Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಯಚೂರು ಉತ್ಸವಕ್ಕೆ ಭರದ ಸಿದ್ಧತೆ

ರಾಯಚೂರು ಉತ್ಸವಕ್ಕೆ ಭರದ ಸಿದ್ಧತೆ

ಬಾವಸಲಿ,ರಾಯಚೂರುಬಾವಸಲಿ,ರಾಯಚೂರು15 Jan 2026 2:40 PM IST
share
ರಾಯಚೂರು ಉತ್ಸವಕ್ಕೆ ಭರದ ಸಿದ್ಧತೆ
ಗೋಡೆಗಳಿಗೆ ಕಲಾವಿದರಿಂದ ಸಿಂಗಾರ

ಬರೋಬ್ಬರಿ ಎರಡು ದಶಕಗಳ ಬಳಿಕ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾ ಉತ್ಸವ ಆಯೋಜಿಸಿದ್ದು ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಸಿದ್ಧತೆ ಭರದಿಂದ ಸಾಗಿದೆ. ನಗರದ ಪ್ರಮುಖ ರಸ್ತೆಗಳ ಗೋಡೆಗಳು ಬಣ್ಣಬಣ್ಣದಿಂದ ಸಿಂಗಾರಗೊಂಡಿದ್ದು ಜನರನ್ನು ಆಕರ್ಷಿಸುತ್ತಿವೆ.

ನಗರದಲ್ಲಿ ಜ.29, 30 ಹಾಗೂ 31ರಂದು ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಆಯೋಜಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲಾಧಿಕಾರಿ ನಿತಿಶ್ ಕೆ. ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಮೂರು ಪೂರ್ವ ಸಿದ್ಧತಾ ಸಭೆ ನಡೆಸಲಾಗಿದೆ. 22 ಸಮಿತಿಗಳನ್ನು ರಚನೆ ಮಾಡಿದ್ದು, ನಗರದಲ್ಲಿ ನಡೆಯುತ್ತಿದ್ದರೂ ಜಿಲ್ಲಾ ಕೇಂದ್ರಕ್ಕೆ ಸೀಮಿತವಾಗದಿರಲಿ ಎಂದು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜೊತೆಗೂ ಸಭೆ ಮಾಡಲಾಗಿದೆ.

ಮೂರು ದಿನಗಳ ಉತ್ಸವ ವೀಕ್ಷಣೆಗೆ ಜಿಲ್ಲೆಯ ನಾನಾ ಕಡೆಯಿಂದ ಅನೇಕ ಜನ ಆಗಮಿಸುವುದರಿಂದ ಸ್ವಚ್ಛತೆಗೂ ಆದ್ಯತೆ ಕೊಡಲಾಗುತ್ತಿದೆ. ಗುಟ್ಕಾ, ಪಾನ್ ಮಸಾಲಾ ಜಗಿದು ಹಾಳುಮಾಡಿದ್ದ ಸಾರ್ವಜನಿಕ ರಸ್ತೆಯ ಗೋಡೆಗಳು ಈಗ ಬಣ್ಣ ಬಣ್ಣದ ಚಿತ್ತಾರದಲ್ಲಿವೆ. ಪರಿಸರ ಸಂರಕ್ಷಣೆ, ಸ್ವಚ್ಛತೆ ಮಂತ್ರ, ಸರಕಾರದ ನಾನಾ ಯೋಜನೆಗಳ ಬಗ್ಗೆ ಜಾಗೃತಿ ಸಂದೇಶ, ಶ್ರೇಷ್ಠ ಕ್ರೀಡಾಪಟುಗಳು, ಸಾಹಿತಿಗಳು, ನಾನಾ ರಂಗದ ದಿಗ್ಗಜರ ಚಿತ್ರಗಳನ್ನು ಬಿಡಿಲಾಗುತ್ತಿದೆ. ಮುಖ್ಯ ರಸ್ತೆ ಮೂಲಕವೇ ವಾಹನ ಸವಾರರು, ದಾರಿಹೋಕರು ಸಾಗುವುದರಿಂದ ಪ್ರಮುಖ ಮಾರ್ಗಗಳ ಗೋಡೆಗಳಲ್ಲಿ ಚಿತ್ರ ಬಿಡಿಸಲು ಪಾಲಿಕೆಯಿಂದ ಯೋಜನೆ ರೂಪಿಸಿಕೊಳ್ಳಲಾಗಿದೆ.

ನಗರದ ಸ್ಟೇಷನ್ ರಸ್ತೆಯಲ್ಲಿನ ಮಹಿಳಾ ಕಾಲೇಜು ಆವರಣದ ಗೋಡೆ, ಟ್ಯಾಗೋರ್ ಕಾಲೇಜ್ ಕಾಂಪೌಂಡ್, ಜಿಲ್ಲಾಧಿಕಾರಿ ನಿವಾಸದ ಗೋಡೆ, ಮಂತ್ರಾಲಯ ರಸ್ತೆಯಲ್ಲಿನ ಆರ್ಟಿಒ ಕಚೇರಿ, ಕೆಕೆಆರ್ಟಿಸಿ ಡಿಪೋ ಆವರಣ ಗೋಡೆ, ಮಹಿಳಾ ಕಾಲೇಜಿನಿಂದ ರೈಲ್ವೆ ಕೆಳಸೇತುವೆ ಕೊನೆವರೆಗಿರುವ ಗೋಡೆ, ಬಸವ ವೃತ್ತದಲ್ಲಿನ ನಾನಾ ಗೋಡೆಗಳು ಹುಬ್ಬಳ್ಳಿ-ಧಾರವಾಡದಿಂದ ಬಂದಿರುವ ಚಿತ್ರ ಕಲಾವಿದರಿಂದ ಹೊಸ ರೂಪ ಪಡೆದುಕೊಳ್ಳುತ್ತಿವೆ.

ವೈವಿಧ್ಯತೆ ಕಾಪಾಡಲು ಪ್ರತಿ ಗೋಡೆಯಲ್ಲೂ ಒಂದೊಂದು ವಿಷಯ ಆಧರಿಸಿ ಚಿತ್ರಗಳನ್ನು ಬಿಡಿಸುತ್ತಿರುವುದು ವಿಶೇಷವಾಗಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಪ್ರಸ್ತುತ 10 ಲಕ್ಷ ರೂ. ಅನುದಾನ ಬಳಕೆ ಮಾಡಿಕೊಂಡು ವಾಲ್ ಪೇಂಟಿಂಗ್ ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್ ) ಬಳಸಿಕೊಂಡು ಅಂದಾಜು 2-3 ಕೋಟಿ ರೂ. ವೆಚ್ಚದಡಿ ನಗರದ ಒಳ ರಸ್ತೆಗಳಲ್ಲಿರುವ ಖಾಸಗಿ, ಸರಕಾರಿ ಕಚೇರಿಗಳ ಆವರಣ ಗೋಡೆಗಳಿಗೂ ಬಣ್ಣ ಬಳಿಯಲು ಯೋಜಿಸಲಾಗುತ್ತಿದೆ. ಜನವರಿ 20ರೊಳಗೆ ಬಣ್ಣ ಬಳಿಯುವ ಕಾಮಗಾರಿ ಮುಗಿಸುವ ಗುರಿ ಹೊಂದಿದ್ದಾರೆ. ಒಟ್ಟಿನಲ್ಲಿ 2006 ರಲ್ಲಿ ಅಂದಿನ ಶಾಸಕ ಎ.ಪಾಪಾರೆಡ್ಡಿ ಅವಧಿಯಲ್ಲಿ ನಡೆದ ಜಿಲ್ಲಾ ಉತ್ಸವ ಬಳಿಕ ಅತಿವೃಷ್ಟಿ, ಅನಾವೃಷ್ಟಿ ಸೇರಿ ಅನೇಕ ಕಾರಣಗಳಿಂದ ನಡೆದಿರಲಿಲ್ಲ. ಈಗ ಜಿಲ್ಲಾಧಿಕಾರಿ ನಿತಿಶ್ ಕೆ, ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ. ಅವರ ಜೋಡಿ ಅನೇಕ ಅಭಿವೃದ್ಧಿ ಕಾರ್ಯಗಳ ಜೊತೆಗೆ ಈಗ ಜಿಲ್ಲಾ ಉತ್ಸವ ಅಚ್ಚುಕಟ್ಟಾಗಿ ನಿರ್ವಹಿಸಲು ಮುಂದಾಗಿದೆ.

ರಾಯಚೂರು ಉತ್ಸವ ಹಿನ್ನೆಲೆಯಲ್ಲಿ ಈಗಾಗಲೇ ರಾಯಚೂರು ಪಟ್ಟಣದ ಸೌಂದರ್ಯೀಕರಣಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ರಸ್ತೆ ವಿಸ್ತರಣೆ, ದುರಸ್ತಿ ಕಾರ್ಯ ನಡೆದಿದ್ದು, ಜನತೆ ಸಹಕಾರ ನೀಡಬೇಕು. ನಗರದ ಎಲ್ಲ ಮುಖ್ಯರಸ್ತೆಗಳು ಸುಂದರವಾಗಿ ಕಾಣುವಂತೆ ಪಾಲಿಕೆ ಕೈಗೊಂಡ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯಬಾರದು. ರಾಯಚೂರು ಸಿಟಿ ಸೇರಿದಂತೆ ಜಿಲ್ಲೆಯ ಎಲ್ಲ ವ್ಯಾಪಾರಸ್ಥರು ಈಗಿನಿಂದಲೇ ರಾಯಚೂರು ಉತ್ಸವದ ಅಲಂಕಾರಕ್ಕೆ ಕಾರ್ಯಯೋಜನೆ ರೂಪಿಸಿ ಸಹಕರಿಸಬೇಕು.

-ಜುಬಿನ್ ಮೊಹಪಾತ್ರ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು.

ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ನಗರದ ರೈಲ್ವೆ ನಿಲ್ದಾಣ, ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಪೋಸ್ಟರ್ ಮತ್ತು ಬ್ಯಾನರ್ ಅಳವಡಿಸಿ ಪ್ರಚಾರ ಕಾರ್ಯಕ್ಕೆ ಒತ್ತು ಕೊಡಲಾಗಿದೆ. ಹೊರಗಡೆಯಿಂದ ಉತ್ಸವಕ್ಕೆ ಆಗಮಿಸುವ ಕಲಾವಿದರು ಮತ್ತು ಇತರರಿಗೆ ಸರಿಯಾದ ರೀತಿಯಲ್ಲಿ ವಸತಿಗೃಹಗಳ ವ್ಯವಸ್ಥೆ ಮಾಡಲು ಸಂಬಂಧಿಸಿದ ಉಪ ಸಮಿತಿಯ ಸದಸ್ಯರಿಗೆ ಸೂಚನೆ ನೀಡಲಾಗಿದೆ.

-ನಿತಿಶ್ ಕೆ. ಜಿಲ್ಲಾಧಿಕಾರಿ, ರಾಯಚೂರು

share
ಬಾವಸಲಿ,ರಾಯಚೂರು
ಬಾವಸಲಿ,ರಾಯಚೂರು
Next Story
X