Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಇಸ್ರೋದ ಬಾಹ್ಯಾಕಾಶ ಕಾರ್ಯಕ್ರಮಗಳ...

ಇಸ್ರೋದ ಬಾಹ್ಯಾಕಾಶ ಕಾರ್ಯಕ್ರಮಗಳ ಖಾಸಗೀಕರಣ: 20 ಕಂಪನಿಗಳಿಂದ ಬಿಡ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ27 July 2023 8:46 PM IST
share
ಇಸ್ರೋದ ಬಾಹ್ಯಾಕಾಶ ಕಾರ್ಯಕ್ರಮಗಳ ಖಾಸಗೀಕರಣ: 20 ಕಂಪನಿಗಳಿಂದ ಬಿಡ್ ಸಲ್ಲಿಕೆ

ಬೆಂಗಳೂರು: ತನ್ನ ಸಣ್ಣ ಉಪಗ್ರಹ ಉಡಾವಣಾ ರಾಕೆಟ್ ಅನ್ನು ನಿರ್ಮಿಸಲು ಬಿಡ್ಗಳನ್ನು ಆಹ್ವಾನಿಸುವ ಮೂಲಕ ತನ್ನ ಬಾಹ್ಯಾಕಾಶ ಕಾರ್ಯಕ್ರಮದ ಭಾಗಶಃ ಖಾಸಗೀಕರಣಕ್ಕೆ ಭಾರತದ ಸರಕಾರದ ಪ್ರಯತ್ನದಲ್ಲಿ 20 ಕಂಪನಿಗಳು ಆರಂಭಿಕ ಆಸಕ್ತಿಯನ್ನು ವ್ಯಕ್ತಪಡಿಸಿವೆ ಎಂದು ಪ್ರಕ್ರಿಯೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿರುವ ಅಧಿಕಾರಿಯೋರ್ವರನ್ನು ಉಲ್ಲೇಖಿಸಿ Reuters ಸುದ್ದಿಸಂಸ್ಥೆ ವರದಿ ಮಾಡಿದೆ.

ಭಾರತದ ಸಣ್ಣ ಉಪಗ್ರಹ ಉಡಾವಣಾ ವಾಹನ (ಎಸ್ಎಸ್ಎಲ್ವಿ)ವನ್ನು ಇಸ್ರೋ ಅಭಿವೃದ್ಧಿಗೊಳಿಸಿದ್ದು,ಅದು ತನ್ನ ಮೊದಲ ಉಪಗ್ರಹ ಉಡಾವಣೆಯನ್ನು ಫೆಬ್ರವರಿಯಲ್ಲಿ ಯಶಸ್ವಿಯಾಗಿ ನಡೆಸಿತ್ತು.

ಎಸ್ಎಸ್ಎಲ್ವಿ ಅನ್ನು 500 ಕೆ.ಜಿ (1,102 ಪೌಂಡ್)ವರೆಗಿನ ತೂಕದ ಉಪಗ್ರಹಗಳ ಉಡಾವಣೆಗಾಗಿ ಕಡಿಮೆ ವೆಚ್ಚದ ಸಾಧನವನ್ನಾಗಿ ವಿನ್ಯಾಸಗೊಳಿಸಲಾಗಿತ್ತು. ಸಂವಹನಗಳು ಮತ್ತು ಡೇಟಾಕ್ಕಾಗಿ ಉಪಗ್ರಹಗಳ ಸಮೂಹಗಳ ಉಡಾವಣೆಗಾಗಿ ಹೆಚ್ಚುತ್ತಿರುವ ಮಾರುಕಟ್ಟೆಯ ಲಾಭವನ್ನು ಪಡೆದುಕೊಳ್ಳುವುದು ಎಸ್ಎಸ್ಎಲ್ವಿ ನಿರ್ಮಾಣದ ಉದ್ದೇಶವಾಗಿದೆ. ಈಗ ಸ್ಪೇಸ್ಎಕ್ಸ್ ಮತ್ತು ಪ್ರತಿಸ್ಪರ್ಧಿ ಕಂಪನಿಗಳು ಇಂತಹ ಉಪಗ್ರಹಗಳ ಉಡಾವಣೆಯಲ್ಲಿ ತೊಡಗಿಕೊಂಡಿವೆ.

ಪ್ರಧಾನಿ ನರೇಂದ್ರ ಮೋದಿಯವರ ನೀತಿ ಅಭಿಯಾನದಡಿ ಭಾರತವು ಉಪಗ್ರಹ ಉಡಾವಣೆ ಮತ್ತು ಇತರ ಬಾಹ್ಯಾಕಾಶ ವ್ಯವಹಾರಗಳಲ್ಲಿ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿರುವ ನಾಸಾದ ಹೆಜ್ಜೆಗಳನ್ನು ಅನುಸರಿಸುತ್ತಿದೆ.

ಈ ನೀತಿಯಡಿ ಎಸ್ಎಸ್ಎಲ್ವಿ ರಾಕೆಟ್ ಕಾರ್ಯಕ್ರಮದ ತಯಾರಿಕೆ ಮತ್ತು ಅಭಿವೃದ್ಧಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಬಿಡ್ ಅಂತಹ ಮೊದಲ ಖಾಸಗೀಕರಣವಾಗಿದೆ.

ಭಾರತದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬಾಹ್ಯಾಕಾಶ ನಿಯಂತ್ರಣ ಸಂಸ್ಥೆ ನ್ಯಾಷನಲ್ ಸ್ಪೇಸ್ ಪ್ರಮೋಷನ್ ಆ್ಯಂಡ್ ಆಥರೈಸೇಷನ್ ಸೆಂಟರ್ (ಇನ್-ಸ್ಪೇಸ್) ಜು.11ರಂದು ತಮ್ಮ ಆಸಕ್ತಿಯನ್ನು ದಾಖಲಿಸಲು ಅರ್ಹ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ಪ್ರಕ್ರಿಯೆಗೆ ಚಾಲನೆ ನೀಡಿತ್ತು.

20 ಕಂಪನಿಗಳು ರಾಕಟ್ ಕಾರ್ಯಕ್ರಮದಲ್ಲಿ ‘ಆಸಕ್ತಿಯ ಅಭಿವ್ಯಕ್ತಿ (ಇಒಐ)’ಗಳನ್ನು ಸಲ್ಲಿಸಿವೆ ಎಂದು ಇನ್-ಸ್ಪೇಸ್ ಅಧ್ಯಕ್ಷ ಪವನ್ ಗೊಯೆಂಕಾ ಸುದ್ದಿಸಂಸ್ಥೆಗೆ ತಿಳಿಸಿದರು.

ಇನ್-ಸ್ಪೇಸ್ ಎರಡು ವಾರಗಳಲ್ಲಿ ಈ 20 ಅರ್ಜಿದಾರರೊಂದಿಗೆ ಪೂರ್ವ-ಇಒಐ ಸಮಾಲೋಚನೆಗಳನ್ನು ನಡೆಸಲಿದೆ ಎಂದು ಹೇಳಿದ ಅವರು,ಕಂಪನಿಗಳನ್ನು ಹೆಸರಿಸಲಿಲ್ಲ.

ಬಿಡ್ ಸಲ್ಲಿಕೆಗೆ ಅರ್ಹರಾಗಲು ಕಂಪನಿಗಳು ಲಾಭದಲ್ಲಿರಬೇಕು ಮತ್ತು ಬಿಡ್ಡರ್ಗಳ ಕೂಟದಲ್ಲಿ ಅಗ್ರ ಬಿಡ್ಡರ್ ಕನಿಷ್ಠ ಐದು ವರ್ಷಗಳ ತಯಾರಿಕೆ ಅನುಭವವನ್ನು ಮತ್ತು 4,00 ಕೋ.ರೂ.ಗಳ ವಾರ್ಷಿಕ ಆದಾಯವನ್ನು ಹೊಂದಿರಬೇಕು.

ಮುಂದಿನ ಐದು ದಶಕದೊಳಗೆ ಜಾಗತಿಕ ಉಪಗ್ರಹ ಉಡಾವಣೆ ಮಾರುಕಟ್ಟೆಯಲ್ಲಿ ತನ್ನ ಪಾಲನ್ನು ಐದು ಪಟ್ಟು ಹೆಚ್ಚಿಸುವ ಗುರಿಯನ್ನು ಭಾರತವು ಹೊಂದಿದೆ.

ಎಸ್ಎಸ್ಎಲ್ವಿ ಕಾರ್ಯಕ್ರಮಕ್ಕಾಗಿ ವಿಜೇತ ಬಿಡ್ಡರ್ಗೆ ಸಣ್ಣ ಉಪಗ್ರಹ ಉಡಾವಣೆ ವ್ಯವಹಾರವನ್ನು ಅಭಿವೃದ್ಧಿಗೊಳಿಸಲು ಮತ್ತು ಇಂತಹ ಉಡಾವಣೆಗಳಿಗಾಗಿ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿಸಲು ಸಾಧ್ಯವಾಗುತ್ತದೆ ಎಂದು ಇನ್-ಸ್ಪೇಸ್ ನಿರೀಕ್ಷಿಸಿದೆ ಎಂದು ಗೊಯೆಂಕಾ ಹಿಂದೆ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X