದಿಲ್ಲ, ನಮ್ಮ...

ನಾವು ಸರಕಾರವನ್ನು ನಂಬುವುದಿಲ್ಲ, ನಮ್ಮ ಸ್ವಂತ ಮನೆಗಳಿಗೆ ಮರಳಲು ಬಯಸಿದ್ದೇವೆ; ಪರಿಹಾರ ಶಿಬಿರಗಳಲ್ಲಿಯ ಸಂತ್ರಸ್ತ ಮಣಿಪುರಿಗಳು

ವಾರ್ತಾಭಾರತಿವಾರ್ತಾಭಾರತಿ27 Aug 2023 6:24 PM IST
share
ನಾವು ಸರಕಾರವನ್ನು ನಂಬುವುದಿಲ್ಲ, ನಮ್ಮ ಸ್ವಂತ ಮನೆಗಳಿಗೆ ಮರಳಲು ಬಯಸಿದ್ದೇವೆ; ಪರಿಹಾರ ಶಿಬಿರಗಳಲ್ಲಿಯ ಸಂತ್ರಸ್ತ ಮಣಿಪುರಿಗಳು

ಗುವಾಹಟಿ: ಕಳೆದ ಮೂರು ತಿಂಗಳುಗಳಿಂದಲೂ ಇಕ್ಕಟ್ಟಾದ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿರುವ,ಅಶಾಂತಿಯಿಂತ ತೊಳಲಾಡುತ್ತಿರುವ ಮಣಿಪುರ ಹಿಂಸಾಚಾರದ ಸಂತ್ರಸ್ತರು ತಾವು ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುವಂತೆ ಬಿಕ್ಕಟ್ಟನ್ನು ಬಗೆಹರಿಸಲು ಸರಕಾರವನ್ನು ಆಗ್ರಹಿಸುತ್ತಿದ್ದಾರೆ.

ಕೆಲವು ಸಂತ್ರಸ್ತರು ಸರಕಾರವು ನೀಡಿರುವ ತಾತ್ಕಾಲಿಕ ವಸತಿಗೃಹಗಳಿಗೆ ಸ್ಥಳಾಂತರಗೊಳ್ಳುವುದನ್ನು ಬಯಸುತ್ತಿಲ್ಲ,ಅಲ್ಲಿಗೆ ಹೋದರೆ ತಾವೆಂದೂ ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುವುದಿಲ್ಲ ಎಂಬ ಕಳವಳವನ್ನು ಅವರು ವ್ಯಕ್ತಪಡಿಸಿದ್ದಾರೆ.

‘ನಮ್ಮ ಮನೆಗಳನ್ನು ಪುನರ್ನಿರ್ಮಿಸುವುದಾಗಿ ರಾಜ್ಯ ಸರಕಾರದ ಭರವಸೆಯಲ್ಲಿ ನಮಗೆ ಎಳ್ಳಷ್ಟೂ ವಿಶ್ವಾಸವಿಲ್ಲ. ಕಳೆದ ಮೂರು ತಿಂಗಳಿಗೂ ಹೆಚ್ಚು ಸಮಯದಿಂದ ನಾವು ಪರಿಹಾರ ಶಿಬಿರಗಳಲ್ಲಿ ವಾಸವಾಗಿದ್ದೇವೆ. ನಾವು ಇನ್ನೂ ಎಷ್ಟು ಸಮಯ ಇಲ್ಲಿರುತ್ತೇವೆ? ನಮಗೆ ನಮ್ಮ ಮನೆ ವಾಪಸ್ ಬೇಕು. ನಮ್ಮ ಜನರನ್ನು ಕೊಲ್ಲಲಾಗಿದೆ, ಈಗ ನಮಗೆ ನ್ಯಾಯದ ಅಗತ್ಯವಿದೆ’ ಎಂದು ಇಂಫಾಲ ಪೂರ್ವ ಜಿಲ್ಲೆಯ ಅಕಮ್ಪಾಟ್ನ ಐಡಿಯಲ್ ಗರ್ಲ್ಸ್ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಪರಿಹಾರ ಶಿಬಿರದಲ್ಲಿ ವಾಸವಾಗಿರುವ ಟೆಂಗ್ನೌಪಾಲ್ ಮತ್ತು ಚುರಾಚಂದ್ರಪುರ ಜಿಲ್ಲೆಗಳ ಕೆಲವು ಸಂತ್ರಸ್ತರು ಅಳಲು ತೋಡಿಕೊಂಡರು.

ಹೆಚ್ಚಿನ ಸಂತ್ರಸ್ತರು ತಮ ಕುಟುಂಬಸಹಿತ ಈ ಶಿಬಿರಗಳಲ್ಲಿ ವಾಸವಾಗಿದ್ದಾರೆ. ದಂಗೆಕೋರರು ಅವರ ಮನೆಗಳನ್ನು ಸುಟ್ಟು ಹಾಕಿದ್ದಾರೆ. ಜೀವವನ್ನುಳಿಸಿಕೊಳ್ಳಲು ಅವರೆಲ್ಲ ಉಟ್ಟ ಬಟ್ಟೆಯಲ್ಲಿ ಮನೆಗಳಿಂದ ಪರಾರಿಯಾಗಿದ್ದರು.

‘ನಾವು ನಮ್ಮ ಸ್ವಂತ ಮನೆಗಳಿಗೆ ಮರಳಲು ಬಯಸಿದ್ದೇವೆ. ಸರಕಾರದ ಭರವಸೆಗಳಿಂದ ನಾವು ಬೇಸತ್ತು ಹೋಗಿದ್ದೇವೆ, ಅದು ನಮಗೆ ನೆರವಾಗುತ್ತದೆ ಎನ್ನುವ ನಿರೀಕ್ಷೆಯಿಲ್ಲ’ ಎಂದು ಚುರಾಚಂದ್ರಪುರದ ಸಂತ್ರಸ್ತೆ ನಗಂಥೋಬಿ ಹೇಳಿದರು.

‘ನಾವು ಮೊರೆಹ್ನಲ್ಲಿಯ ನಮ್ಮ ಮನೆಗಳಿಗೆ ಮರಳಲು ಬಯಸಿದ್ದೇವೆ. ಮೊರೆಹ್ ಪಟ್ಟಣವು ಆದಾಯದಲ್ಲಿ ರಾಜ್ಯದಲ್ಲಿ ಇಂಫಾಲದ ನಂತರದ ಸ್ಥಾನದಲ್ಲಿತ್ತು. ಈ ಹಿಂಸಾಚಾರವು ಮುಂದುವರಿದರೆ ಭಾರತವು ಅದಕ್ಕಾಗಿ ಭಾರೀ ಬೆಲೆಯನ್ನು ತೆರಬೇಕಾಗುತ್ತದೆ. ಮಣಿಪುರದಲ್ಲಿಯ ಇಂದಿನ ಸ್ಥಿತಿಗೆ ಬಿಜೆಪಿ ಜವಾಬ್ದಾರನಾಗಿದೆ. ಮೋರೆಹ್ನಲ್ಲಿ ಕಳೆದ 10 ವರ್ಷಗಳಿಂದ ಪಟ್ಟಣ ಸಮಿತಿಯ ಚುನಾವಣೆ ನಡೆದಿಲ್ಲ. ಎಲ್ಲ ಮಾರವಾಡಿಗಳು ಮತ್ತು ಪಂಜಾಬಿಗಳು ಪಟ್ಟಣದಿಂದ ಪರಾರಿಯಾಗಿದ್ದಾರೆ. ಈ ಹಿಂಸಾಚಾರ ಆರಂಭವಾದ ಬಳಿಕ ತಮಿಳು ಜನರೂ ಊರನ್ನು ತೊರೆದಿದ್ದಾರೆ ’ ಎಂದು ಮೋರೆಹ್ ನಿವಾಸಿ ಇಂಗೋಬಿ ಸಿಂಗ್ (75) ಹೇಳಿದರು.

ಮಣಿಪುರದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣಗಳಲ್ಲೊಂದಾಗಿರುವ ಟೆಂಗ್ನೌಪಾಲ್ ಜಿಲ್ಲೆಯ ಮೋರೆಹ್ ಕುಕಿಗಳ ಪ್ರಾಬಲ್ಯ ಹೊಂದಿದ್ದು, ತಮಿಳರು ಮತ್ತು ಪಂಜಾಬಿಗಳಂತಹ ಇತರ ಸಮುದಾಯದವರೂ ಗಣನೀಯ ಸಂಖ್ಯೆಯಲ್ಲಿದ್ದಾರೆ.

ಬಹುಧರ್ಮೀಯ ಪಟ್ಟಣವಾಗಿರುವ ಮೋರೆಹ್ನಲ್ಲಿ ಕ್ರೈಸ್ತರು ಬಹುಸಂಖ್ಯಾತರಾಗಿದ್ದು, ನಂತರದ ಸ್ಥಾನಗಳಲ್ಲಿ ಹಿಂದುಗಳು, ಮುಸ್ಲಿಮರು, ಬೌದ್ಧರು, ಸಿಕ್ಖರು ಮತ್ತು ಜೈನರು ಇದ್ದಾರೆ.

ರಾಜ್ಯದಲ್ಲಿ ಮೇ 3ರಿಂದ ಆರಂಭಗೊಂಡ ಜನಾಂಗೀಯ ಹಿಂಸಾಚಾರದಲ್ಲಿ 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X