Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಜಗತ್ತಿಗೆ ಇನ್ನಷ್ಟು ತೀವ್ರ ಉಷ್ಣಮಾರುತದ...

ಜಗತ್ತಿಗೆ ಇನ್ನಷ್ಟು ತೀವ್ರ ಉಷ್ಣಮಾರುತದ ಅಪಾಯ ಎದುರಾಗಲಿದೆ: ವಿಶ್ವಸಂಸ್ಥೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ18 July 2023 10:58 PM IST
share
ಜಗತ್ತಿಗೆ ಇನ್ನಷ್ಟು ತೀವ್ರ ಉಷ್ಣಮಾರುತದ ಅಪಾಯ ಎದುರಾಗಲಿದೆ: ವಿಶ್ವಸಂಸ್ಥೆ ಎಚ್ಚರಿಕೆ
World at risk of more extreme heat waves: UN warns

ಜಿನೆವಾ: ಉತ್ತರ ಗೋಳಾರ್ಧದಾದ್ಯಂತ ದೇಶಗಳು ಬಿಸಿಗಾಳಿಯ ಹೊಡೆತಕ್ಕೆ ತತ್ತರಿಸುತ್ತಿರುವಂತೆಯೇ, ಇನ್ನಷ್ಟು ತೀವ್ರ ಉಷ್ಣಮಾರುತದ ಪ್ರಹಾರಕ್ಕೆ ಜಾಗತಿಕ ಸಮುದಾಯ ಸಿದ್ಧವಾಗಬೇಕಿದೆ ಎಂದು ವಿಶ್ವಸಂಸ್ಥೆ ಮಂಗಳವಾರ ಎಚ್ಚರಿಸಿದೆ.

ಉತ್ತರ ಅಮೆರಿಕಾದಿಂದ ಯುರೋಪ್ ಮತ್ತು ಏಶ್ಯಾ ಖಂಡದವರೆಗೂ ಸುಡುಬಿಸಿಲಿನ ತಾಪ ಹೆಚ್ಚಲಿದ್ದು ಜನತೆ ಸಾಧ್ಯವಾದಷ್ಟು ನೀರು ಕುಡಿಯುವ ಜತೆಗೆ ಸುಡು ಬಿಸಿಲಿನಿಂದ ದೂರ ಇರುವಂತೆ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ. ಉಷ್ಣಮಾರುತದ ತಾಪ ಮತ್ತಷ್ಟು ತೀವ್ರಗೊಳ್ಳಲಿದ್ದು ಜನತೆ ಇದಕ್ಕೆ ಸನ್ನದ್ಧರಾಗಬೇಕಿದೆ.

ಹೆಚ್ಚುತ್ತಿರುವ ನಗರೀಕರಣ, ತೀವ್ರ ತಾಪಮಾನದ ಸಮಸ್ಯೆಯಿಂದ ಅನಾರೋಗ್ಯದ ಅಪಾಯ ತ್ವರಿತ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಸಂಕ್ಷಿಪ್ತವಾಗಿ ಹೇಳುವುದಾರೆ, ಪ್ರತೀ 2ರಿಂದ 7 ವರ್ಷದ ಅವಧಿಯಲ್ಲಿ ಸಂಭವಿಸುವ ಹವಾಮಾನ ವೈಪರೀತ್ಯವಾದ ಎಲ್‍ನಿನೊ ಮತ್ತಷ್ಟು ಬೇಗ ಮತ್ತು ತೀವ್ರ ರೂಪದಲ್ಲಿ ಮರುಕಳಿಸಬಹುದು ಎಂದು ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆಯ ಹಿರಿಯ ಸಲಹೆಗಾರ ಜಾನ್ ನೈರ್ನ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ.

ಉತ್ತರ ಗೋಳಾರ್ಧದಲ್ಲಿ 1980ರ ಬಳಿಕ ಬಿಸಿಗಾಳಿಯ ಪ್ರಮಾಣ 6 ಪಟ್ಟು ಹೆಚ್ಚಿದೆ. ಈ ಪ್ರವೃತ್ತಿ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಉಷ್ಣಮಾರುತವು ಮಾನವರ ಆರೋಗ್ಯ ಮತ್ತು ಜೀವನೋಪಾಯದ ಮೇಲೆ ಗಂಭೀರ ಪರಿಣಾಮಕ್ಕೆ ಕಾರಣವಾಗುತ್ತಿದೆ. ಹಗಲಿನ ತಾಪಮಾನದಲ್ಲಿ ಮಾತ್ರವಲ್ಲ ರಾತ್ರಿಯ ತಾಪಮಾನದಲ್ಲೂ ಭಾರೀ ಹೆಚ್ಚಳವಾಗುತ್ತಿದೆ. ಹಗಲು-ರಾತ್ರಿಯ ತೀವ್ರ ತಾಪಮಾನವು ಮನುಷ್ಯರ ಆರೋಗ್ಯಕ್ಕೆ ಅಪಾಯಕಾರಿಯಾಗಿದೆ.

ಯಾಕೆಂದರೆ ನಿರಂತರ ಉಷ್ಣತೆಯಿಂದ ಚೇತರಿಸಿಕೊಳ್ಳಲು ಮಾನವ ದೇಹಕ್ಕೆ ಅವಕಾಶ ದೊರಕುವುದಿಲ್ಲ. ಇದು ಹೃದಯಾಘಾತ ಮತ್ತು ಸಾವಿ ನ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗುತ್ತದೆ. 2021ರಲ್ಲಿ ಇಟಲಿಯ ಸಿಸಿಲಿಯಲ್ಲಿ ದಾಖಲಾದ 48.8 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದುವರೆಗೆ ಯುರೋಪ್‍ನಲ್ಲಿನ ದಾಖಲೆ ತಾಪಮಾನವಾಗಿದ್ದು ಈ ದಾಖಲೆಯೂ ಮುರಿಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎಂದು ವಿಶ್ವ ಹವಾಮಾನ ಸಂಸ್ಥೆ ಹೇಳಿದೆ.

ಮಾನವ ಪ್ರೇರಿತ ಹವಾಮಾನ ಬದಲಾವಣೆಯು ಶಾಖದ ಅಲೆಗಳನ್ನು ಉಲ್ಬಣಗೊಳಿಸುತ್ತದೆ, ಅಧಿಕ ತಾಪಮಾನ ಮತ್ತು ಬಿಸಿ ಹವಾಮಾನ ವ್ಯವಸ್ಥೆ ದೀರ್ಘ ಕಾಲದವರೆಗೆ ಉಳಿದುಕೊಳ್ಳಲು ಕಾರಣವಾಗುತ್ತದೆ. ಇಂಗಾಲ ಇಂಧನಗಳ ಬಳಕೆ ನಿಲ್ಲಿಸಿ ಎಲ್ಲಾ ಕ್ಷೇತ್ರಗಳನ್ನೂ ವಿದ್ಯುನ್ಮಾನಗೊಳಿಸುವುದು ಇದಕ್ಕೆ ಇರುವ ಸರಳ ಪರಿಹಾರವಾಗಿದೆ ಎಂದು ವಿಶ್ವ ಹವಾಮಾನ ಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X