Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ‘ಎಚ್ಎಸ್ಆರ್ಪಿ’ ಅಳವಡಿಕೆ: ಗ್ರಾಮೀಣ ಭಾಗದ...

‘ಎಚ್ಎಸ್ಆರ್ಪಿ’ ಅಳವಡಿಕೆ: ಗ್ರಾಮೀಣ ಭಾಗದ ವಾಹನಿಗರಿಗೆ ಮಾಹಿತಿ ಕೊರತೆ

ಅರ್ಜಿ ಸಲ್ಲಿಸಿ ನಂಬರ್ ಪ್ಲೇಟ್ ಅಳವಡಿಸಲು ಕಾಯುವ ಪರಿಸ್ಥಿತಿ

ವಾರ್ತಾಭಾರತಿವಾರ್ತಾಭಾರತಿ9 Nov 2023 9:48 AM IST
share
‘ಎಚ್ಎಸ್ಆರ್ಪಿ’ ಅಳವಡಿಕೆ: ಗ್ರಾಮೀಣ ಭಾಗದ ವಾಹನಿಗರಿಗೆ ಮಾಹಿತಿ ಕೊರತೆ

ಮಂಗಳೂರು: ಕೇಂದ್ರ ಸರಕಾರದ ಆದೇಶದಂತೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಸುವ ಪ್ರಕ್ರಿಯೆಗೆ ದ.ಕ. ಜಿಲ್ಲೆಯ ನಗರ ಪ್ರದೇಶದಲ್ಲಿ ಉತ್ತಮ ಸ್ಪಂದನ ವ್ಯಕ್ತವಾಗುತ್ತಿದೆ. ಆದರೆ ಗ್ರಾಮೀಣ ಭಾಗದದಲ್ಲಿ ಅಷ್ಟೊಂದು ಸ್ಪಂದನ ಸಿಕ್ಕಿಲ್ಲ ಎನ್ನಲಾಗಿದೆ. ವಾಹನಿಗರಿಗೆ ಸಕಾಲದಲ್ಲಿ ಸಿಗದ ಮಾಹಿತಿಯ ಕೊರತೆಯೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

೨೦೧೯ರ ಎಪ್ರಿಲ್ ೧ರ ಮೊದಲು ನೋಂದಣಿಯಾದ ಎಲ್ಲಾ ವಾಹನಗಳು ೨೦೨೩ರ ನ.೧೭ರೊಳಗೆ ಎಚ್ಎಸ್ಆರ್ಪಿ ಅಳವಡಿ ಸಬೇಕು ಎಂದು ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಅದರಂತೆ ಬಹುತೇಕ ವಾಹನಗಳ ಮಾಲಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುತ್ತಿದ್ದಾರೆ. ನಗರ ಪ್ರದೇಶದ ವಾಹನಿಗರು ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಮುಂದಿದ್ದು, ಅರ್ಜಿ ಸಲ್ಲಿಸಿ ಕನಿಷ್ಠ 10 ದಿನಗಳ ಕಾಲ ಕಾಯುವ ಅನಿವಾರ್ಯತೆ ಎದುರಾಗಿವೆ.

ದ.ಕ. ಜಿಲ್ಲೆಯಲ್ಲಿ 2019ರ ಎಪ್ರಿಲ್ 1ರ ಮೊದಲು ಆನ್ಲೈನ್ ವ್ಯವಸ್ಥೆಯಡಿ ನೋಂದಣಿಯಾದ 8,22,941 ವಾಹನಗಳಿವೆ ಎಂದು ಮೂಲಗಳು ತಿಳಿಸಿವೆ. ಆನ್ಲೈನ್ ವ್ಯವಸ್ಥೆಗೆ ಒಳಪಡದ ಮತ್ತು ಆರ್ಸಿ ದಾಖಲೆ ಪುಸ್ತಕ ರೂಪದಲ್ಲಿರುವ ಸಾವಿರಾರು ವಾಹನಗಳು ಜಿಲ್ಲೆಯಲ್ಲಿದೆ. ಅಧಿಕೃತ ದಾಖಲೆ ಹೊಂದಿರುವ ಈ ವಾಹನ ಮಾಲಕರು ಕಡ್ಡಾಯವಾಗಿ ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕಿದೆ.

ಆನ್ಲೈನ್ ವ್ಯವಸ್ಥೆಗೆ ಒಳಪಡದ ಮತ್ತು ಆರ್ಸಿ ದಾಖಲೆಗಳು ಪುಸ್ತಕ ರೂಪದಲ್ಲಿರುವ ವಾಹನ ಮಾಲಕರು ಆಯಾ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕಿದೆ. ಇದರಿಂದ ವಾಹನಗಳ ದಾಖಲೆಗಳೂ ಸುರಕ್ಷಿತವಾಗಿರುತ್ತದೆ. ಈ ನಂಬರ್ ಪ್ಲೇಟ್ಗಳ ನಕಲಿ ಮಾಡಲು ಸಾಧ್ಯವಿಲ್ಲವಾಗಿದೆ ಎಂದು ಆರ್ಟಿಒ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ವಾಹನ ಕಳವು ಇತ್ಯಾದಿ ಅಪರಾಧ ಕೃತ್ಯಗಳಿಗೆ ಕಳವುಗೈದ ವಾಹನಗಳ ಬಳಕೆ ದೇಶಾದ್ಯಂತ ಹೆಚ್ಚುತ್ತಿದೆ. ಈ ಅಕ್ರಮ, ಅಪರಾಧಗಳಿಗೆ ಕಡಿವಾಣ ಹಾಕಲು ಹಳೆಯ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಸುವ ಸಲುವಾಗಿ ಕೇಂದ್ರ ಸರಕಾರ ಹೊಸ ನಿಯಮಾವಳಿ ರೂಪಿಸಿದೆ.

ಹೊಸ ನಂಬರ್ ಪ್ಲೇಟ್ನಲ್ಲಿ ವಾಹನದ ಸಂಪೂರ್ಣ ಮಾಹಿತಿ ಇರುತ್ತದೆ. ಪ್ರತಿಯೊಂದು ಮಾಹಿತಿಯೂ ಕೇಂದ್ರೀಯ ಡೆಟಾ ಬೇಸ್ನಲ್ಲಿ ಸಂಗ್ರಹವಾಗುತ್ತದೆ. ವಾಹನ ಕಳ್ಳತನವಾದರೆ ಈ ಮಾಹಿತಿಯನ್ನ ಬಳಸಿ ಆದಷ್ಟು ಬೇಗ ಪತ್ತೆ ಹಚ್ಚಬಹುದಾಗಿದೆ. ಅಲ್ಲದೆ ಈ ನಂಬರ್ ಪ್ಲೇಟ್ ಅನ್ನು ನಕಲಿ ಮಾಡಲು ಸಾಧ್ಯವಿಲ್ಲವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

http://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ Book HSRP ಕ್ಲಿಕ್ ಮಾಡಿ ಸಂಬಂಧಿಸಿದ ವಾಹನದ ವಿವರವನ್ನು ತುಂಬಬೇಕು. ಬಳಿಕ ತಮಗೆ ಬೇಕಾದ ಡೀಲರ್ಗಳ ಸ್ಥಳ ಆಯ್ಕೆ ಮಾಡಬೇಕು. ಮತ್ತು ಶುಲ್ಕವನ್ನು ಆನ್ಲೈನ್ನಲ್ಲೇ ಪಾವತಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ವೇಳೆ ವಾಹನ ಮಾಲಕರ ಮೊಬೈಲ್ಗೆ ಒಟಿಪಿ ಕಳುಹಿಸಲಾಗುತ್ತದೆ. ಅಲ್ಲದೆ ನಂಬರ್ ಪ್ಲೇಟ್ ಅಳವಡಿಸಲು ತಮಗೆ ಬೇಕಾದ ದಿನಾಂಕ ಮತ್ತು ಸಮಯ ಆಯ್ಕೆ ಮಾಡಬಹುದು. ಅರ್ಜಿದಾರರು ಯಾವುದೇ ವಾಹನ ತಯಾರಕ ಅಥವಾ ನಂಬರ್ ಪ್ಲೇಟ್ ಅಳವಡಿ ಸುವ ಡೀಲರ್ಗಳನ್ನು ಆಯ್ಕೆ ಮಾಡಬಹುದಾಗಿದೆ.

ನಮಗೆ ಎಚ್ಎಸ್ಆರ್ಪಿ ಬಗ್ಗೆ ಸೂಕ್ತ ಮಾಹಿತಿ ಸಿಕ್ಕಿರಲಿಲ್ಲ. ಇತ್ತೀಚೆಗೆ ಪರಿಚಯದ ವ್ಯಕ್ತಿಯೊಬ್ಬರು ಹೇಳಿದ ಬಳಿಕ ವಿಷಯ ತಿಳಿಯಿತು. ಅಲ್ಲದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ನಮಗೆ ತಿಳಿದಿಲ್ಲ. ಇತರರ ಸಹಾಯ ಪಡೆದು ಅರ್ಜಿ ಸಲ್ಲಿಸಬೇಕಿದೆ. ಹೀಗೆ ಅರ್ಜಿ ಸಲ್ಲಿಸಿದರೂ ಸದ್ಯಕ್ಕೆ ಅದರ ಅಳವಡಿಕೆಗೆ ದಿನಾಂಕ ಸಿಗುತ್ತಿಲ್ಲ. ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿದರೆ ಉತ್ತಮ.

ನಾರಾಯಣ,

ದ್ವಿಚಕ್ರ ವಾಹನ ಸವಾರ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X