Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಜನಪ್ರತಿನಿಧಿಗಳ ಭಿನ್ನಾಭಿಪ್ರಾಯದಿಂದ...

ಜನಪ್ರತಿನಿಧಿಗಳ ಭಿನ್ನಾಭಿಪ್ರಾಯದಿಂದ ಪಾಳು ಬಿದ್ದಿರುವ ಬಾಬೂಜಿ ಭವನ

ಸಿ.ವಿ.ನಾಗರಾಜ್, ಕೋಲಾರಸಿ.ವಿ.ನಾಗರಾಜ್, ಕೋಲಾರ15 Jan 2026 2:28 PM IST
share
ಜನಪ್ರತಿನಿಧಿಗಳ ಭಿನ್ನಾಭಿಪ್ರಾಯದಿಂದ ಪಾಳು ಬಿದ್ದಿರುವ ಬಾಬೂಜಿ ಭವನ
ಪೂರ್ಣಗೊಂಡು ವರ್ಷವಾದರೂ ಉದ್ಘಾಟನೆಯಾಗದ ಭವನ

ಕೋಲಾರ : ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ ಒಳ ಜಗಳದಿಂದಾಗಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣವಾದ ಡಾ.ಬಾಬು ಜಗಜೀವನ್ ರಾಮ್ ಭವನ ಪೂರ್ಣಗೊಂಡು ವರ್ಷವಾದರೂ ಉದ್ಘಾಟನೆಗೊಳ್ಳದೆ ಪಾಳುಕೊಂಪೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗಳಿಗೆ ಗ್ರಾಸವಾಗಿದೆ.

ದಲಿತ ಸಮುದಾಯದ ಒಕ್ಕೊರಲ ಒತ್ತಾಯಕ್ಕೆ ಮಣಿದು ಎರಡು ದಶಕಗಳ ಹಿಂದೆ, ಅಂದು ಕೇಂದ್ರ ಸಚಿವರಾಗಿದ್ದ ಕೆ.ಎಚ್.ಮುನಿಯಪ್ಪ ಅವರ ಪ್ರಯತ್ನದ ಫಲವಾಗಿ 2007ರಲ್ಲಿ ಜಗಜೀವನ್ ರಾಮ್ ಭವನಕ್ಕೆ ರಾಜ್ಯ ಸರಕಾರ 4 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ, ನಿವೇಶನ ಇಲ್ಲದ ಕಾರಣ ಭವನ ನಿರ್ಮಾಣ ಸಾಧ್ಯವಾಗಿಲ್ಲ. ಸಮಾಜ ಕಲ್ಯಾಣ ಇಲಾಖೆಗೆ ಬಂದ 4 ಕೋಟಿ ರೂ.ಗಳನ್ನು ಬ್ಯಾಂಕ್‌ನಲ್ಲಿ ಠೇವಣಿ ಇಡಲಾಯಿತು.

ಇತ್ತ ನಿವೇಶನ ಹುಡುಕಾಟ ವರ್ಷಗಟ್ಟಲೇ ಸಾಗುತ್ತಿದ್ದರೆ ಮತ್ತೊಂದೆಡೆ ಬ್ಯಾಂಕ್ ನಲ್ಲಿ ಇಡಲಾಗಿದ್ದ ಹಣಕ್ಕೆ ಬಡ್ಡಿ ಬೆಳೆದು, ಅದು ನಿವೇಶನ ಸಿಗುವ ವೇಳೆಗೆ 6 ಕೋಟಿ ರೂ. ಆಯಿತು. ಅಂತಿಮವಾಗಿ ಕೋಲಾರ ಹೊರವಲಯದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಒಂದು ಎಕರೆ ಭೂಮಿ ಬಾಬು ಜಗಜೀವನ್ ರಾಮ್ ಭವನಕ್ಕೆ ಮೀಸಲಿಡಲಾಯಿತು. ಆದರೆ, ಕೆಲವೇ ದಿನಗಳಲ್ಲಿ ಅದೇ ಜಮೀನಿನಲ್ಲಿ ಅರ್ಧ ಎಕರೆ ಬೇರೊಂದು ನಿಗಮಕ್ಕೆ ನೀಡಿದ್ದು, ಕೊನೆಗೆ ಬಾಬೂಜಿ ಭವನ ನಿರ್ಮಾಣಕ್ಕೆ ಅರ್ಧ ಎಕರೆ ಅಷ್ಟೇ ಉಳಿಯಿತು.

ಅಂತೂ ಇಂತೂ ಕಟ್ಟಡ ನಿರ್ಮಾಣಕ್ಕೆ ಶುಭಗಳಿಗೆ ಬಂತು: ಅಂತೂ ಇಂತೂ ನಿವೇಶನ ಸಿಕ್ಕ ನಂತರ ಕೆ.ಎಚ್.ಮುನಿಯಪ್ಪನವರೇ ಉದ್ಘಾಟನೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು. ಆರಂಭದಿಂದಲೂ ಮಂದಗತಿಯಲ್ಲೇ ಸಾಗಿದ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ತಲುಪಿತು. ಒಳಾಂಗಣದಲ್ಲಿ ಟೈಲ್ಸ್ ಕೆಲಸ ಹಾಗೂ ಬಣ್ಣದ ಕೆಲಸ ಬಾಕಿ ಇತ್ತು. ಅಪೂರ್ಣ ಸ್ಥಿತಿಯಲ್ಲಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸುವ ವೇಳೆ ಉದ್ಘಾಟನೆ ಮಾಡಲು ತಯಾರಿ ನಡೆಸಲಾಗಿತ್ತು. ಭವನದ ನಿರ್ಮಾಣಕ್ಕಾಗಿ ಶ್ರಮಿಸಿರುವ ಕೆ.ಎಚ್.ಮುನಿಯಪ್ಪ ಅವರನ್ನು ಆಹ್ವಾನಿಸಿ ಪ್ರತ್ಯೇಕ ಕಾರ್ಯಕ್ರಮ ರೂಪಿಸಿ ಭವನ ಉದ್ಘಾಟನೆ ಮಾಡಬೇಕೆಂದು ದಲಿತ ಸಮುದಾಯದ ಮುಖಂಡರು ಪಟ್ಟು ಹಿಡಿದ ಕಾರಣ ಮುಖ್ಯಮಂತ್ರಿಯವರನ್ನು ಉದ್ಘಾಟನಾ ಪಟ್ಟಿಯಿಂದ ಕೈ ಬಿಡಲಾಯಿತು.

ಹೀಗೆ ಭವನ ಅಂದಾಜು 8 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬಾಬೂಜಿ ಭವನ ಉದ್ಘಾಟನಾ ಭಾಗ್ಯ ಇಲ್ಲದೆ ಗಿಡಗಂಟಿಗಳು ಬೆಳೆದು ನಿಂತಿದೆ. ಅಂದು ಮುಖ್ಯ ಮಂತ್ರಿಯಿಂದ ಉದ್ಘಾಟನೆಗೊಳ್ಳದೆ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಅನಾಥವಾಗಿ ಬಿದ್ದಿದೆ ಎಂದು ದಲಿತ ಮುಖಂಡರು ಬೇಸರವ್ಯಕ್ತಪಡಿಸಿದ್ದಾರೆ

ಕೋಟ್ಯಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿ ಭವನ ಕಟ್ಟಿದರೂ ರಾಜಕೀಯ ಮುಖಂಡರ ಕಿತ್ತಾಟಕ್ಕೆ ಅಂಜಿದ ಜಿಲ್ಲಾಡಳಿತ ಬಡವರ ಬಾಬೂಜಿ ಭವನ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸದೆ ಇರುವುದು ವಿಪರ್ಯಾಸವೇ ಸರಿ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಡಾ.ಬಾಬು ಜಗಜೀವನ್ ರಾಮ್ ಭವನದ ಎಲ್ಲ ಕೆಲಸಗಳು ಪೂರ್ಣಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಮುದಾಯದ ಹಿರಿಯರು ಹಾಗೂ ಆಹಾರ ಸಚಿವ ಕೆ.ಎಚ್.ಮುನಿಯಪ್ಪನವರು, ಜಿಲ್ಲೆಯ ಎಲ್ಲ ಶಾಸಕರು ಒಂದೇ ದಿನ ಕೂಡಿ ಬರುವ ಗಳಿಗೆ ಇನ್ನೂ ಬಂದಿಲ್ಲ, ಈಗಲೂ ಪ್ರಯತ್ನ ಮಾಡುತ್ತಲೇ ಇದ್ದೇವೆ. ಶೀಘ್ರದಲ್ಲೇ ಕಾರ್ಯಕ್ರಮ ರೂಪಿಸುವ ಸುದಿನ ಬರುವ ನಿರೀಕ್ಷೆ ಇದೆ.

-ಶ್ರೀನಿವಾಸ್, ಜಂಟಿ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ

ಕೋಲಾರ ನಗರದ ಹೊರವಲಯದ ಟಮಕದ ಕೋಲಾರ ನಗರಾಭಿವೃದ್ದಿ ಪ್ರಾಧಿಕಾರದ ದೇವರಾಜ ಅರಸು ಬಡಾವಣೆಯಲ್ಲಿರುವ ಡಾ.ಬಾಬು ಜಗಜೀವನ್ ರಾಮ್ ಭವನ ಪೂರ್ಣಗೊಂಡು ವರ್ಷವಾದರೂ ಜನಪ್ರತಿನಿಧಿಗಳ ಭಿನ್ನಾಭಿಪ್ರಾಯದಿಂದ ಉದ್ಘಾಟನೆ ವಿಳಂಬ ಸರಿಯಲ್ಲ, ಇದು ದಲಿತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ. ಜಿಲ್ಲಾಡಳಿತ ಆದಷ್ಟು ಬೇಗ ಸಂಬಂಧಪಟ್ಟ ಜನಪ್ರತಿನಿಧಿಗಳ ಮನವೊಲಿಸಿ ಕಟ್ಟಡವನ್ನು ಉದ್ಘಾಟಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಸಲಿ.

-ಹಾರೋಹಳ್ಳಿ ರವಿ, ಮುಖಂಡ, ದಲಿತ ಸಂಘರ್ಷ ಸಮಿತಿ, ಕೋಲಾರ

share
ಸಿ.ವಿ.ನಾಗರಾಜ್, ಕೋಲಾರ
ಸಿ.ವಿ.ನಾಗರಾಜ್, ಕೋಲಾರ
Next Story
X