Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಪ್ರಧಾನಿ ಯಾಕೆ ಮೌನವಾಗಿದ್ದಾರೆ?”:...

“ಪ್ರಧಾನಿ ಯಾಕೆ ಮೌನವಾಗಿದ್ದಾರೆ?”: ಅದಾನಿ ವಿಷಯದಲ್ಲಿ ಸಮಗ್ರ ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ31 Aug 2023 9:48 PM IST
share
“ಪ್ರಧಾನಿ ಯಾಕೆ ಮೌನವಾಗಿದ್ದಾರೆ?”: ಅದಾನಿ ವಿಷಯದಲ್ಲಿ ಸಮಗ್ರ ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ಮುಂಬೈ: ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಗೆ ಅವಕಾಶ ನೀಡಬೇಕು ಮತ್ತು ಅದಾನಿ ವಿಷಯದಲ್ಲಿ ಸಮಗ್ರ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುರುವಾರ ಇಲ್ಲಿ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಮುಖ ಜಾಗತಿಕ ಹಣಕಾಸು ವೃತ್ತಪತ್ರಿಕೆಗಳು ಅದಾನಿ ಶೇರುಗಳ ಕುರಿತು ಬಹು ಮುಖ್ಯವಾದ ಪ್ರಶ್ನೆಗಳನ್ನೆತ್ತಿವೆ. ಈ ಪತ್ರಿಕೆಗಳು ಭಾರತದಲ್ಲಿ ಹೂಡಿಕೆ ಮತ್ತು ವಿಶ್ವದಲ್ಲಿ ಭಾರತದ ಕುರಿತು ದೃಷ್ಟಿಕೋನದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿವೆ ಎಂದು ಹೇಳಿದರು. ಜಿ20 ಶೃಂಗಸಭೆಯು ವಿಶ್ವದಲ್ಲಿ ಭಾರತದ ಸ್ಥಾನದ ಕುರಿತಾಗಿದೆ ಮತ್ತು ಭಾರತದ ಆರ್ಥಿಕ ವಾತಾವರಣದಲ್ಲಿ ಸಮಾನ ಸ್ಪರ್ಧೆಗೆ ಅವಕಾಶ ಮತ್ತು ಪಾರದರ್ಶಕತೆ ಇರುವುದು ಅತ್ಯಂತ ಮುಖ್ಯವಾಗಿದೆ ಎಂದರು.

ಈ ಹಣ ಯಾರದು ಎನ್ನುವುದು ಮೊದಲ ಪ್ರಶ್ನೆಯಾಗಿದೆ. ಅದು ಅದಾನಿಯದೇ ಅಥವಾ ಬೇರೆಯವರದೇ? ಗೌತಮ್ ಅದಾನಿಯವರ ಸೋದರ ವಿನೋದ್ ಅದಾನಿ ಇದರ ಹಿಂದಿರುವ ಮಾಸ್ಟರ್ ಮೈಂಡ್ ಆಗಿದ್ದಾರೆ. ಹಣದ ಈ ಸುತ್ತು ಪಯಣದಲ್ಲಿ ಚಾಂಗ್ ಚುಂಗ್-ಲಿಂಗ್ ಮತ್ತು ನಾಸೀರ್ ಅಲಿ ಶಾಬಾನ್ ಎಂಬ ಇತರ ಇಬ್ಬರು ವ್ಯಕ್ತಿಗಳು ಭಾಗಿಯಾಗಿದ್ದಾರೆ. ಹೀಗಾಗಿ ಹೆಚ್ಚುಕಡಿಮೆ ಭಾರತದ ಎಲ್ಲ ಮೂಲಸೌಕರ್ಯಗಳನ್ನು ನಿಯಂತ್ರಿಸುತ್ತಿರುವ ಕಂಪನಿಯೊಂದರ ಮೌಲ್ಯಮಾಪನದೊಂದಿಗೆ ಆಟವಾಡಲು ಇಬ್ಬರು ವಿದೇಶಿ ವ್ಯಕ್ತಿಗಳಿಗೆ ಏಕೆ ಅವಕಾಶ ನೀಡಲಾಗಿದೆ ಎಂಬ ಎರಡನೇ ಪ್ರಶ್ನೆ ಉದ್ಭವಿಸುತ್ತದೆ ಎಂದು ರಾಹುಲ್ ಹೇಳಿದರು.

ಭಾರತದ ಪ್ರತಿಷ್ಠೆ ಅಪಾಯದಲ್ಲಿದೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಹೇಳಿದ ರಾಹುಲ್, ಈ ವಿಷಯದಲ್ಲಿ ಪ್ರಧಾನಿಯವರೇಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.

ಅದಾನಿ ವಿರುದ್ಧ ಸೆಬಿ ತನಿಖೆ ನಡೆಸಿತ್ತು, ಆದರೆ ಅವರಿಗೆ ಕ್ಲೀನ್ ಚಿಟ್ ನೀಡಲಾಗಿತ್ತು ಎಂದು ಆರೋಪಿಸಿದ ಅವರು, ಇಲ್ಲಿ ಏನೋ ತಪ್ಪು ನಡೆದಿದೆ ಎನ್ನುವುದು ಅತ್ಯಂತ ಸ್ಪಷ್ಟವಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X