Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕೊರಿಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ:...

ಕೊರಿಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ: 2ನೇ ಸುತ್ತಿನಲ್ಲಿ ಪ್ರಣಯ್ಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ20 July 2023 11:45 PM IST
share
ಕೊರಿಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ: 2ನೇ ಸುತ್ತಿನಲ್ಲಿ ಪ್ರಣಯ್ಗೆ ಸೋಲು

ಯೋಸು (ದಕ್ಷಿಣ ಕೊರಿಯ): ಕೊರಿಯ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ನ ಎರಡನೇ ಸುತ್ತಿನಲ್ಲಿ ಸೋಲನುಭವಿಸಿರುವ ಭಾರತೀಯ ಆಟಗಾರ ಎಚ್.ಎಸ್. ಪ್ರಣಯ್ ಕೂಟದಿಂದ ಹೊರಬಿದ್ದಿದ್ದಾರೆ.

ದಕ್ಷಿಣ ಕೊರಿಯದ ಯೋಸು ನಗರದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ, ಗುರುವಾರ ಪ್ರಣಯ್ರನ್ನು ಹಾಂಕಾಂಗ್ನ ಲೀ ಚೋಕ್ ಯಿಯು 21-15, 21-19, 21-18 ಗೇಮ್ಗಳಿಂದ ಸೋಲಿಸಿದರು. ಜಿದ್ದಾಜಿದ್ದಿನ ಹೋರಾಟದಲ್ಲಿ 18ನೇ ವಿಶ್ವ ರ್ಯಾಂಕಿಂಗ್ನ ಲೀ ಚೋಕ್ ಯಿಯು, 10ನೇ ರ್ಯಾಂಕಿಂಗ್ನ ಪ್ರಣಯ್ರನ್ನು ಸೋಲಿಸಲು ಒಂದು ಗಂಟೆ ಆರು ನಿಮಿಷ ತೆಗೆದುಕೊಂಡರು.

ಇನ್ನೊಂದು ಪುರುಷರ ಸಿಂಗಲ್ಸ್ ಪಂದ್ಯದಲ್ಲಿ, ಭಾರತದ ಪ್ರಿಯಾಂಶು ರಜಾವತ್ ವಿಶ್ವದ ನಂಬರ್ ನಾಲ್ಕನೇ ಆಟಗಾರ ಜಪಾನ್ನ ಕೊಡೈ ನರವೊಕರಿಗೆ ತೀವ್ರ ಪ್ರತಿರೋಧ ತೋರಿದರಾದರೂ, ಅಂತಿಮವಾಗಿ 14-21, 21-18, 17-21 ಗೇಮ್ಗಳಿಂದ ಪರಾಭವಗೊಂಡರು.

ಮಹಿಳೆಯರ ಡಬಲ್ಸ್ನ ಎರಡನೇ ಸುತ್ತಿನಲ್ಲಿ ಭಾರತದ ತ್ರೀಸಾ ಜೋಲಿ ಮತ್ತು ಗಾಯತ್ರಿ ಗೋಪಿಚಂದ್ ಎರಡನೇ ಶ್ರೇಯಾಂಕದ ದಕ್ಷಿಣ ಕೊರಿಯದ ನಾ ಹಾ ಬಯೇಕ್ ಮತ್ತು ಹೀ ಸೊ ಲೀ ಅವರಿಗೆ ಸರಿಸಾಟಿಯಾಗಲಿಲ್ಲ. ಅವರು 33 ನಿಮಿಷಗಳಲ್ಲಿ 11-21, 4-21 ಗೇಮ್ಗಳಿಂದ ಸೋಲನುಭವಿಸಿದರು.

ಮಿಶ್ರ ಡಬಲ್ಸ್ನಲ್ಲೂ ಭಾರತ ಹಿನ್ನಡೆ ಅನುಭವಿಸಿತು. ಭಾರತದ ರೋಹನ್ ಕಪೂರ್ ಮತ್ತು ಸಿಕ್ಕಿ ರೆಡ್ಡಿ, ಚೀನಾದ ಝೆ ಯಾನ್ ಫೆಂಗ್ ಮತ್ತು ಪಿಂಗ್ ಡೊಂಗ್ ಹುವಾಂಗ್ ಜೋಡಿಯ ವಿರುದ್ಧ 15-21, 12-21 ಗೇಮ್ಗಳಿಂದ ಸೋಲನುಭವಿಸಿದರು.

ಭಾರತದ ಒಲಿಂಪಿಕ್ ಪದಕ ವಿಜೇತ ಆಟಗಾರರಾದ ಪಿ.ವಿ. ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ ಸಿಂಗಲ್ಸ್ಗಳಲ್ಲಿ ಈಗಾಗಲೇ ಮೊದಲ ಸುತ್ತಿನಲ್ಲೇ ಪರಾಭವಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X