Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018ರ ಬಳಿಕ ಕನಿಷ್ಠ ಮಟ್ಟ ತಲುಪಿದ ಗೋಧಿ...

2018ರ ಬಳಿಕ ಕನಿಷ್ಠ ಮಟ್ಟ ತಲುಪಿದ ಗೋಧಿ ದಾಸ್ತಾನು

ವಾರ್ತಾಭಾರತಿವಾರ್ತಾಭಾರತಿ13 March 2024 7:45 AM IST
share
2018ರ ಬಳಿಕ ಕನಿಷ್ಠ ಮಟ್ಟ ತಲುಪಿದ ಗೋಧಿ ದಾಸ್ತಾನು

ಹೊಸದಿಲ್ಲಿ: ಭಾರತದ ಆಹಾರ ನಿಗಮದಲ್ಲಿ ಗೋಧಿ ದಾಸ್ತಾನು 2018ರ ಬಳಿಕ ಇದೇ ಮೊದಲ ಬಾರಿಗೆ 100 ಲಕ್ಷ ಟನ್ ಗಿಂತ ಕಡಿಮೆಯಾಗಿದ್ದು, ಈ ತಿಂಗಳು ಗೋಧಿ ದಾಸ್ತಾನು ಪ್ರಮಾಣ 97 ಲಕ್ಷ ಟನ್ ಗೆ ಇಳಿದಿದೆ. ಕಳೆದ ಎರಡು ವರ್ಷಗಳಲ್ಲಿ ಕಡಿಮೆ ಖರೀದಿ ಹಾಗೂ ಬೆಲೆ ಏರಿಕೆ ತಡೆಯುವ ನಿಟ್ಟಿನಲ್ಲಿ ದಾಖಲೆ ಪ್ರಮಾಣದಲ್ಲಿ ಮುಕ್ತ ಮಾರುಕಟ್ಟೆಗೆ ಆಹಾರಧಾನ್ಯ ಬಿಡುಗಡೆ ಮಾಡಿರುವುದು ಇದಕ್ಕೆ ಕಾರಣ. ಆದರೆ ಅಕ್ಕಿ ದಾಸ್ತಾನಿನಲ್ಲಿ ಬಫರ್ ನಿಯಮಕ್ಕಿಂತ ನಾಲ್ಕು ಪಟ್ಟು ಅಧಿಕ ದಾಸ್ತಾನು ಹೊಂದಿದೆ.

ಗೋಧಿ ದಾಸ್ತಾನು ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿದಿದ್ದರೂ, ಇದು ಶಾಸನಾತ್ಮಕವಾಗಿ ಇರಬೇಕಾದ ಕನಿಷ್ಠ ದಾಸ್ತಾನು ಪ್ರಮಾಣಕ್ಕಿಂತ ಅಧಿಕ. ಶಾಸನಾತ್ಮಕವಾಗಿ ಏಪ್ರಿಲ್ ವೇಳೆಗೆ ಆಹಾರ ನಿಗಮ 74.6 ಲಕ್ಷ ಟನ್ ಆಹಾರ ಧಾನ್ಯದ ದಾಸ್ತಾನು ಹೊಂದಿರಬೇಕು.

"ನಾವು ಹೊಂದಿರುವ ದಾಸ್ತಾನು ರಾಷ್ಟ್ರೀಯ ಆಹಾರ ಭದ್ರತೆ ಅಗತ್ಯತೆಗಳನ್ನು ಈಡೇರಿಸಲು ಸಾಕು ಹಾಗೂ ಇದು ಕನಿಷ್ಠ ದಾಸ್ತಾನು ನಿಯಮಕ್ಕಿಂತ ಅಧಿಕವಾಗಿದೆ. ಮಾರ್ಚ್ 1ರಿಂದ ಖರೀದಿ ಸೀಸನ್ ಕೂಡಾ ಆರಂಭಾಗಿದ್ದು, ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಖರೀದಿಯಾಗಲಿದೆ" ಎಂದು ನಿಗಮದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಸಕ್ತ ಹಂಗಾಮಿನಲ್ಲಿ 320 ಲಕ್ಷ ಟನ್ ಗೋಧಿ ಖರೀದಿಸುವ ಅಂದಾಜು ಇದ್ದು, ಇದು ಸರ್ಕಾರವನ್ನು ಆರಾಮದಾಯಕ ಸ್ಥಿತಿಗೆ ಒಯ್ಯಲಿದೆ ಎಂದು ಮೂಲಗಳು ಹೇಳಿವೆ.

ಕಳೆದ ಜೂನ್ ತಿಂಗಳಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಗೋಧಿ ಬೆಲೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಸರ್ಕಾರ ಮುಕ್ತ ಮಾರುಕಟ್ಟೆಗೆ ಗೋಧಿ ಮಾರಾಟ ಆರಂಭಿಸಿತ್ತು. ಫೆಬ್ರವರಿ ಕೊನೆಯ ವೇಳೆಗೆ ಭಾರತೀಯ ಆಹಾರ ನಿಗಮ ಮಾರುಕಟ್ಟೆ ಹಸ್ತಕ್ಷೇಪದ ಕ್ರಮವಾಗಿ 90 ಲಕ್ಷ ಟನ್ ಗೋಧಿಯನ್ನು ಬಿಡುಗಡೆ ಮಾಡಿತ್ತು. ಸಾರ್ವಜನಿಕ ಖರೀದಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಇದೀಗ ಮುಕ್ತ ಮಾರುಕಟ್ಟೆ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಅಕ್ಕಿ ಮಿಲ್ ಗಳಿಂದ ಬರಬೇಕಾದ 30 ಲಕ್ಷ ಟನ್ ಹೊರತುಪಡಿಸಿ ಆಹಾರ ನಿಗಮದ ಬಳಿ ಸದ್ಯಕ್ಕೆ 270 ಲಕ್ಷ ಟನ್ ಅಕ್ಕಿ ದಾಸ್ತಾನು ಇದೆ. ಬಫರ್ ಸ್ಟಾಕ್ ನಿಯಮಾವಳಿ ಅನ್ವಯ ಏಪ್ರಿಲ್ 1ರ ವೇಳೆಗೆ 136 ಲಕ್ಷ ಟನ್ ಅಕ್ಕಿ ದಾಸ್ತಾನು ಇರಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X