Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಕ್ಕೆ ಪ್ರಯಾಣಿಸಲು ಯಾರಿಗೆಲ್ಲ...

ವಿದೇಶಕ್ಕೆ ಪ್ರಯಾಣಿಸಲು ಯಾರಿಗೆಲ್ಲ ತೆರಿಗೆ ಪಾವತಿ ಪ್ರಮಾಣಪತ್ರ ಅಗತ್ಯ?: ಇಲ್ಲಿದೆ ಸರಕಾರದ ಇತ್ತೀಚಿನ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ24 Aug 2024 3:33 PM IST
share
ವಿದೇಶಕ್ಕೆ ಪ್ರಯಾಣಿಸಲು ಯಾರಿಗೆಲ್ಲ ತೆರಿಗೆ ಪಾವತಿ ಪ್ರಮಾಣಪತ್ರ ಅಗತ್ಯ?: ಇಲ್ಲಿದೆ ಸರಕಾರದ ಇತ್ತೀಚಿನ ಸ್ಪಷ್ಟೀಕರಣ

ಹೊಸದಿಲ್ಲಿ: ಆದಾಯ ತೆರಿಗೆ ಪ್ರಮಾಣಪತ್ರ ಕುರಿತು ಸುಳ್ಳು ಮಾಹಿತಿಗಳಿಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿತ್ತ ಸಚಿವಾಲಯವು ವಿದೇಶಕ್ಕೆ ಪ್ರಯಾಣಿಸುವ ಎಲ್ಲ ಭಾರತೀಯರೂ ಆದಾಯ ತೆರಿಗೆ ಪಾವತಿ ಪ್ರಮಾಣಪತ್ರ(ಐಟಿಸಿಸಿ)ವನ್ನು ಪಡೆದುಕೊಳ್ಳುವ ಅಗತ್ಯವಿಲ್ಲ ಮತ್ತು ಗಂಭೀರ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿರುವವರು ಹಾಗೂ 10 ಲಕ್ಷ ರೂ.ಗೂ ಹೆಚ್ಚು ನೇರ ತೆರಿಗೆ ಬಾಕಿಯನ್ನು ಉಳಿಸಿಕೊಂಡಿರುವವರು ಈ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿದೆ.

ಇತ್ತೀಚಿನ ಕೆಲವು ವರದಿಗಳು ಐಟಿಸಿಸಿ ಕಡ್ಡಾಯ ಎಂದು ಹೇಳಿದ್ದರೂ, ಎಲ್ಲ ಭಾರತೀಯ ಪ್ರಜೆಗಳು ವಿದೇಶಗಳಿಗೆ ಪ್ರಯಾಣಿಸುವ ಮುನ್ನ ಇಂತಹ ಪ್ರಮಾಣಪತ್ರವನ್ನು ಪಡೆಯಬೇಕಾದ ಅಗತ್ಯವಿಲ್ಲ ಎಂದು ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ (ಪಿಐಬಿ)ತನ್ನ ಇತ್ತೀಚಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದಿಂದ ವಲಸೆ ಹೋಗಲು ಬಯಸುವವರಿಗಾಗಿ 2024ನೇ ಸಾಲಿನ ಮುಂಗಡಪತ್ರದಲ್ಲಿ ಮಹತ್ವದ ತಿದ್ದುಪಡಿಯೊಂದನ್ನು ಪರಿಚಯಿಸಿದ್ದರು. ಅದರಂತೆ ಭಾರತದಲ್ಲಿ ವಾಸವಾಗಿರುವ ವ್ಯಕ್ತಿಗಳು ದೇಶದಿಂದ ನಿರ್ಗಮಿಸುವ ಮುನ್ನ ಎಲ್ಲ ತೆರಿಗೆ ಬಾಕಿಗಳನ್ನು ಪಾವತಿಸಬೇಕು ಮತ್ತು ಐಟಿಸಿಸಿಯನ್ನು ಪಡೆದುಕೊಳ್ಳಬೇಕು.

ಆದರೆ ಈ ಪರಿಷ್ಕರಣೆಯು ಎಲ್ಲ ವ್ಯಕ್ತಿಗಳು ಐಟಿಸಿಸಿಯನ್ನು ಪಡೆದುಕೊಳ್ಳುವುದನ್ನು ಅಗತ್ಯವಾಗಿಸುವುದಿಲ್ಲ ಎಂದು ವಿತ್ತ ಸಚಿವಾಲಯವು ಸ್ಪಷ್ಟಪಡಿಸಿದೆ.

ಆದಾಯ ತೆರಿಗೆ ಕಾಯ್ದೆಯ ಕಲಂ 230ಕ್ಕೆ ಅನುಗುಣವಾಗಿ ಪ್ರತಿಯೊಬ್ಬ ವ್ಯಕ್ತಿಯೂ ಐಟಿಸಿಸಿಯನ್ನು ಪಡೆಯಬೇಕಿಲ್ಲ. ಇಂತಹ ಪ್ರಮಾಣಪತ್ರವನ್ನು ಪಡೆಯುವ ಅಗತ್ಯವಿರುವ ಸಂದರ್ಭಗಳಿದ್ದರೆ ಮಾತ್ರ ಸಂಬಂಧಿಸಿದ ವ್ಯಕ್ತಿಗಳು ಹಾಗೆ ಮಾಡಬೇಕಾಗುತ್ತದೆ. ಇದು 2003ರಿಂದಲೂ ಕಾಯ್ದೆಯಲ್ಲಿ ಸ್ಪಷ್ಟವಾಗಿದ್ದು ಹಣಕಾಸು ಕಾಯ್ದೆ(ನಂ.2).2024ರಡಿ ತಿದ್ದುಪಡಿಗಳ ಹೊರತಾಗಿಯೂ ಇದರಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಪಿಐಬಿ ಪ್ರಕಟನೆಯಲ್ಲಿ ತಿಳಿಸಿದೆ.

ಯಾವುದೇ ವ್ಯಕ್ತಿ ಗಂಭೀರ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿದ್ದರೆ ಮತ್ತು ಆದಾಯ ತೆರಿಗೆ ಕಾಯ್ದೆ ಅಥವಾ ಸಂಪತ್ತು ತೆರಿಗೆ ಕಾಯ್ದೆಯಡಿ ಪ್ರಕರಣದ ತನಿಖೆಯಲ್ಲಿ ಆತನ/ಆಕೆಯ ಉಪಸ್ಥಿತಿ ಅಗತ್ಯವಾಗಿದ್ದರೆ ಮತ್ತು ತೆರಿಗೆ ಬೇಡಿಕೆಯನ್ನು ಎತ್ತುವ ಸಾಧ್ಯತೆಯಿದ್ದರೆ ಅಂತಹ ವ್ಯಕ್ತಿ ಹಾಗೂ 10 ಲ.ರೂ.ಗಳಿಗೂ ಅಧಿಕ ನೇರ ತೆರಿಗೆ ಬಾಕಿಯಿದ್ದರೆ ಮತ್ತು ಯಾವುದೇ ಪ್ರಾಧಿಕಾರವು ಬಾಕಿ ತೆರಿಗೆ ವಸೂಲಿಗೆ ತಡೆಯಾಜ್ಞೆ ನೀಡಿರದಿದ್ದರೆ ಅಂತಹ ವ್ಯಕ್ತಿ ವಿದೇಶಕ್ಕೆ ತೆರಳುವ ಮುನ್ನ ಐಟಿಸಿಸಿಯನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಐಟಿಸಿಸಿ ಅಗತ್ಯಕ್ಕೆ ನಿರ್ದಿಷ್ಟ ಕಾರಣಗಳನ್ನು ದಾಖಲಿಸಿದ ಹಾಗೂ ಆದಾಯ ತೆರಿಗೆ ಪ್ರಧಾನ ಮುಖ್ಯ ಆಯುಕ್ತರು ಅಥವಾ ಆದಾಯ ತೆರಿಗೆ ಮುಖ್ಯ ಆಯುಕ್ತರಿಂದ ಅನುಮೋದನೆಯನ್ನು ಪಡೆದುಕೊಂಡ ಬಳಿಕವೇ ಪ್ರಮಾಣಪತ್ರವನ್ನು ಪಡೆಯಲು ವ್ಯಕ್ತಿಗೆ ಸೂಚಿಸಬಹುದು ಎಂದು ತಿಳಿಸಿರುವ ಪ್ರಕಟನೆಯು,ಭಾರತೀಯ ಪ್ರಜೆಗಳು ಕಾಯ್ದೆಯ ಕಲಂ 230(1ಎ) ಅಡಿ ಅತ್ಯಂತ ಅಪರೂಪದ ಸಂದರ್ಭಗಳಲ್ಲಿ ಮಾತ್ರ ಐಟಿಸಿಸಿಯನ್ನು ಬಳಸಬೇಕು ಎಂದು ಒತ್ತಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X